ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ. ಬಂಗಾಳ | ರಾಜ್ಯಪಾಲ ಆನಂದ ಬೋಸ್ ವಿರುದ್ಧ ಇ.ಸಿಗೆ ಟಿಎಂಸಿ ದೂರು

Published 18 ಏಪ್ರಿಲ್ 2024, 13:04 IST
Last Updated 18 ಏಪ್ರಿಲ್ 2024, 13:04 IST
ಅಕ್ಷರ ಗಾತ್ರ

ಕೋಲ್ಕತ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ವಿಚಾರದಲ್ಲಿ ರಾಜ್ಯಪಾಲ ಸಿ. ವಿ ಆನಂದ ಮೂಗು ತೂರಿಸುತ್ತಿದ್ದಾರೆ ಎಂದು ಆರೋಪಿಸಿ, ತೃಣಮೂಲ ಕಾಂಗ್ರೆಸ್ ಪಕ್ಷವು ಚುನಾವಣಾ ಅಯೋಗಕ್ಕೆ ದೂರು ನೀಡಿದೆ.

'ಚುನಾವಣೆ ನಡೆಯಲಿರುವ ಪ್ರದೇಶಗಳಿಗೆ ಮತದಾನದ ದಿನ ಮತ್ತು ಹಿಂದಿನ ದಿನಗಳಲ್ಲಿ ಭೇಟಿ ಕೈಗೊಳ್ಳುವ ಮೂಲಕ ಲೋಕಸಭಾ ಚುನಾವಣೆ ವಿಷಯದಲ್ಲಿ ಪದೇ ಪದೇ ಮಧ್ಯ ಪ್ರವೇಶಿಸುತ್ತಿದ್ದಾರೆ’ಎಂದು ದೂರಿನಲ್ಲಿ ಟಿಎಂಸಿ ಹೇಳಿದೆ.

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ಮುನ್ನಾದಿನವಾದ ಏ.18ರಂದು ಉದ್ದೇಶಿತ ಕೂಚ್‌ ಬಿಹಾರ್‌ ಪ್ರವಾಸವನ್ನು ರದ್ದುಗೊಳಿಸುವಂತೆ ಆನಂದ ಬೋಸ್ ಅವರಿಗೆ ಚುನಾವಣಾ ಆಯೋಗವು ಸಲಹೆ ನೀಡಿತ್ತು. ಬೋಸ್‌ ಅವರು ಭೇಟಿ ನೀಡಿದರೆ ಅದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. 

ಏ.19ರಂದು ಕೂಚ್‌ ಬಿಹಾರ್‌ನಲ್ಲಿ ಮತದಾನ ನಡೆಯಲಿದ್ದು ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT