ವಿಧಾನಸಭೆ ಆವರಣದಲ್ಲೇ ಮದ್ಯದ ಬಾಟಲಿ ಪತ್ತೆಯಾಗಿರುವ ವಿಚಾರವನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಂತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಡಿಜಿಪಿ ಮತ್ತು ಮುಖ್ಯ ಕಾರ್ಯದರ್ಶಿ ತ್ರಿಪುರಾರಿ ಶರಣ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡ ನಿತೀಶ್, ಮದ್ಯ ಸೇವಿಸಿದವರನ್ನು ಪತ್ತೆ ಮಾಡುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಿಗೇ ಬಾಟಲಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.