<p><strong>ಚೆನ್ನೈ:</strong> ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ವಿಜಯ್ ಅವರ ಟಿವಿಕೆ ಪಕ್ಷದೊಂದಿಗೆ ಕೈಜೋಡಿಸಿ ಪ್ರಚಾರ ಮಾಡಿದ್ದಾರೆ ನಾವು 180 ರಿಂದ 190 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿದ್ದೆವು ಎಂದು ರಾಜ್ಯ ಎಐಸಿಸಿ ಉಸ್ತುವಾರಿ ಗಿರೀಶ್ ಚೋಡಂಕರ್ ಅವರು ಮಂಗಳವಾರ(ಮೇ 5) ಹೇಳಿದ್ದಾರೆ.</p><p>ತಳಮಟ್ಟದಲ್ಲಿ ಟಿವಿಕೆಗೆ ಬಾರಿ ಬೆಂಬಲವಿದೆ ಎಂದು ಗೊತ್ತಿತ್ತು. ಹಾಗಾಗಿ, ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಸ್ಥಳೀಯ ನಾಯಕರು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದರು. ಹಾಗಾಗಿದ್ದರೆ, ಅದು ಈ ಚುನಾವಣೆಯಲ್ಲಿ ಪ್ರಭಾವ ಬೀರುತ್ತಿತ್ತು. ನಾವು ತಮಿಳುನಾಡಿನಲ್ಲಿ ಗೆಲ್ಲುತ್ತಿದ್ದೆವು ಎಂದು ಹೇಳಿದ್ದಾರೆ.</p><p>ಈ ಚುನಾವಣೆಯಲ್ಲಿ ಟಿವಿಕೆ ಉತ್ತಮ ಸಾಧನೆ ಮಾಡುತ್ತದೆ ಎಂದು ಗೊತ್ತಿದ್ದರೂ, ಇಂಡಿಯಾ ಕೂಟದ ಪ್ರಮುಖ ಪಕ್ಷಗಳಲ್ಲಿ ಒಂದಾಗಿರುವ ಡಿಎಂಕೆಯೊಂದಿಗಿನ ಮೈತ್ರಿಯನ್ನು ಮುಂದುವರಿಸಲು ಕಾಂಗ್ರೆಸ್ ನಾಯಕರು ಒಲವು ತೋರಿಸಿದ್ದರು. ಈ ಮೈತ್ರಿಯು ಯಾರದೋ ವೈಯಕ್ತಿಕ ನಿರ್ಧಾರವಾಗಿರಲಿಲ್ಲ, ಪಕ್ಷದ ನಿಲುವಾಗಿತ್ತು ಎಂದು ಹೇಳಿದ್ದಾರೆ.</p><p>ರಾಜ್ಯದ ಯುವಜನರು ಮತ್ತು ಮಹಿಳೆಯರು ಹೊಸ ಪಕ್ಷದ ಪರವಾಗಿ ಒಲವು ತೋರಿಸಿದ್ದಾರೆ. ಕೆಲವು ಕಾಂಗ್ರೆಸ್ ಕಾರ್ಯಕರ್ತರೇ ಟಿವಿಕೆಗೆ ಬೆಂಬಲ ನೀಡಿದ್ದಾರೆ, ನಮ್ಮ ಮತದಾರರು ಕೂಡ ಅವರಿಗೆ ಮತ ನೀಡಿದ್ದಾರೆ ಎಂದು ಹೇಳಿದ್ದಾರೆ.</p><p>ರಾಜ್ಯದ ರಾಜಕೀಯ ಬೆಳವಣಿಗೆಯ ಕುರಿತು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಹಿತಿ ನೀಡುತ್ತಿದ್ದೇನೆ. ತಮಿಳುನಾಡಿನ ಅಭಿವೃದ್ಧಿಗೆ ಸಹಾಯವಾಗುವ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. </p><p>ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳಲ್ಲಿ ಗೆಲವು ಸಾಧಿಸಿದೆ. ಅವರು ಬಹುಮತ ಪಡೆಯಲು ಇನ್ನೂ 10 ಸ್ಥಾನಗಳ ಅಗತ್ಯವಿದೆ. ಕಾಂಗ್ರೆಸ್ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಟಿವಿಕೆಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ವಿಜಯ್ ಅವರ ಟಿವಿಕೆ ಪಕ್ಷದೊಂದಿಗೆ ಕೈಜೋಡಿಸಿ ಪ್ರಚಾರ ಮಾಡಿದ್ದಾರೆ ನಾವು 180 ರಿಂದ 190 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿದ್ದೆವು ಎಂದು ರಾಜ್ಯ ಎಐಸಿಸಿ ಉಸ್ತುವಾರಿ ಗಿರೀಶ್ ಚೋಡಂಕರ್ ಅವರು ಮಂಗಳವಾರ(ಮೇ 5) ಹೇಳಿದ್ದಾರೆ.</p><p>ತಳಮಟ್ಟದಲ್ಲಿ ಟಿವಿಕೆಗೆ ಬಾರಿ ಬೆಂಬಲವಿದೆ ಎಂದು ಗೊತ್ತಿತ್ತು. ಹಾಗಾಗಿ, ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಸ್ಥಳೀಯ ನಾಯಕರು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದರು. ಹಾಗಾಗಿದ್ದರೆ, ಅದು ಈ ಚುನಾವಣೆಯಲ್ಲಿ ಪ್ರಭಾವ ಬೀರುತ್ತಿತ್ತು. ನಾವು ತಮಿಳುನಾಡಿನಲ್ಲಿ ಗೆಲ್ಲುತ್ತಿದ್ದೆವು ಎಂದು ಹೇಳಿದ್ದಾರೆ.</p><p>ಈ ಚುನಾವಣೆಯಲ್ಲಿ ಟಿವಿಕೆ ಉತ್ತಮ ಸಾಧನೆ ಮಾಡುತ್ತದೆ ಎಂದು ಗೊತ್ತಿದ್ದರೂ, ಇಂಡಿಯಾ ಕೂಟದ ಪ್ರಮುಖ ಪಕ್ಷಗಳಲ್ಲಿ ಒಂದಾಗಿರುವ ಡಿಎಂಕೆಯೊಂದಿಗಿನ ಮೈತ್ರಿಯನ್ನು ಮುಂದುವರಿಸಲು ಕಾಂಗ್ರೆಸ್ ನಾಯಕರು ಒಲವು ತೋರಿಸಿದ್ದರು. ಈ ಮೈತ್ರಿಯು ಯಾರದೋ ವೈಯಕ್ತಿಕ ನಿರ್ಧಾರವಾಗಿರಲಿಲ್ಲ, ಪಕ್ಷದ ನಿಲುವಾಗಿತ್ತು ಎಂದು ಹೇಳಿದ್ದಾರೆ.</p><p>ರಾಜ್ಯದ ಯುವಜನರು ಮತ್ತು ಮಹಿಳೆಯರು ಹೊಸ ಪಕ್ಷದ ಪರವಾಗಿ ಒಲವು ತೋರಿಸಿದ್ದಾರೆ. ಕೆಲವು ಕಾಂಗ್ರೆಸ್ ಕಾರ್ಯಕರ್ತರೇ ಟಿವಿಕೆಗೆ ಬೆಂಬಲ ನೀಡಿದ್ದಾರೆ, ನಮ್ಮ ಮತದಾರರು ಕೂಡ ಅವರಿಗೆ ಮತ ನೀಡಿದ್ದಾರೆ ಎಂದು ಹೇಳಿದ್ದಾರೆ.</p><p>ರಾಜ್ಯದ ರಾಜಕೀಯ ಬೆಳವಣಿಗೆಯ ಕುರಿತು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಹಿತಿ ನೀಡುತ್ತಿದ್ದೇನೆ. ತಮಿಳುನಾಡಿನ ಅಭಿವೃದ್ಧಿಗೆ ಸಹಾಯವಾಗುವ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. </p><p>ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳಲ್ಲಿ ಗೆಲವು ಸಾಧಿಸಿದೆ. ಅವರು ಬಹುಮತ ಪಡೆಯಲು ಇನ್ನೂ 10 ಸ್ಥಾನಗಳ ಅಗತ್ಯವಿದೆ. ಕಾಂಗ್ರೆಸ್ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಟಿವಿಕೆಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>