ಶುಕ್ರವಾರವೂ ಸಿಇಸಿ ಸಭೆ ಸೇರಲಿದ್ದು, ಅಮೇಠಿ, ರಾಯ್ಬರೇಲಿ ಮುಂತಾದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಖೈರುಗೊಳಿಸುವ ಸಾಧ್ಯತೆ ಇದೆ.
ಇನ್ನೊಂದು ಮೂಲಗಳ ಪ್ರಕಾರ ನಟಿ ಸ್ವರಾ ಭಾಸ್ಕರ್ ಅವರು ಮುಂಬೈ ಉತ್ತರ ಕೇಂದ್ರ ಕ್ಷೇತ್ರದಿಂದ ಟಿಕೆಟ್ ಬಯಸಿ ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿದ್ದಾರೆ. ಮಹಾರಾಷ್ಟ್ರದ ಕಾಂಗ್ರೆಸ್ ಉಸ್ತುವಾರಿ ರಮೇಶ್ ಚನ್ನಿತ್ತಲ ಮೂಲಕ ಅವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.