2019ರ ಚುನವಣೆಯ ಹಾಗೆ ಈ ಚುನಾವಣೆಯಲ್ಲೂ ಎಡಪಕ್ಷಗಳು ಖಾತೆ ತೆರೆಯುವಲ್ಲಿ ವಿಫಲವಾಗಿವೆ. ಮಾಲ್ಡಾ ದಕ್ಷಿಣ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆಲುವಿನ ಹಾದಿಯಲ್ಲಿದೆ. ಬರರಾಂಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿದ್ದ ಆಧೀರ್ ರಂಜನ್ ಚೌಧರಿ ಟಿಎಂಸಿಯ ಯೂಸುಫ್ ಪಠಾಣ್ ಅವರ ವಿರುದ್ಧ 85 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಹಿಂದೆ ಇದ್ದಾರೆ.
ಟಿಎಂಸಿ ನಾಯಕ, ಹಾಲಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಅಭಿಜಿತ್ ದಾಸ್ ಅವರಿಗಿಂತ 707,360 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.