<p><strong>ಜುನಾಗಡ, ಗುಜರಾತ್</strong>: ಇಲ್ಲಿನ ಅಮರೇಲಿ ಜಿಲ್ಲೆಯಲ್ಲಿ ಸಿಂಹಿಣಿಯ ರಕ್ಷಣಾ ಕಾರ್ಯಾಚರಣೆ ವೇಳೆ ಹಾರಿಸಲಾದ ಅರಿವಳಿಕೆ ಚುಚ್ಚುಮದ್ದು ತಗುಲಿ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.</p>.<p>ಗಿರ್ ಅರಣ್ಯಕ್ಕೆ ಹೊಂದಿಕೊಂಡಿರುವ ನಾನಿ ಮೊನಿಪಾರಿ ಗ್ರಾಮದಲ್ಲಿ 4 ವರ್ಷದ ಬಾಲಕನನ್ನು ಭಾನುವಾರ ಸಿಂಹಿಣಿ ಕೊಂದುಹಾಕಿತ್ತು. ಇದಾದ ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿಯು ಸಿಂಹಿಣಿಯನ್ನು ಸೆರೆಹಿಡಿಯಲು ರಕ್ಷಣಾ ಕಾರ್ಯಾಚರಣೆ ಆರಂಭಿದ್ದರು.</p>.<p class="bodytext">‘ರಕ್ಷಣಾ ತಂಡವು ಹಾರಿಸಿದ ಅರಿವಳಿಕೆ ಚುಚ್ಚುಮದ್ದು ದೂರದಲ್ಲಿ ನಿಂತಿದ್ದ ಅಶ್ರಫ್ ಚೌಹಾಣ್ ಅವರಿಗೆ ತಗುಲಿದೆ. ತಕ್ಷಣವೇ ಅವರನ್ನು ವಿಸವದಾರ್ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಜುನಾಗಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ, ಸೋಮವಾರ ಬೆಳಿಗ್ಗೆ 7 ಗಂಟೆಗೆ ಮೃತಪಟ್ಟಿದ್ದಾರೆ’ ಎಂದು ಜುನಾಗಡ ವನ್ಯಜೀವಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಮ್ ರತನ್ ನಾಲ ಅವರು ತಿಳಿಸಿದ್ದಾರೆ.</p>.<p class="bodytext">‘ಮೃತ ಅಶ್ರಫ್ ಅಮರೇಲಿ ಜಿಲ್ಲೆಯವರಾಗಿದ್ದು, ಅರಣ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಗಸ್ತು ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜುನಾಗಡ, ಗುಜರಾತ್</strong>: ಇಲ್ಲಿನ ಅಮರೇಲಿ ಜಿಲ್ಲೆಯಲ್ಲಿ ಸಿಂಹಿಣಿಯ ರಕ್ಷಣಾ ಕಾರ್ಯಾಚರಣೆ ವೇಳೆ ಹಾರಿಸಲಾದ ಅರಿವಳಿಕೆ ಚುಚ್ಚುಮದ್ದು ತಗುಲಿ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.</p>.<p>ಗಿರ್ ಅರಣ್ಯಕ್ಕೆ ಹೊಂದಿಕೊಂಡಿರುವ ನಾನಿ ಮೊನಿಪಾರಿ ಗ್ರಾಮದಲ್ಲಿ 4 ವರ್ಷದ ಬಾಲಕನನ್ನು ಭಾನುವಾರ ಸಿಂಹಿಣಿ ಕೊಂದುಹಾಕಿತ್ತು. ಇದಾದ ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿಯು ಸಿಂಹಿಣಿಯನ್ನು ಸೆರೆಹಿಡಿಯಲು ರಕ್ಷಣಾ ಕಾರ್ಯಾಚರಣೆ ಆರಂಭಿದ್ದರು.</p>.<p class="bodytext">‘ರಕ್ಷಣಾ ತಂಡವು ಹಾರಿಸಿದ ಅರಿವಳಿಕೆ ಚುಚ್ಚುಮದ್ದು ದೂರದಲ್ಲಿ ನಿಂತಿದ್ದ ಅಶ್ರಫ್ ಚೌಹಾಣ್ ಅವರಿಗೆ ತಗುಲಿದೆ. ತಕ್ಷಣವೇ ಅವರನ್ನು ವಿಸವದಾರ್ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಜುನಾಗಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ, ಸೋಮವಾರ ಬೆಳಿಗ್ಗೆ 7 ಗಂಟೆಗೆ ಮೃತಪಟ್ಟಿದ್ದಾರೆ’ ಎಂದು ಜುನಾಗಡ ವನ್ಯಜೀವಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಮ್ ರತನ್ ನಾಲ ಅವರು ತಿಳಿಸಿದ್ದಾರೆ.</p>.<p class="bodytext">‘ಮೃತ ಅಶ್ರಫ್ ಅಮರೇಲಿ ಜಿಲ್ಲೆಯವರಾಗಿದ್ದು, ಅರಣ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಗಸ್ತು ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>