ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೇ ಪ್ರಕರಣಗಳ ಮಂದಗತಿಯ ವಿಚಾರಣೆ ಪ್ರಕ್ರಿಯೆ: ಸುಪ್ರೀಂ ಕೋರ್ಟ್ ಅಸಮಾಧಾನ

Published 20 ಅಕ್ಟೋಬರ್ 2023, 16:17 IST
Last Updated 20 ಅಕ್ಟೋಬರ್ 2023, 16:17 IST
ಅಕ್ಷರ ಗಾತ್ರ

ನವದೆಹಲಿ: ಕಾನೂನು ಪ್ರಕ್ರಿಯೆಯು ಮಂದಗತಿಯಲ್ಲಿ ಸಾಗಿದರೆ ಕಕ್ಷಿದಾರರು ಭ್ರಮನಿರಸನಗೊಳ್ಳಬಹುದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಅಲ್ಲದೆ, ಹಳೇ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಹೈಕೋರ್ಟ್‌ಗಳು ಸೇರಿದಂತೆ ಕೋರ್ಟ್‌ಗಳಿಗೆ ಕೆಲ ನಿರ್ದೇಶನಗಳನ್ನು ನೀಡಿದೆ.

ನ್ಯಾಯಮೂರ್ತಿಗಳಾದ ಎಸ್‌.ರವೀಂದ್ರ ಭಟ್, ಅರವಿಂದ ಕುಮಾರ್ ಅವರಿದ್ದ ಪೀಠವು, ಒಟ್ಟಾರೆ ಪರಿಸ್ಥಿತಿಯನ್ನು ಸುಧಾರಿಸಲು ನ್ಯಾಯಾಲಯ ಹಾಗೂ ವಕೀಲರ ಸಂಘಗಳ ಜಂಟಿ ಸಹಯೋಗ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟಿತು.  

ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಕೋಶದ (ಎನ್‌ಜೆಡಜಿ) ಮಾಹಿತಿಯನ್ನು ಉಲ್ಲೇಖಿಸಿ, ಕೆಲವು ಪ್ರಕರಣಗಳು 50 ವರ್ಷಗಳಿಂದ ಬಾಕಿ ಉಳಿದಿವೆ. ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶದಲ್ಲಿ ಕೆಲ ಪ್ರಕರಣಗಳು 65 ವರ್ಷ ಕಳೆದರೂ ಇತ್ಯರ್ಥವಾಗಿಲ್ಲ ಎಂದು ಹೇಳಿತು.

ತ್ವರಿತ ವಿಚಾರಣೆ ಸಂಬಂಧ 11 ನಿರ್ದೇಶನಗಳನ್ನು ನೀಡಿದ ಪೀಠವು, ‘ಇದು, ನ್ಯಾಯ ಯಾರಿಗೂ ಕಾಯುವುದಿಲ್ಲ ಎಂಬ ಕಾಲಘಟ್ಟ. ಹೈಕೋರ್ಟ್‌ಗಳ ಎಲ್ಲ ಸಿಜೆಗಳಿಗೆ ಮನವಿ ಮಾಡಿದ್ದು, ಕೆಳಹಂತದ ಕೋರ್ಟ್‌ಗಳಿಗೆ ಸೂಚನೆಗಳನ್ನೂ ನೀಡಲಾಗಿದೆ’ ಎಂದು ತಿಳಿಸಿತು.

ಸಿವಿಲ್‌ ವಿವಾದದ ಸಂಬಂಧ ಉತ್ತರಾಖಂಡ ಹೈಕೋರ್ಟ್‌ ಆದೇಶ ಉಲ್ಲೇಖಿಸಿ ಯಶಪಾಲ್ ಜೈನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ 43 ವರ್ಷದ ಹಿಂದೆ ಆರಂಭವಾಗಿದ್ದು, ಇನ್ನೂ ಪ್ರಗತಿಯಲ್ಲಿದೆ. 

ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್‌ ಪೀಠವು, ಪ್ರಕರಣವನ್ನು ಆರು ತಿಂಗಳಲ್ಲಿ ಇತ್ಯರ್ಥಪಡಿಸಬೇಕು ಎಂದು ಕೆಳಹಂತದ ಕೋರ್ಟ್‌ಗೆ ಸೂಚಿಸಿತು. ಇದೇ ಸಂದರ್ಭದಲ್ಲಿ ಮೇಲಿನ ಅಭಿಪ್ರಾಯಗಳನ್ನು ಪೀಠ ವ್ಯಕ್ತಪಡಿಸಿತು.

ಹೈಕೋರ್ಟ್‌ಗಳು ಮತ್ತು ಕೆಳಹಂತದ ಕೋರ್ಟ್‌ಗಳಿಗೆ ನೀಡಲಾದ ನಿರ್ದೇಶನಗಳನ್ನು ತೀರ್ಪು ಪ್ರಕಟಿಸುವ ವೇಳೆ ಓದಲಾಗಿಲ್ಲ. ಈ ತೀರ್ಪನ್ನು ಕೋರ್ಟ್‌ನ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಿದ ಬಳಿಕ ಈ ನಿರ್ದೇಶನಗಳ ವಿವರ ಗೊತ್ತಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT