ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸಚಿನ್ ಪೈಲಟ್ ಅವರನ್ನು ವಾರದ ಹಿಂದೆ ಬೇನಿವಾಲ್ ಭೇಟಿಯಾಗಿದ್ದರು. ಆದರೆ, ಯಾವುದೇ ಒಪ್ಪಂದಕ್ಕೆ ಬರಲು ಅವರಿಗೆ ಸಾಧ್ಯವಾಗಿರಲಿಲ್ಲ. ಕಾಂಗ್ರೆಸ್ ಪಕ್ಷದ ಜತೆಗೆ ಚೌಕಾಶಿ ಮಾಡಿದ್ದ ಬೇನಿವಾಲ್ ಏಳು ಕ್ಷೇತ್ರಗಳಿಗೆ ಬೇಡಿಕೆ ಇರಿಸಿದ್ದರು ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.