<p><strong>ಜಮ್ಮು:</strong> ಕೃಷಿ ಸಾಲ ಮನ್ನಾ ಭರವಸೆಯು ಚುನಾವಣೆ ಗೆಲ್ಲುವುದಕ್ಕಾಗಿ ಕಾಂಗ್ರೆಸ್ ಪಕ್ಷದ ತಂತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.</p>.<p>ಚುನಾವಣೆ ಸಮೀಪಿಸಿದಾಗ ಮಾತ್ರ ಕಾಂಗ್ರೆಸ್ಗೆ ರೈತರ ಸಾಲ ನೆನಪಾಗುತ್ತದೆ. ಸಾಲ ಮನ್ನಾ ಹೆಸರಲ್ಲಿ ಕಾಂಗ್ರೆಸ್ ಪಕ್ಷ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಅವರು ವಿಜಯಪುರದಲ್ಲಿ ಭಾನುವಾರ ನಡೆದ ರ್ಯಾಲಿಯಲ್ಲಿ ತರಾಟೆಗೆ ತೆಗೆದುಕೊಂಡರು.</p>.<p>ರೈತರ ₹6 ಲಕ್ಷ ಕೋಟಿ ಸಾಲ ಮನ್ನಾ ಮಾಡುವುದಾಗಿ ಹೇಳಿ 2008–09ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕೇವಲ ₹52,000 ಕೋಟಿ ಸಾಲ ಮನ್ನಾ ಮಾಡಿತ್ತು. ಹತ್ತು ವರ್ಷಗಳ ನಂತರ ಮತ್ತೊಮ್ಮೆ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳುತ್ತಿದೆ ಎಂದು ಲೇವಡಿ ಮಾಡಿದರು.</p>.<p>25–30 ಲಕ್ಷ ಅನರ್ಹ ವ್ಯಕ್ತಿಗಳೂ ಸಾಲ ಮನ್ನಾ ಸೌಲಭ್ಯ ಪಡೆದಿರುವ ಆಘಾತಕಾರಿ ವಿಷಯವನ್ನು ಮಹಾಲೇಖಪಾಲರ ವರದಿ ಪತ್ತೆ ಹಚ್ಚಿದೆ. ಈ ಹಣ ಮಧ್ಯವರ್ತಿಗಳ ಜೇಬು ಸೇರುತ್ತಿದೆ ಎಂದು ಆರೋಪಿಸಿದರು.</p>.<p>ಮಧ್ಯಪ್ರದೇಶ, ರಾಜಸ್ಥಾನದ ಕಾಂಗ್ರೆಸ್ ಸರ್ಕಾರಗಳು ಇದೇ ಕೆಲಸ ಮಾಡುತ್ತಿವೆ. ರೈತರು ಸಾಲ ಮನ್ನಾ ಮೋಸಕ್ಕೆ ಬಲಿಯಾಗಬಾರದು ಎಂದು ಮೋದಿ ಮನವಿ ಮಾಡಿದರು.</p>.<p>ಪ್ರಧಾನಮಂತ್ರಿ ಕಿಸಾನ್ ಯೋಜನೆಗೆ ಪ್ರತಿವರ್ಷ ₹75 ಸಾವಿರ ಕೋಟಿ ಮೀಸಲಾಗಿಡಲಾಗಿದ್ದು ಮುಂದಿನ 10 ವರ್ಷಗಳಲ್ಲಿ ರೈತರ ಖಾತೆಗಳಿಗೆ ₹7.50 ಲಕ್ಷ ಕೋಟಿ ಜಮಾ ಮಾಡಲಾಗುವುದು ಎಂದು ತಿಳಿಸಿದರು.</p>.<p><strong>ಪೌರತ್ವ ಮಸೂದೆ ಜಾರಿಗೆ ಬದ್ಧ:</strong>ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಹಿಂಸೆ ಅನುಭವಿಸುತ್ತಿರುವ ಭಾರತ ಮಾತೆಯ ಮಕ್ಕಳ ನೆರವಿಗೆ ನಿಲ್ಲುವ ಉದ್ದೇಶದಿಂದ ಪೌರತ್ವ ತಿದ್ದುಪಡಿ ಮಸೂದೆ ತರಲಾಗಿದೆ ಎಂದು ಮೋದಿ ಹೇಳಿದರು.</p>.<p>ವಿದೇಶಿ ನೆಲದಲ್ಲಿ ನೋವು ಅನುಭವಿಸುತ್ತಿರುವ ಅಣ್ಣ, ತಮ್ಮಂದಿರ ನೋವಿಗೆಧ್ವನಿಯಾಗಬೇಕು ಎಂಬ ಸಂಕಲ್ಪದಿಂದ ಸರ್ಕಾರವು ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ಬದ್ಧವಾಗಿದೆ ಎಂದರು.</p>.<p><strong>‘ಉಗ್ರರ ಬೆನ್ನೆಲುಬು ಮುರಿದಿದ್ದೇವೆ’</strong><br />ಭಯೋತ್ಪಾದನೆ ನಿಗ್ರಹಕ್ಕೆ ಭಾರತ ಅನುಸರಿಸುತ್ತಿರುವ ಹೊಸ ನೀತಿ ಮತ್ತು ರೀತಿಗಳು ನಿರ್ದಿಷ್ಟ ದಾಳಿಯ ನಂತರ ವಿಶ್ವಕ್ಕೆ ಮನದಟ್ಟಾಗಿವೆ ಎಂದು ಮೋದಿ ಹೇಳಿದ್ದಾರೆ.</p>.<p>ಕಣಿವೆ ರಾಜ್ಯದಲ್ಲಿ ಭಯೋತ್ಪಾದನೆ ಚಟುವಟಿಕೆಗಳ ಬೆನ್ನೆಲುಬು ಮುರಿದಿದ್ದೇವೆ. ಉಗ್ರರಿಗೆ ತಕ್ಕ ಪಾಠ ಕಲಿಸಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಘೋಷಿಸಿದರು. ಭಯೋತ್ಪಾದಕರ ಉಪಟಳದಿಂದ ಕಣಿವೆ ರಾಜ್ಯ ತೊರೆದ ಕಾಶ್ಮೀರಿ ಪಂಡಿತರ ರಕ್ಷಣೆಗೂ ಸರ್ಕಾರ ಬದ್ಧ ಎಂದು ಭರವಸೆ ನೀಡಿದರು.</p>.<p><strong>ಭಾರಿ ಭದ್ರತೆ</strong></p>.<p>* ಮೋದಿ ಭೇಟಿ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿದ್ದ ಪ್ರತ್ಯೇಕತಾವಾದಿಗಳು</p>.<p>* ಹುರಿಯತ್ ಮುಖಂಡರು ಸೇರಿದಂತೆ ಪ್ರತ್ಯೇಕತಾವಾದಿ ನಾಯಕರಿಗೆ ಗೃಹ ಬಂಧನ</p>.<p>* ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ಭಾರಿ ಬಿಗಿ ಬಂದೋಬಸ್ತ್</p>.<p>* ಅಖಿಲ ಭಾರತ ವೈದ್ಯಕೀಯ ಸಂಸ್ಥೆ (ಏಮ್ಸ್) ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ</p>.<p>* ಲಡಾಖ್ನ ಮೊದಲ ವಿಶ್ವವಿದ್ಯಾಲಯ ಉದ್ಘಾಟನೆ</p>.<p><strong>ತೆಲಂಗಾಣ: ಬಿಜೆಪಿ ಏಕಾಂಗಿ</strong><br />ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಯಾವುದೇ ಪಕ್ಷದ ಜತೆಗೆ ಹೊಂದಾಣಿಕೆ ಅಥವಾ ಮೈತ್ರಿ ಮಾಡಿಕೊಳ್ಳುತ್ತಿಲ್ಲ. ಇಲ್ಲಿನ ಎಲ್ಲ 17 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರರಹಿತ ಆಡಳಿತ ಕೊಟ್ಟಿದ್ದಾರೆ ಹಾಗಾಗಿ ಬಿಜೆಪಿಗೆ ಆತ್ಮವಿಶ್ವಾಸ ಇದೆ ಎಂದು ಆ ಪಕ್ಷದ ಮುಖಂಡ ಬಂಡಾರು ದತ್ತಾತ್ರೇಯ ಹೇಳಿದ್ದಾರೆ.</p>.<p>ಕಳೆದ ಡಿಸೆಂಬರ್ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆದ್ದಿತ್ತು.</p>.<p><strong>ಇದನ್ನೂ ಓದಿ...<br /><a href="https://www.prajavani.net/stories/national/lok-sabha-election-2019-612144.html" target="_blank">‘ಕೈ’ ‘ಕಮಲ’ದ ಸಾಲ ಮನ್ನಾ ತಾಕಲಾಟ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಕೃಷಿ ಸಾಲ ಮನ್ನಾ ಭರವಸೆಯು ಚುನಾವಣೆ ಗೆಲ್ಲುವುದಕ್ಕಾಗಿ ಕಾಂಗ್ರೆಸ್ ಪಕ್ಷದ ತಂತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.</p>.<p>ಚುನಾವಣೆ ಸಮೀಪಿಸಿದಾಗ ಮಾತ್ರ ಕಾಂಗ್ರೆಸ್ಗೆ ರೈತರ ಸಾಲ ನೆನಪಾಗುತ್ತದೆ. ಸಾಲ ಮನ್ನಾ ಹೆಸರಲ್ಲಿ ಕಾಂಗ್ರೆಸ್ ಪಕ್ಷ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಅವರು ವಿಜಯಪುರದಲ್ಲಿ ಭಾನುವಾರ ನಡೆದ ರ್ಯಾಲಿಯಲ್ಲಿ ತರಾಟೆಗೆ ತೆಗೆದುಕೊಂಡರು.</p>.<p>ರೈತರ ₹6 ಲಕ್ಷ ಕೋಟಿ ಸಾಲ ಮನ್ನಾ ಮಾಡುವುದಾಗಿ ಹೇಳಿ 2008–09ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕೇವಲ ₹52,000 ಕೋಟಿ ಸಾಲ ಮನ್ನಾ ಮಾಡಿತ್ತು. ಹತ್ತು ವರ್ಷಗಳ ನಂತರ ಮತ್ತೊಮ್ಮೆ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳುತ್ತಿದೆ ಎಂದು ಲೇವಡಿ ಮಾಡಿದರು.</p>.<p>25–30 ಲಕ್ಷ ಅನರ್ಹ ವ್ಯಕ್ತಿಗಳೂ ಸಾಲ ಮನ್ನಾ ಸೌಲಭ್ಯ ಪಡೆದಿರುವ ಆಘಾತಕಾರಿ ವಿಷಯವನ್ನು ಮಹಾಲೇಖಪಾಲರ ವರದಿ ಪತ್ತೆ ಹಚ್ಚಿದೆ. ಈ ಹಣ ಮಧ್ಯವರ್ತಿಗಳ ಜೇಬು ಸೇರುತ್ತಿದೆ ಎಂದು ಆರೋಪಿಸಿದರು.</p>.<p>ಮಧ್ಯಪ್ರದೇಶ, ರಾಜಸ್ಥಾನದ ಕಾಂಗ್ರೆಸ್ ಸರ್ಕಾರಗಳು ಇದೇ ಕೆಲಸ ಮಾಡುತ್ತಿವೆ. ರೈತರು ಸಾಲ ಮನ್ನಾ ಮೋಸಕ್ಕೆ ಬಲಿಯಾಗಬಾರದು ಎಂದು ಮೋದಿ ಮನವಿ ಮಾಡಿದರು.</p>.<p>ಪ್ರಧಾನಮಂತ್ರಿ ಕಿಸಾನ್ ಯೋಜನೆಗೆ ಪ್ರತಿವರ್ಷ ₹75 ಸಾವಿರ ಕೋಟಿ ಮೀಸಲಾಗಿಡಲಾಗಿದ್ದು ಮುಂದಿನ 10 ವರ್ಷಗಳಲ್ಲಿ ರೈತರ ಖಾತೆಗಳಿಗೆ ₹7.50 ಲಕ್ಷ ಕೋಟಿ ಜಮಾ ಮಾಡಲಾಗುವುದು ಎಂದು ತಿಳಿಸಿದರು.</p>.<p><strong>ಪೌರತ್ವ ಮಸೂದೆ ಜಾರಿಗೆ ಬದ್ಧ:</strong>ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಹಿಂಸೆ ಅನುಭವಿಸುತ್ತಿರುವ ಭಾರತ ಮಾತೆಯ ಮಕ್ಕಳ ನೆರವಿಗೆ ನಿಲ್ಲುವ ಉದ್ದೇಶದಿಂದ ಪೌರತ್ವ ತಿದ್ದುಪಡಿ ಮಸೂದೆ ತರಲಾಗಿದೆ ಎಂದು ಮೋದಿ ಹೇಳಿದರು.</p>.<p>ವಿದೇಶಿ ನೆಲದಲ್ಲಿ ನೋವು ಅನುಭವಿಸುತ್ತಿರುವ ಅಣ್ಣ, ತಮ್ಮಂದಿರ ನೋವಿಗೆಧ್ವನಿಯಾಗಬೇಕು ಎಂಬ ಸಂಕಲ್ಪದಿಂದ ಸರ್ಕಾರವು ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ಬದ್ಧವಾಗಿದೆ ಎಂದರು.</p>.<p><strong>‘ಉಗ್ರರ ಬೆನ್ನೆಲುಬು ಮುರಿದಿದ್ದೇವೆ’</strong><br />ಭಯೋತ್ಪಾದನೆ ನಿಗ್ರಹಕ್ಕೆ ಭಾರತ ಅನುಸರಿಸುತ್ತಿರುವ ಹೊಸ ನೀತಿ ಮತ್ತು ರೀತಿಗಳು ನಿರ್ದಿಷ್ಟ ದಾಳಿಯ ನಂತರ ವಿಶ್ವಕ್ಕೆ ಮನದಟ್ಟಾಗಿವೆ ಎಂದು ಮೋದಿ ಹೇಳಿದ್ದಾರೆ.</p>.<p>ಕಣಿವೆ ರಾಜ್ಯದಲ್ಲಿ ಭಯೋತ್ಪಾದನೆ ಚಟುವಟಿಕೆಗಳ ಬೆನ್ನೆಲುಬು ಮುರಿದಿದ್ದೇವೆ. ಉಗ್ರರಿಗೆ ತಕ್ಕ ಪಾಠ ಕಲಿಸಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಘೋಷಿಸಿದರು. ಭಯೋತ್ಪಾದಕರ ಉಪಟಳದಿಂದ ಕಣಿವೆ ರಾಜ್ಯ ತೊರೆದ ಕಾಶ್ಮೀರಿ ಪಂಡಿತರ ರಕ್ಷಣೆಗೂ ಸರ್ಕಾರ ಬದ್ಧ ಎಂದು ಭರವಸೆ ನೀಡಿದರು.</p>.<p><strong>ಭಾರಿ ಭದ್ರತೆ</strong></p>.<p>* ಮೋದಿ ಭೇಟಿ ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿದ್ದ ಪ್ರತ್ಯೇಕತಾವಾದಿಗಳು</p>.<p>* ಹುರಿಯತ್ ಮುಖಂಡರು ಸೇರಿದಂತೆ ಪ್ರತ್ಯೇಕತಾವಾದಿ ನಾಯಕರಿಗೆ ಗೃಹ ಬಂಧನ</p>.<p>* ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ಭಾರಿ ಬಿಗಿ ಬಂದೋಬಸ್ತ್</p>.<p>* ಅಖಿಲ ಭಾರತ ವೈದ್ಯಕೀಯ ಸಂಸ್ಥೆ (ಏಮ್ಸ್) ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ</p>.<p>* ಲಡಾಖ್ನ ಮೊದಲ ವಿಶ್ವವಿದ್ಯಾಲಯ ಉದ್ಘಾಟನೆ</p>.<p><strong>ತೆಲಂಗಾಣ: ಬಿಜೆಪಿ ಏಕಾಂಗಿ</strong><br />ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಯಾವುದೇ ಪಕ್ಷದ ಜತೆಗೆ ಹೊಂದಾಣಿಕೆ ಅಥವಾ ಮೈತ್ರಿ ಮಾಡಿಕೊಳ್ಳುತ್ತಿಲ್ಲ. ಇಲ್ಲಿನ ಎಲ್ಲ 17 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರರಹಿತ ಆಡಳಿತ ಕೊಟ್ಟಿದ್ದಾರೆ ಹಾಗಾಗಿ ಬಿಜೆಪಿಗೆ ಆತ್ಮವಿಶ್ವಾಸ ಇದೆ ಎಂದು ಆ ಪಕ್ಷದ ಮುಖಂಡ ಬಂಡಾರು ದತ್ತಾತ್ರೇಯ ಹೇಳಿದ್ದಾರೆ.</p>.<p>ಕಳೆದ ಡಿಸೆಂಬರ್ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆದ್ದಿತ್ತು.</p>.<p><strong>ಇದನ್ನೂ ಓದಿ...<br /><a href="https://www.prajavani.net/stories/national/lok-sabha-election-2019-612144.html" target="_blank">‘ಕೈ’ ‘ಕಮಲ’ದ ಸಾಲ ಮನ್ನಾ ತಾಕಲಾಟ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>