ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ಪ್ರದೇಶ: ವೈಎಸ್‌ಆರ್‌ಸಿಪಿ ಶಾಸಕ ಕಾಂಗ್ರೆಸ್‌ಗೆ

Published 6 ಏಪ್ರಿಲ್ 2024, 13:53 IST
Last Updated 6 ಏಪ್ರಿಲ್ 2024, 13:53 IST
ಅಕ್ಷರ ಗಾತ್ರ

ಕಡಪ (ಆಂಧ್ರ ಪ್ರದೇಶ): ಪೂತಲಪಟ್ಟು ಶಾಸಕ ಎಂ.ಎಸ್‌. ಬಾಬು ಅವರು ಆಡಳಿತಾರೂಢ ವೈಎಸ್‌ಆರ್‌ಸಿಪಿ ತೊರೆದು ಶನಿವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಎಪಿಸಿಸಿ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಅವರ ಸಮ್ಮುಖದಲ್ಲಿ ಬಾಬು ಅವರು ಪಕ್ಷಕ್ಕೆ ಸೇರಿದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಾಬು ಅವರಿಗೆ ವೈಎಸ್‌ಆರ್‌ಸಿಪಿ ಟಿಕೆಟ್‌ ನಿರಾಕರಿಸಿತ್ತು.

ಚುನಾವಣೆಗೂ ಮುನ್ನ ಬಾಬು ಅವರು ಕಾಂಗ್ರೆಸ್‌ಗೆ ಸೇರಿರುವುದರಿಂದ ವೈಎಸ್‌ಆರ್‌ಸಿಪಿಗೆ ಹಿನ್ನಡೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಶರ್ಮಿಳಾ ಅವರು ಬಾಬು ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದರು ಎಂದೂ ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT