<p><strong>ನವದೆಹಲಿ: </strong>ಸಾಂವಿಧಾನಿಕ ಹಾಗೂ ರಾಷ್ಡ್ರೀಯ ಮಹತ್ವದ ವಿಷಯಗಳ ಕುರಿತು ವಿಚಾರಣೆ ನಡೆಸುವ ಕೋರ್ಟ್ ಕಲಾಪಗಳ ನೇರ ಪ್ರಸಾರಕ್ಕೆ ಸಂಬಂಧಿಸಿದಂತೆ ಮುಖ್ಯನ್ಯಾಯಮೂರ್ತಿಗಳೇ ತೀರ್ಮಾನ ಕೈಗೊಳ್ಳುವರು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.</p>.<p>ಕಲಾಪಗಳ ನೇರ ಪ್ರಸಾರ ಮಾಡುವುದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ 2018ರಲ್ಲಿ ತೀರ್ಪು ನೀಡಿದ್ದು, ಇದು ಇನ್ನೂ ಅನುಷ್ಠಾನಗೊಂಡಿಲ್ಲ.</p>.<p>’ಇದು ಆಡಳಿತಾತ್ಮಕ ವಿಷಯ. ಹೀಗಾಗಿ ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿಗಳೇ ನಿರ್ಧಾರ ಕೈಗೊಂಡರೆ ಸಮರ್ಪಕವಾಗಿರುವುದು‘ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮೂವರು ನ್ಯಾಯಾಧೀಶರನ್ನು ಒಳಗೊಂಡ ಪೀಠ, ಈ ಸಂಬಂಧ ಯಾವುದೇ ಆದೇಶ ನೀಡಲು ನಿರಾಕರಿಸಿತು.</p>.<p>‘ಇಂಥದೇ ಕಾನೂನು ರಚನೆ ಮಾಡಿ ಎಂದು ನಾವು ಸಂಸತ್ತಿಗೆ ಸೂಚನೆ ನೀಡಲು ಸಾಧ್ಯವೇ‘ ಎಂದು ಪ್ರಶ್ನಿಸಿದ ನ್ಯಾಯಪೀಠ, ‘ಅದೇ ರೀತಿ ಆಡಳಿತಾತ್ಮಕ ಅಂಶಗಳನ್ನು ಒಳಗೊಂಡಿರುವ ಈ ವಿಷಯವನ್ನು ಸಿಜೆಐ ಪರಿಶೀಲಿಸುವರು‘ ಎಂದು ಅಭಿಪ್ರಾಯಪಟ್ಟಿತು.</p>.<p>ಇದಕ್ಕೂ ಮುನ್ನ, ಸುಪ್ರೀಂಕೋರ್ಟ್ನ ಪ್ರಧಾನ ಕಾರ್ಯದರ್ಶಿ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಧವಿ ದಿವಾನ್, ’2018ರಲ್ಲಿ ನೀಡಿರುವ ತೀರ್ಪನ್ನು ಅನುಷ್ಠಾನಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ‘ ಎಂದು ನ್ಯಾಯಪೀಠದ ಗಮನಕ್ಕೆ ತಂದರು.</p>.<p>‘ಕಲಾಪಗಳ ನೇರ ಪ್ರಸಾರಕ್ಕೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಅಳವಡಿಸುವ ಕಾರ್ಯಕ್ಕೂ ಚಾಲನೆ ನೀಡಲಾಗಿದೆ‘ ಎಂದು ಸಾಲಿಟರ್ ಜನರಲ್ ಕೆ.ಕೆ.ವೇಣುಗೋಪಾಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸಾಂವಿಧಾನಿಕ ಹಾಗೂ ರಾಷ್ಡ್ರೀಯ ಮಹತ್ವದ ವಿಷಯಗಳ ಕುರಿತು ವಿಚಾರಣೆ ನಡೆಸುವ ಕೋರ್ಟ್ ಕಲಾಪಗಳ ನೇರ ಪ್ರಸಾರಕ್ಕೆ ಸಂಬಂಧಿಸಿದಂತೆ ಮುಖ್ಯನ್ಯಾಯಮೂರ್ತಿಗಳೇ ತೀರ್ಮಾನ ಕೈಗೊಳ್ಳುವರು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.</p>.<p>ಕಲಾಪಗಳ ನೇರ ಪ್ರಸಾರ ಮಾಡುವುದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ 2018ರಲ್ಲಿ ತೀರ್ಪು ನೀಡಿದ್ದು, ಇದು ಇನ್ನೂ ಅನುಷ್ಠಾನಗೊಂಡಿಲ್ಲ.</p>.<p>’ಇದು ಆಡಳಿತಾತ್ಮಕ ವಿಷಯ. ಹೀಗಾಗಿ ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿಗಳೇ ನಿರ್ಧಾರ ಕೈಗೊಂಡರೆ ಸಮರ್ಪಕವಾಗಿರುವುದು‘ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮೂವರು ನ್ಯಾಯಾಧೀಶರನ್ನು ಒಳಗೊಂಡ ಪೀಠ, ಈ ಸಂಬಂಧ ಯಾವುದೇ ಆದೇಶ ನೀಡಲು ನಿರಾಕರಿಸಿತು.</p>.<p>‘ಇಂಥದೇ ಕಾನೂನು ರಚನೆ ಮಾಡಿ ಎಂದು ನಾವು ಸಂಸತ್ತಿಗೆ ಸೂಚನೆ ನೀಡಲು ಸಾಧ್ಯವೇ‘ ಎಂದು ಪ್ರಶ್ನಿಸಿದ ನ್ಯಾಯಪೀಠ, ‘ಅದೇ ರೀತಿ ಆಡಳಿತಾತ್ಮಕ ಅಂಶಗಳನ್ನು ಒಳಗೊಂಡಿರುವ ಈ ವಿಷಯವನ್ನು ಸಿಜೆಐ ಪರಿಶೀಲಿಸುವರು‘ ಎಂದು ಅಭಿಪ್ರಾಯಪಟ್ಟಿತು.</p>.<p>ಇದಕ್ಕೂ ಮುನ್ನ, ಸುಪ್ರೀಂಕೋರ್ಟ್ನ ಪ್ರಧಾನ ಕಾರ್ಯದರ್ಶಿ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಧವಿ ದಿವಾನ್, ’2018ರಲ್ಲಿ ನೀಡಿರುವ ತೀರ್ಪನ್ನು ಅನುಷ್ಠಾನಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ‘ ಎಂದು ನ್ಯಾಯಪೀಠದ ಗಮನಕ್ಕೆ ತಂದರು.</p>.<p>‘ಕಲಾಪಗಳ ನೇರ ಪ್ರಸಾರಕ್ಕೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಅಳವಡಿಸುವ ಕಾರ್ಯಕ್ಕೂ ಚಾಲನೆ ನೀಡಲಾಗಿದೆ‘ ಎಂದು ಸಾಲಿಟರ್ ಜನರಲ್ ಕೆ.ಕೆ.ವೇಣುಗೋಪಾಲ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>