<p><strong>ನವದೆಹಲಿ:</strong> ಸಂಸತ್ತಿನಲ್ಲಿ ನೀಟ್ ವಿಷಯದಲ್ಲಿ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದ ಪರಿಣಾಮ ಕಲಾಪವನ್ನು ಜುಲೈ 1, ಸೋಮವಾರಕ್ಕೆ ಮುಂದೂಡಲಾಗಿದೆ. </p><p>ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ನಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದವು. ಅಪರಾಹ್ನ 12ಕ್ಕೆ ಸದನ ಮತ್ತೆ ಸೇರಿದಾಗ ನೀಟ್ ವಿಷಯದ ಕುರಿತು ಚರ್ಚೆಗೆ ವಿಪಕ್ಷಗಳ ನಾಯಕರು ಬಿಗು ಪಟ್ಟು ಹಿಡಿದರು. </p><p>ಆದರೆ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದು ಸ್ಪೀಕರ್ ಓಂ ಬಿರ್ಲಾ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದರು. </p><p>ಇದಕ್ಕೆ ಪ್ರತಿಕ್ರಿಯೆ ನೀಡಿದ ಗಾಂಗ್ರೆಸ್ ಸಂಸದ ಗೌರವ್ ಗೋಗೊಯಿ 'ವಿದ್ಯಾರ್ಥಿಗಳಿಗೆ ಈ ಕುರಿತು ತಿಳಿದಿಲ್ಲ, ನ್ಯಾಯಕ್ಕಾಗಿ ಬೇಡುತ್ತಿದ್ದಾರೆ' ಎಂದು ಹೇಳಿದರು. </p><p>ಕಲಾಪಕ್ಕೆ ತೊಂದರೆ ಮಾಡದಂತೆ ಓಂ ಬಿರ್ಲಾ ವಿನಂತಿಸಿದರು. ಮತ್ತೊಂದೆಡೆ ವಿರೋಧ ಪಕ್ಷಗಳ ನಾಯಕರು ಘೋಷಣೆಯನ್ನು ಕೂಗಿದರು. </p><p>'ರಸ್ತೆಯಲ್ಲಿ ನಡೆಸುವ ಪ್ರತಿಭಟನೆಗೂ ಸದನದ ಒಳಗೆ ನಡೆಸುವ ಪ್ರತಿಭಟನೆಗೂ ವ್ಯತ್ಯಾಸವಿದೆ. ಕಲಾಪ ಸುಗಮವಾಗಿ ನಡೆಯುವುದು ಬೇಡವೇ? ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ವೇಳೆ ನೀಟ್ ವಿಷಯದ ಕುರಿತು ಚರ್ಚಿಸಲು ಬಯಸುವುದಿಲ್ಲವೇ' ಎಂದು ಬಿರ್ಲಾ ಹೇಳಿದರು. </p>.NEET ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲಿ: ರಾಹುಲ್ ಗಾಂಧಿ ಆಗ್ರಹ.Parliament | ಓಂ ಬಿರ್ಲಾ ಲೋಕಸಭಾ ಸ್ಪೀಕರ್, ಮೊದಲ ದಿನವೇ ಸದನದಲ್ಲಿ ಗದ್ದಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸತ್ತಿನಲ್ಲಿ ನೀಟ್ ವಿಷಯದಲ್ಲಿ ವಿರೋಧ ಪಕ್ಷಗಳು ಗದ್ದಲ ಎಬ್ಬಿಸಿದ ಪರಿಣಾಮ ಕಲಾಪವನ್ನು ಜುಲೈ 1, ಸೋಮವಾರಕ್ಕೆ ಮುಂದೂಡಲಾಗಿದೆ. </p><p>ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ನಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದವು. ಅಪರಾಹ್ನ 12ಕ್ಕೆ ಸದನ ಮತ್ತೆ ಸೇರಿದಾಗ ನೀಟ್ ವಿಷಯದ ಕುರಿತು ಚರ್ಚೆಗೆ ವಿಪಕ್ಷಗಳ ನಾಯಕರು ಬಿಗು ಪಟ್ಟು ಹಿಡಿದರು. </p><p>ಆದರೆ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದು ಸ್ಪೀಕರ್ ಓಂ ಬಿರ್ಲಾ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದರು. </p><p>ಇದಕ್ಕೆ ಪ್ರತಿಕ್ರಿಯೆ ನೀಡಿದ ಗಾಂಗ್ರೆಸ್ ಸಂಸದ ಗೌರವ್ ಗೋಗೊಯಿ 'ವಿದ್ಯಾರ್ಥಿಗಳಿಗೆ ಈ ಕುರಿತು ತಿಳಿದಿಲ್ಲ, ನ್ಯಾಯಕ್ಕಾಗಿ ಬೇಡುತ್ತಿದ್ದಾರೆ' ಎಂದು ಹೇಳಿದರು. </p><p>ಕಲಾಪಕ್ಕೆ ತೊಂದರೆ ಮಾಡದಂತೆ ಓಂ ಬಿರ್ಲಾ ವಿನಂತಿಸಿದರು. ಮತ್ತೊಂದೆಡೆ ವಿರೋಧ ಪಕ್ಷಗಳ ನಾಯಕರು ಘೋಷಣೆಯನ್ನು ಕೂಗಿದರು. </p><p>'ರಸ್ತೆಯಲ್ಲಿ ನಡೆಸುವ ಪ್ರತಿಭಟನೆಗೂ ಸದನದ ಒಳಗೆ ನಡೆಸುವ ಪ್ರತಿಭಟನೆಗೂ ವ್ಯತ್ಯಾಸವಿದೆ. ಕಲಾಪ ಸುಗಮವಾಗಿ ನಡೆಯುವುದು ಬೇಡವೇ? ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ವೇಳೆ ನೀಟ್ ವಿಷಯದ ಕುರಿತು ಚರ್ಚಿಸಲು ಬಯಸುವುದಿಲ್ಲವೇ' ಎಂದು ಬಿರ್ಲಾ ಹೇಳಿದರು. </p>.NEET ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲಿ: ರಾಹುಲ್ ಗಾಂಧಿ ಆಗ್ರಹ.Parliament | ಓಂ ಬಿರ್ಲಾ ಲೋಕಸಭಾ ಸ್ಪೀಕರ್, ಮೊದಲ ದಿನವೇ ಸದನದಲ್ಲಿ ಗದ್ದಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>