<p><strong>ಮುಂಬೈ</strong>: ವಿಮಾನ ಅಥವಾ ಹೆಲಿಕಾಪ್ಟರ್ ಅವಘಡಗಳು ಸಂಭವಿಸಿದರೆ ಬದುಕುಳಿಯುವುದು ಭಾರಿ ಕಷ್ಟ. ಏಕೆಂದರೆ, ಭಾರಿ ಸ್ಫೋಟ ಮತ್ತು ಬೆಂಕಿಯ ಕೆನ್ನಾಲಿಗೆ ಆವರಿಸುವುದರಿಂದ ಬದುಕುಳಿಯುವ ಅವಕಾಶ ಬಹಳ ಕಡಿಮೆ ಇರುತ್ತದೆ. ಅಂತಹ ಸಂದರ್ಭದಲ್ಲೂ ಸಾವಿನ ದವಡೆಯಿಂದ ಪಾರಾದ ಕೆಲ ರಾಜಕಾರಣಿಗಳು ಮತ್ತು ಗಣ್ಯರು ಇದ್ದಾರೆ.</p><p>ವಿಮಾನ ಅಪಘಾತ ಸಂಭವಿಸಿಯೂ ಅದೃಷ್ಟವಶಾತ್ ಕೆಲ ರಾಜಕಾರಣಿಗಳು ಬದುಕುಳಿದಿದ್ದಾರೆ. ಆ ಪೈಕಿ ದಿವಂಗತ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಒಬ್ಬರು. 1977ರಲ್ಲಿ ಅಸ್ಸಾಂನಲ್ಲಿ ವಿಶೇಷ ವಿಮಾನ ಪತನಗೊಂಡರೂ ಮೊರಾರ್ಜಿ ದೇಸಾಯಿ ಪ್ರಾಣಾಪಾಯದಿಂದ ಪಾರಾಗಿದ್ದರು.</p><p>2004ರಲ್ಲಿ ಗುಜರಾತ್ನಲ್ಲಿ ಸಂಭವಿಸಿದ ವಿಮಾನ ಅವಘಡದಲ್ಲೂ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ಅಂದಿನ ಕೇಂದ್ರ ಸಚಿವ ಪೃಥ್ವಿರಾಜ್ ಚವಾಣ್ ಮತ್ತು ಕುಮಾರಿ ಸೆಲ್ಜಾ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದರು.</p><p>10 ವರ್ಷಗಳ ಹಿಂದೆ ಟೇಕಾಫ್ ಆದ ಕೆಲವೇ ಸಮಯದಲ್ಲಿ ಹೆಲಿಕಾಪ್ಟರ್ ಎಲೆಕ್ಟ್ರಿಕ್ ವೈರ್ ಸ್ಪರ್ಶಿಸಿ ಸಂಭವಿಸಿದ ಅಪಘಾತದಲ್ಲಿ ಅಂದಿನ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಮತ್ತು ಸಚಿವ ಪ್ರತಾಪ್ ಸಿಂಗ್ ಬಜ್ವಾ ಪಾರಾಗಿದ್ದರು.</p><p>ಆಗಸ್ಟ್ 30ರಂದು ಫಿರೋಜ್ಪುರದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶದಲ್ಲಿ ಪಂಜಾಬ್ನ ಉಪ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಬಾದಲ್ ಯಾವುದೇ ಗಾಯವಿಲ್ಲದೆ ಪಾರಾಗಿದ್ದರು.</p><p>ಕಳೆದ ವರ್ಷ ಕೇಂದ್ರ ಗೃಹ ಸಚಿವ ರಾಜನಾಥ್ ಮತ್ತು ಮುಖ್ತಾರ್ ಅಬ್ಬಾಸ್ ನಖ್ವಿ ರಾಮಪುರದಿಂದ ಉತ್ತರಪ್ರದೇಶಕ್ಕೆ ಪ್ರಯಾಣಿಸುತ್ತಿದ್ಧಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದರು.</p><p>2001ರಲ್ಲಿ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಪತನಗೊಂಡು ಅಂದಿನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಪ್ರಾಣಾಪಾಯದಿಂದ ಪಾರಾಗಿದ್ದರು.</p><p>ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಎರಡು ಮೂರು ಬಾರಿ ವಿಮಾನ ಅವಘಡಗಳಲ್ಲಿ ಪಾರಾಗಿದ್ದಾರೆ.</p>.ಬೋಸ್ರಿಂದ ಪವಾರ್ವರೆಗೆ.. ವೈಮಾನಿಕ ಅವಘಡಗಳಲ್ಲಿ ಮೃತಪಟ್ಟ ಗಣ್ಯರ ಪಟ್ಟಿ.ವಿಮಾನ ಅಪಘಾತದಲ್ಲಿ ಮೃತಪಟ್ಟ ಅಜಿತ್ ಪವಾರ್ ಹೊಗುತ್ತಿದ್ದದ್ದು ಎಲ್ಲಿಗೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ವಿಮಾನ ಅಥವಾ ಹೆಲಿಕಾಪ್ಟರ್ ಅವಘಡಗಳು ಸಂಭವಿಸಿದರೆ ಬದುಕುಳಿಯುವುದು ಭಾರಿ ಕಷ್ಟ. ಏಕೆಂದರೆ, ಭಾರಿ ಸ್ಫೋಟ ಮತ್ತು ಬೆಂಕಿಯ ಕೆನ್ನಾಲಿಗೆ ಆವರಿಸುವುದರಿಂದ ಬದುಕುಳಿಯುವ ಅವಕಾಶ ಬಹಳ ಕಡಿಮೆ ಇರುತ್ತದೆ. ಅಂತಹ ಸಂದರ್ಭದಲ್ಲೂ ಸಾವಿನ ದವಡೆಯಿಂದ ಪಾರಾದ ಕೆಲ ರಾಜಕಾರಣಿಗಳು ಮತ್ತು ಗಣ್ಯರು ಇದ್ದಾರೆ.</p><p>ವಿಮಾನ ಅಪಘಾತ ಸಂಭವಿಸಿಯೂ ಅದೃಷ್ಟವಶಾತ್ ಕೆಲ ರಾಜಕಾರಣಿಗಳು ಬದುಕುಳಿದಿದ್ದಾರೆ. ಆ ಪೈಕಿ ದಿವಂಗತ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಒಬ್ಬರು. 1977ರಲ್ಲಿ ಅಸ್ಸಾಂನಲ್ಲಿ ವಿಶೇಷ ವಿಮಾನ ಪತನಗೊಂಡರೂ ಮೊರಾರ್ಜಿ ದೇಸಾಯಿ ಪ್ರಾಣಾಪಾಯದಿಂದ ಪಾರಾಗಿದ್ದರು.</p><p>2004ರಲ್ಲಿ ಗುಜರಾತ್ನಲ್ಲಿ ಸಂಭವಿಸಿದ ವಿಮಾನ ಅವಘಡದಲ್ಲೂ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್, ಅಂದಿನ ಕೇಂದ್ರ ಸಚಿವ ಪೃಥ್ವಿರಾಜ್ ಚವಾಣ್ ಮತ್ತು ಕುಮಾರಿ ಸೆಲ್ಜಾ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದರು.</p><p>10 ವರ್ಷಗಳ ಹಿಂದೆ ಟೇಕಾಫ್ ಆದ ಕೆಲವೇ ಸಮಯದಲ್ಲಿ ಹೆಲಿಕಾಪ್ಟರ್ ಎಲೆಕ್ಟ್ರಿಕ್ ವೈರ್ ಸ್ಪರ್ಶಿಸಿ ಸಂಭವಿಸಿದ ಅಪಘಾತದಲ್ಲಿ ಅಂದಿನ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಮತ್ತು ಸಚಿವ ಪ್ರತಾಪ್ ಸಿಂಗ್ ಬಜ್ವಾ ಪಾರಾಗಿದ್ದರು.</p><p>ಆಗಸ್ಟ್ 30ರಂದು ಫಿರೋಜ್ಪುರದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶದಲ್ಲಿ ಪಂಜಾಬ್ನ ಉಪ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಬಾದಲ್ ಯಾವುದೇ ಗಾಯವಿಲ್ಲದೆ ಪಾರಾಗಿದ್ದರು.</p><p>ಕಳೆದ ವರ್ಷ ಕೇಂದ್ರ ಗೃಹ ಸಚಿವ ರಾಜನಾಥ್ ಮತ್ತು ಮುಖ್ತಾರ್ ಅಬ್ಬಾಸ್ ನಖ್ವಿ ರಾಮಪುರದಿಂದ ಉತ್ತರಪ್ರದೇಶಕ್ಕೆ ಪ್ರಯಾಣಿಸುತ್ತಿದ್ಧಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದರು.</p><p>2001ರಲ್ಲಿ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಪತನಗೊಂಡು ಅಂದಿನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಪ್ರಾಣಾಪಾಯದಿಂದ ಪಾರಾಗಿದ್ದರು.</p><p>ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಎರಡು ಮೂರು ಬಾರಿ ವಿಮಾನ ಅವಘಡಗಳಲ್ಲಿ ಪಾರಾಗಿದ್ದಾರೆ.</p>.ಬೋಸ್ರಿಂದ ಪವಾರ್ವರೆಗೆ.. ವೈಮಾನಿಕ ಅವಘಡಗಳಲ್ಲಿ ಮೃತಪಟ್ಟ ಗಣ್ಯರ ಪಟ್ಟಿ.ವಿಮಾನ ಅಪಘಾತದಲ್ಲಿ ಮೃತಪಟ್ಟ ಅಜಿತ್ ಪವಾರ್ ಹೊಗುತ್ತಿದ್ದದ್ದು ಎಲ್ಲಿಗೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>