<p><strong>ನವದೆಹಲಿ:</strong> ಲೋಕಸಭೆಗೆ 2014ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಗೆದ್ದು ಬಂದವರನ್ನು ಜೆಡಿಎಸ್ ಮೈತ್ರಿಯ ಕಾರಣ ಮುಂದಿರಿಸಿ ಕಡೆಗಣಿಸದೆ ‘ಕೈ’ ಹಿಡಿಯಬೇಕು ಎಂಬ ಅಹವಾಲನ್ನು ಕಾಂಗ್ರೆಸ್ನ ಸಂಸದರು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ.</p>.<p>ಕಳೆದ ಮಂಗಳವಾರ ಸಂಸತ್ ಭವನದಲ್ಲಿ ಸೋನಿಯಾ ಅವರನ್ನು ಭೇಟಿಯಾದ ಕಾಂಗ್ರೆಸ್ನ 9 ಜನ ಸಂಸದರು, ‘ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಗೆದ್ದು ಬಂದವರಿಗೆ ಈ ಬಾರಿ ಮೈತ್ರಿಯಿಂದಾಗಿ ಟಿಕೆಟ್ ತಪ್ಪುವ ಮುನ್ಸೂಚನೆ ದೊರೆತಿದೆ. ಅಂಥ ಏಳು ಕ್ಷೇತ್ರಗಳನ್ನು ಹೊರತುಪಡಿಸಿ ಮಿಕ್ಕ ಕಡೆಗಳಲ್ಲೇ ಮಿತ್ರ ಪಕ್ಷಕ್ಕೆ ಸ್ಥಾನ ಹಂಚಿಕೆ ಮಾಡಬೇಕು’ ಎಂಬ ಬೇಡಿಕೆ ಇರಿಸಿದ್ದಾರೆ.</p>.<p>ಚಿಕ್ಕಬಳ್ಳಾಪುರ ಸಂಸದ ಎಂ.ವೀರಪ್ಪ ಮೊಯಿಲಿ, ಕೋಲಾರದ ಕೆ.ಎಚ್. ಮುನಿಯಪ್ಪ, ತುಮಕೂರಿನ ಎಸ್.ಪಿ. ಮುದ್ದಹನುಮೇಗೌಡ, ಚಿತ್ರದುರ್ಗದ ಬಿ.ಎನ್. ಚಂದ್ರಪ್ಪ, ಚಾಮರಾಜನಗರದ ಆರ್.ಧ್ರುವನಾರಾಯಣ, ರಾಯಚೂ<br />ರಿನ ಬಿ.ವಿ. ನಾಯಕ್, ಬೆಂಗಳೂರು ಗ್ರಾಮಾಂತರದ ಡಿ.ಕೆ. ಸುರೇಶ ಈ ಬೇಡಿಕೆ ಇರಿಸಿದವರಲ್ಲಿ ಪ್ರಮುಖರು.</p>.<p>ಇವರೊಂದಿಗೆ ಚಿಕ್ಕೋಡಿಯ ಪ್ರಕಾಶ್ ಹುಕ್ಕೇರಿ ಹಾಗೂ ಬಳ್ಳಾರಿಯ ವಿ.ಎಸ್. ಉಗ್ರಪ್ಪ ಅವರೂ ಸೋನಿಯಾ ಗಾಂಧಿ ಕೊಠಡಿಗೆ ತೆರಳಿದ್ದ ನಿಯೋಗದಲ್ಲಿದ್ದರು.</p>.<p>ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿತ್ರದುರ್ಗ ಕ್ಷೇತ್ರಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 12 ಸ್ಥಾನಗಳಿಗೆ ಜೆಡಿಎಸ್ ಬೇಡಿಕೆ ಇರಿಸಿರುವ ವಿಷಯ ಗೊತ್ತಾಗಿದೆ. ಆದರೆ, ನರೇಂದ್ರ ಮೋದಿ ಅಲೆಯ ನಡುವೆಯೂ ಜಯಿಸಿರುವ ಕ್ಷೇತ್ರಗಳನ್ನು ಬಿಟ್ಟುಕೊಡುವುದು ಬೇಡ ಎಂದು ಈ ಸಂಸದರ ನಿಯೋಗವು ಮನವಿ ಮಾಡಿಕೊಂಡಿದೆ.</p>.<p>‘ಗೆದ್ದ ಕ್ಷೇತ್ರಗಳನ್ನು ಪಕ್ಷ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಆದರೂ ಈ ಕುರಿತು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂಬ ಭರವಸೆ ಸೋನಿಯಾ ಗಾಂಧಿ ಅವರಿಂದ ದೊರೆತಿದೆ. ಅಲ್ಲೇ ಇದ್ದ ರಾಹುಲ್ ಗಾಂಧಿ ಅವರಿಗೂ ಈ ಕುರಿತು ಮನವರಿಕೆ ಮಾಡಲಾಗಿದೆ ಎಂದು ಕೆಲವು ಸಂಸದರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಲ್ಬುರ್ಗಿ ಸಂಸದ, ಲೋಕಸಭೆಯ ಕಾಂಗ್ರೆಸ್ ಗುಂಪಿನ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೂ ನಮ್ಮ ಬೇಡಿಕೆಗೆ ಸಹಮತ ವ್ಯಕ್ತಪಡಿಸಿದ್ದು, ಸೋನಿಯಾ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲೋಕಸಭೆಗೆ 2014ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಗೆದ್ದು ಬಂದವರನ್ನು ಜೆಡಿಎಸ್ ಮೈತ್ರಿಯ ಕಾರಣ ಮುಂದಿರಿಸಿ ಕಡೆಗಣಿಸದೆ ‘ಕೈ’ ಹಿಡಿಯಬೇಕು ಎಂಬ ಅಹವಾಲನ್ನು ಕಾಂಗ್ರೆಸ್ನ ಸಂಸದರು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ.</p>.<p>ಕಳೆದ ಮಂಗಳವಾರ ಸಂಸತ್ ಭವನದಲ್ಲಿ ಸೋನಿಯಾ ಅವರನ್ನು ಭೇಟಿಯಾದ ಕಾಂಗ್ರೆಸ್ನ 9 ಜನ ಸಂಸದರು, ‘ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಗೆದ್ದು ಬಂದವರಿಗೆ ಈ ಬಾರಿ ಮೈತ್ರಿಯಿಂದಾಗಿ ಟಿಕೆಟ್ ತಪ್ಪುವ ಮುನ್ಸೂಚನೆ ದೊರೆತಿದೆ. ಅಂಥ ಏಳು ಕ್ಷೇತ್ರಗಳನ್ನು ಹೊರತುಪಡಿಸಿ ಮಿಕ್ಕ ಕಡೆಗಳಲ್ಲೇ ಮಿತ್ರ ಪಕ್ಷಕ್ಕೆ ಸ್ಥಾನ ಹಂಚಿಕೆ ಮಾಡಬೇಕು’ ಎಂಬ ಬೇಡಿಕೆ ಇರಿಸಿದ್ದಾರೆ.</p>.<p>ಚಿಕ್ಕಬಳ್ಳಾಪುರ ಸಂಸದ ಎಂ.ವೀರಪ್ಪ ಮೊಯಿಲಿ, ಕೋಲಾರದ ಕೆ.ಎಚ್. ಮುನಿಯಪ್ಪ, ತುಮಕೂರಿನ ಎಸ್.ಪಿ. ಮುದ್ದಹನುಮೇಗೌಡ, ಚಿತ್ರದುರ್ಗದ ಬಿ.ಎನ್. ಚಂದ್ರಪ್ಪ, ಚಾಮರಾಜನಗರದ ಆರ್.ಧ್ರುವನಾರಾಯಣ, ರಾಯಚೂ<br />ರಿನ ಬಿ.ವಿ. ನಾಯಕ್, ಬೆಂಗಳೂರು ಗ್ರಾಮಾಂತರದ ಡಿ.ಕೆ. ಸುರೇಶ ಈ ಬೇಡಿಕೆ ಇರಿಸಿದವರಲ್ಲಿ ಪ್ರಮುಖರು.</p>.<p>ಇವರೊಂದಿಗೆ ಚಿಕ್ಕೋಡಿಯ ಪ್ರಕಾಶ್ ಹುಕ್ಕೇರಿ ಹಾಗೂ ಬಳ್ಳಾರಿಯ ವಿ.ಎಸ್. ಉಗ್ರಪ್ಪ ಅವರೂ ಸೋನಿಯಾ ಗಾಂಧಿ ಕೊಠಡಿಗೆ ತೆರಳಿದ್ದ ನಿಯೋಗದಲ್ಲಿದ್ದರು.</p>.<p>ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿತ್ರದುರ್ಗ ಕ್ಷೇತ್ರಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 12 ಸ್ಥಾನಗಳಿಗೆ ಜೆಡಿಎಸ್ ಬೇಡಿಕೆ ಇರಿಸಿರುವ ವಿಷಯ ಗೊತ್ತಾಗಿದೆ. ಆದರೆ, ನರೇಂದ್ರ ಮೋದಿ ಅಲೆಯ ನಡುವೆಯೂ ಜಯಿಸಿರುವ ಕ್ಷೇತ್ರಗಳನ್ನು ಬಿಟ್ಟುಕೊಡುವುದು ಬೇಡ ಎಂದು ಈ ಸಂಸದರ ನಿಯೋಗವು ಮನವಿ ಮಾಡಿಕೊಂಡಿದೆ.</p>.<p>‘ಗೆದ್ದ ಕ್ಷೇತ್ರಗಳನ್ನು ಪಕ್ಷ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಆದರೂ ಈ ಕುರಿತು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂಬ ಭರವಸೆ ಸೋನಿಯಾ ಗಾಂಧಿ ಅವರಿಂದ ದೊರೆತಿದೆ. ಅಲ್ಲೇ ಇದ್ದ ರಾಹುಲ್ ಗಾಂಧಿ ಅವರಿಗೂ ಈ ಕುರಿತು ಮನವರಿಕೆ ಮಾಡಲಾಗಿದೆ ಎಂದು ಕೆಲವು ಸಂಸದರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಲ್ಬುರ್ಗಿ ಸಂಸದ, ಲೋಕಸಭೆಯ ಕಾಂಗ್ರೆಸ್ ಗುಂಪಿನ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೂ ನಮ್ಮ ಬೇಡಿಕೆಗೆ ಸಹಮತ ವ್ಯಕ್ತಪಡಿಸಿದ್ದು, ಸೋನಿಯಾ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>