<p><strong>ಭೋಪಾಲ್:</strong> 2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಬಿಜೆಪಿಗೆ ಬುಧವಾರ ಸೇರ್ಪಡೆಯಾಗಿದ್ದಾರೆ.</p>.<p>ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರು ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ. ಹಾಗಾಗಿ ಇಲ್ಲಿ ತೀವ್ರ ಸ್ಪರ್ಧೆ ನಿರೀಕ್ಷಿಸಲಾಗಿದೆ.</p>.<p>ಪ್ರಜ್ಞಾ ಅವರು ಬಿಜೆಪಿ ಸೇರಿದ ಕೆಲವೇ ತಾಸಿನಲ್ಲಿ ಭೋಪಾಲ್ನಿಂದ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಹಿಂದುತ್ವವನ್ನು ಚುನಾವಣಾ ಪ್ರಚಾರದ ಮುಂಚೂಣಿಗೆ ತರುವುದು ಈ ನಿರ್ಧಾರದ ಹಿಂದಿನ ಉದ್ದೇಶ ಎನ್ನಲಾಗಿದೆ.</p>.<p>ಪ್ರಜ್ಞಾ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಅವರ ವಿರುದ್ಧ ಕಠಿಣವಾದ ಮೋಕಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಈ ಕಾಯ್ದೆಯನ್ನು ಈಗ ರಾಷ್ಟ್ರೀಯ ತನಿಖಾ ತಂಡವು (ಎನ್ಐಎ) ಕೈಬಿಟ್ಟಿದೆ. ಹಾಗಿದ್ದರೂ ಅವರು ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.</p>.<p>ಮಧ್ಯ ಪ್ರದೇಶದ ಬಿಂಧ್ ಜಿಲ್ಲೆಯವರಾದ ಪ್ರಜ್ಞಾ ಅವರು ಸುದೀರ್ಘ ಕಾಲದಿಂದ ಸಂಘ ಪರಿವಾರದ ಜತೆಗೆ ನಂಟು ಹೊಂದಿದ್ದಾರೆ. ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನಲ್ಲಿದ್ದರು. ಬಳಿಕ ವಿಶ್ವಹಿಂದೂ ಪರಿಷತ್ನ ಮಹಿಳಾ ಘಟಕ ದುರ್ಗಾ ವಾಹಿನಿಯಲ್ಲಿ ಸಕ್ರಿಯರಾಗಿದ್ದರು.</p>.<p>1989ರಿಂದಲೇ ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತಿದೆ. ಈ ಕ್ಷೇತ್ರದಲ್ಲಿ ಒಟ್ಟು 18 ಲಕ್ಷ ಮತದಾರರಿದ್ದು ಅವರ ಪೈಕಿ 4.5 ಲಕ್ಷ ಮುಸ್ಲಿಮರಾಗಿದ್ದಾರೆ. ದಿಗ್ವಿಜಯ್ ಅವರನ್ನು ಇಲ್ಲಿಂದ ಕಣಕ್ಕೆ ಇಳಿಸಲು ಕಾಂಗ್ರೆಸ್ ತೀರ್ಮಾನಿಸಿದ ಬಳಿಕ ಅವರನ್ನು ಎದುರಿಸುವ ಸಮರ್ಥ ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ನಡೆಸಿತ್ತು.</p>.<p>2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭೋಪಾಲ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ಕ್ಷೇತ್ರಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಗೆದ್ದಿತ್ತು. ಅಲ್ಲದೆ, ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ಗೆಲುವಿನ ಅಂತರ ಕಡಿಮೆಯಾಗಿತ್ತು.</p>.<p>***</p>.<p>ಸಾಧ್ವಿ ಪ್ರಜ್ಞಾ ಅವರನ್ನು ಭೋಪಾಲ್ಗೆ ಸ್ವಾಗತಿಸುತ್ತೇನೆ. ಸುಂದರ ನಗರದ ಶಾಂತ, ಸುಶಿಕ್ಷಿತ ಮತ್ತು ಘನತೆಯಿಂದ ಕೂಡಿದ ವಾತಾವರಣವು ಅವರನ್ನು ಇಲ್ಲಿಗೆ ಆಕರ್ಷಿರಬಹುದು</p>.<p><strong>-ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ಅಭ್ಯರ್ಥಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> 2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಬಿಜೆಪಿಗೆ ಬುಧವಾರ ಸೇರ್ಪಡೆಯಾಗಿದ್ದಾರೆ.</p>.<p>ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರು ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ. ಹಾಗಾಗಿ ಇಲ್ಲಿ ತೀವ್ರ ಸ್ಪರ್ಧೆ ನಿರೀಕ್ಷಿಸಲಾಗಿದೆ.</p>.<p>ಪ್ರಜ್ಞಾ ಅವರು ಬಿಜೆಪಿ ಸೇರಿದ ಕೆಲವೇ ತಾಸಿನಲ್ಲಿ ಭೋಪಾಲ್ನಿಂದ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಹಿಂದುತ್ವವನ್ನು ಚುನಾವಣಾ ಪ್ರಚಾರದ ಮುಂಚೂಣಿಗೆ ತರುವುದು ಈ ನಿರ್ಧಾರದ ಹಿಂದಿನ ಉದ್ದೇಶ ಎನ್ನಲಾಗಿದೆ.</p>.<p>ಪ್ರಜ್ಞಾ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಅವರ ವಿರುದ್ಧ ಕಠಿಣವಾದ ಮೋಕಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಈ ಕಾಯ್ದೆಯನ್ನು ಈಗ ರಾಷ್ಟ್ರೀಯ ತನಿಖಾ ತಂಡವು (ಎನ್ಐಎ) ಕೈಬಿಟ್ಟಿದೆ. ಹಾಗಿದ್ದರೂ ಅವರು ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.</p>.<p>ಮಧ್ಯ ಪ್ರದೇಶದ ಬಿಂಧ್ ಜಿಲ್ಲೆಯವರಾದ ಪ್ರಜ್ಞಾ ಅವರು ಸುದೀರ್ಘ ಕಾಲದಿಂದ ಸಂಘ ಪರಿವಾರದ ಜತೆಗೆ ನಂಟು ಹೊಂದಿದ್ದಾರೆ. ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನಲ್ಲಿದ್ದರು. ಬಳಿಕ ವಿಶ್ವಹಿಂದೂ ಪರಿಷತ್ನ ಮಹಿಳಾ ಘಟಕ ದುರ್ಗಾ ವಾಹಿನಿಯಲ್ಲಿ ಸಕ್ರಿಯರಾಗಿದ್ದರು.</p>.<p>1989ರಿಂದಲೇ ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತಿದೆ. ಈ ಕ್ಷೇತ್ರದಲ್ಲಿ ಒಟ್ಟು 18 ಲಕ್ಷ ಮತದಾರರಿದ್ದು ಅವರ ಪೈಕಿ 4.5 ಲಕ್ಷ ಮುಸ್ಲಿಮರಾಗಿದ್ದಾರೆ. ದಿಗ್ವಿಜಯ್ ಅವರನ್ನು ಇಲ್ಲಿಂದ ಕಣಕ್ಕೆ ಇಳಿಸಲು ಕಾಂಗ್ರೆಸ್ ತೀರ್ಮಾನಿಸಿದ ಬಳಿಕ ಅವರನ್ನು ಎದುರಿಸುವ ಸಮರ್ಥ ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ನಡೆಸಿತ್ತು.</p>.<p>2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭೋಪಾಲ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ಕ್ಷೇತ್ರಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಗೆದ್ದಿತ್ತು. ಅಲ್ಲದೆ, ಬಿಜೆಪಿ ಗೆದ್ದ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ಗೆಲುವಿನ ಅಂತರ ಕಡಿಮೆಯಾಗಿತ್ತು.</p>.<p>***</p>.<p>ಸಾಧ್ವಿ ಪ್ರಜ್ಞಾ ಅವರನ್ನು ಭೋಪಾಲ್ಗೆ ಸ್ವಾಗತಿಸುತ್ತೇನೆ. ಸುಂದರ ನಗರದ ಶಾಂತ, ಸುಶಿಕ್ಷಿತ ಮತ್ತು ಘನತೆಯಿಂದ ಕೂಡಿದ ವಾತಾವರಣವು ಅವರನ್ನು ಇಲ್ಲಿಗೆ ಆಕರ್ಷಿರಬಹುದು</p>.<p><strong>-ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ಅಭ್ಯರ್ಥಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>