<p><strong>ನವದೆಹಲಿ:</strong> ಲೋಕಸಭಾ ಚುನಾವಣೆಯ ಪ್ರತಿ ಹಂತದ ಮತದಾನ ಮುಗಿದ 48 ಗಂಟೆಗಳ ಒಳಗೆ ಮತ ಪ್ರಮಾಣದ ಮಾಹಿತಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.</p><p>ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ನ್ಯಾಯ ಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಸಂಜೀವ್ ಖನ್ನಾ ಅವರು ಇದ್ದ ನ್ಯಾಯಪೀಠ, ಒಂದು ವಾರದ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಆಯೋಗಕ್ಕೆ ಸೂಚಿಸಿದೆ.</p>.ಲೋಕಸಭೆ ಚುನಾವಣೆ | ಮೊದಲ ನಾಲ್ಕು ಹಂತಗಳಲ್ಲಿ ಶೇ 67ರಷ್ಟು ಮತದಾನ: ಚುನಾವಣಾ ಆಯೋಗ.<p>ಮೇ 24ರಂದು ಅರ್ಜಿ ವಿಚಾರಣೆ ನಡೆಸುವುದಾಗಿಯೂ ಪೀಠ ಹೇಳಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಎಂಬ ಎನ್ಜಿಒ ಈ ಕುರಿತು ಅರ್ಜಿ ಸಲ್ಲಿಸಿದೆ.</p><p>ಅರ್ಜಿ ವಿಚಾರಣೆ ವೇಳೆ, ‘ಮತ ಪ್ರಮಾಣಕ್ಕೆ ಸಂಬಂಧಿಸಿ ಫಾರ್ಮ್ 17ಸಿ ದತ್ತಾಂಶವನ್ನು ಬಹಿರಂಗಪಡಿಸುವುದಕ್ಕೆ ಇರುವ ನಿರ್ಬಂಧ ಏನು? ಚುನಾವಣಾ ಆಯೋಗ ಈ ಎಲ್ಲ ಮಾಹಿತಿಯನ್ನು ಬಹಿರಂಗಪಡಿಸಬೇಕು’ ಎಂದು ಆಯೋಗದ ಪರ ಹಾಜರಿದ್ದ ಹಿರಿಯ ವಕೀಲರಾದ ಮಣಿಂದರ್ ಸಿಂಗ್ ಹಾಗೂ ಅಮಿತ್ ಶರ್ಮಾ ಅವರನ್ನು ಉದ್ದೇಶಿಸಿ ನ್ಯಾಯಪೀಠ ಹೇಳಿತು.</p>.ಮತದಾನ ಪ್ರಮಾಣ: ಎಐಸಿಸಿ ಅಧ್ಯಕ್ಷರ ಪತ್ರಕ್ಕೆ ಚುನಾವಣಾ ಆಯೋಗ ತೀವ್ರ ಆಕ್ಷೇಪ.<p>ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ‘ಈ ವಿಚಾರದಲ್ಲಿ ಯಾವುದೇ ತೊಂದರೆ ಇಲ್ಲ. ಫಾರ್ಮ್ 17ಸಿ ಕ್ರೋಡೀಕರಣ ಸೇರಿದಂತೆ ಇಡೀ ಪ್ರಕ್ರಿಯೆ ಪೂರ್ಣಗೊಳ್ಳಲು ಸಮಯ ಬೇಕಾಗುತ್ತದೆ’ ಎಂದು ತಿಳಿಸಿದರು.</p><p>ಎಡಿಆರ್ ಪರ ಹಾಜರಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್,‘ಎಲ್ಲ ಹಂತಗಳಲ್ಲಿ ಮತ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡುಬಂದಿದೆ’ ಎಂದು ಪೀಠಕ್ಕೆ ತಿಳಿಸಿದರು.</p><p>‘ಈ ಅರ್ಜಿಯನ್ನು 2019ರಲ್ಲಿ ಸಲ್ಲಿಸ ಲಾಗಿದ್ದು, ಆಯೋಗಕ್ಕೆ ಇದಕ್ಕೆ ವಿಸ್ತೃತ ಪ್ರತಿಕ್ರಿಯೆಯನ್ನೂ ನೀಡಿದೆ. ಆದರೆ, ಅರ್ಜಿದಾರರು ಮಾತ್ರ ಯಾವುದೇ ಪ್ರತ್ಯುತ್ತರ ನೀಡಿಲ್ಲ‘ ಎಂದು ಆಯೋಗದ ಪರ ವಕೀಲರು ಹೇಳಿದರು.</p>. ಚುನಾವಣಾ ಆಯೋಗ ಭೇಟಿ ಮಾಡಲಿರುವ ‘ಇಂಡಿಯಾ’ ನಾಯಕರು.<p>‘ಮತ ಪ್ರಮಾಣ ಕುರಿತ ಮಾಹಿತಿ ಸಂಗ್ರಹಕ್ಕೆ ಸಮಯ ತಗಲುತ್ತದೆ. ಪ್ರತಿ ಮತಗಟ್ಟೆಯ ಚುನಾವಣಾ ಏಜೆಂಟ್ಗೆ ಈ ಮಾಹಿತಿಯ ಪ್ರತಿಯನ್ನು ಒದಗಿಸಲಾಗುತ್ತದೆ. ಒಂದು ವೇಳೆ, ಮತ ಪ್ರಮಾಣದ ಬಗ್ಗೆ ಯಾರಿಗಾದರೂ ತಕರಾರು ಇದ್ದಲ್ಲಿ ಅದು ಅಭ್ಯರ್ಥಿಗೆ ಇರುತ್ತದೆ. ಮತ ಪ್ರಮಾಣದಲ್ಲಿ ವ್ಯತ್ಯಾಸವಿದೆ ಎಂಬುದು ಕಂಡುಬಂದಲ್ಲಿ ಅಭ್ಯರ್ಥಿಗಳೇ ಚುನಾವಣಾ ತಕರಾರು ಅರ್ಜಿ ಸಲ್ಲಿಸುತ್ತಾರೆ’ ಎಂದೂ ಹೇಳಿದರು.</p><p>‘ಮತದಾನ ನಡೆಯುತ್ತಿರುವ ಈ ಹಂತದಲ್ಲಿ ಈ ರೀತಿಯ ಅರ್ಜಿಗಳನ್ನು ಸಲ್ಲಿಸುವುದರಿಂದ ಮೊದಲ ಬಾರಿಗೆ ಮತ ಹಾಕುವವರು ಸೇರಿದಂತೆ ದೊಡ್ಡ ಸಂಖ್ಯೆಯ ಮತದಾರರ ಉತ್ಸಾಹಕ್ಕೆ ತಣ್ಣೀರೆರೆಚಿದಂತಾಗುತ್ತದೆ’ ಎಂದು ಆಯೋಗದ ಪರ ವಕೀಲರು ಪ್ರತಿಪಾದಿಸಿದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ‘ಈ ಅರ್ಜಿ ಹಲವು ವರ್ಷಗಳಿಂದ ನ್ಯಾಯಾ ಲಯದಲ್ಲಿ ಬಾಕಿ ಇರುವ ಕಾರಣ, ಪ್ರತಿಕ್ರಿಯೆ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಅವಕಾಶ ನೀಡಬೇಕಾಗುತ್ತದೆ. ಹೀಗಾಗಿಯೇ ಸಮಯಾವಕಾಶ ನೀಡಲಾಗಿದೆ’ ಎಂದು ಹೇಳಿದೆ.</p>.ಎಸ್ಎಲ್ಯು ಇರಿಸಲು ಹೊಸ ನಿಯಮ: ಚುನಾವಣಾ ಆಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲೋಕಸಭಾ ಚುನಾವಣೆಯ ಪ್ರತಿ ಹಂತದ ಮತದಾನ ಮುಗಿದ 48 ಗಂಟೆಗಳ ಒಳಗೆ ಮತ ಪ್ರಮಾಣದ ಮಾಹಿತಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.</p><p>ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹಾಗೂ ನ್ಯಾಯ ಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಸಂಜೀವ್ ಖನ್ನಾ ಅವರು ಇದ್ದ ನ್ಯಾಯಪೀಠ, ಒಂದು ವಾರದ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಆಯೋಗಕ್ಕೆ ಸೂಚಿಸಿದೆ.</p>.ಲೋಕಸಭೆ ಚುನಾವಣೆ | ಮೊದಲ ನಾಲ್ಕು ಹಂತಗಳಲ್ಲಿ ಶೇ 67ರಷ್ಟು ಮತದಾನ: ಚುನಾವಣಾ ಆಯೋಗ.<p>ಮೇ 24ರಂದು ಅರ್ಜಿ ವಿಚಾರಣೆ ನಡೆಸುವುದಾಗಿಯೂ ಪೀಠ ಹೇಳಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಎಂಬ ಎನ್ಜಿಒ ಈ ಕುರಿತು ಅರ್ಜಿ ಸಲ್ಲಿಸಿದೆ.</p><p>ಅರ್ಜಿ ವಿಚಾರಣೆ ವೇಳೆ, ‘ಮತ ಪ್ರಮಾಣಕ್ಕೆ ಸಂಬಂಧಿಸಿ ಫಾರ್ಮ್ 17ಸಿ ದತ್ತಾಂಶವನ್ನು ಬಹಿರಂಗಪಡಿಸುವುದಕ್ಕೆ ಇರುವ ನಿರ್ಬಂಧ ಏನು? ಚುನಾವಣಾ ಆಯೋಗ ಈ ಎಲ್ಲ ಮಾಹಿತಿಯನ್ನು ಬಹಿರಂಗಪಡಿಸಬೇಕು’ ಎಂದು ಆಯೋಗದ ಪರ ಹಾಜರಿದ್ದ ಹಿರಿಯ ವಕೀಲರಾದ ಮಣಿಂದರ್ ಸಿಂಗ್ ಹಾಗೂ ಅಮಿತ್ ಶರ್ಮಾ ಅವರನ್ನು ಉದ್ದೇಶಿಸಿ ನ್ಯಾಯಪೀಠ ಹೇಳಿತು.</p>.ಮತದಾನ ಪ್ರಮಾಣ: ಎಐಸಿಸಿ ಅಧ್ಯಕ್ಷರ ಪತ್ರಕ್ಕೆ ಚುನಾವಣಾ ಆಯೋಗ ತೀವ್ರ ಆಕ್ಷೇಪ.<p>ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ‘ಈ ವಿಚಾರದಲ್ಲಿ ಯಾವುದೇ ತೊಂದರೆ ಇಲ್ಲ. ಫಾರ್ಮ್ 17ಸಿ ಕ್ರೋಡೀಕರಣ ಸೇರಿದಂತೆ ಇಡೀ ಪ್ರಕ್ರಿಯೆ ಪೂರ್ಣಗೊಳ್ಳಲು ಸಮಯ ಬೇಕಾಗುತ್ತದೆ’ ಎಂದು ತಿಳಿಸಿದರು.</p><p>ಎಡಿಆರ್ ಪರ ಹಾಜರಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್,‘ಎಲ್ಲ ಹಂತಗಳಲ್ಲಿ ಮತ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡುಬಂದಿದೆ’ ಎಂದು ಪೀಠಕ್ಕೆ ತಿಳಿಸಿದರು.</p><p>‘ಈ ಅರ್ಜಿಯನ್ನು 2019ರಲ್ಲಿ ಸಲ್ಲಿಸ ಲಾಗಿದ್ದು, ಆಯೋಗಕ್ಕೆ ಇದಕ್ಕೆ ವಿಸ್ತೃತ ಪ್ರತಿಕ್ರಿಯೆಯನ್ನೂ ನೀಡಿದೆ. ಆದರೆ, ಅರ್ಜಿದಾರರು ಮಾತ್ರ ಯಾವುದೇ ಪ್ರತ್ಯುತ್ತರ ನೀಡಿಲ್ಲ‘ ಎಂದು ಆಯೋಗದ ಪರ ವಕೀಲರು ಹೇಳಿದರು.</p>. ಚುನಾವಣಾ ಆಯೋಗ ಭೇಟಿ ಮಾಡಲಿರುವ ‘ಇಂಡಿಯಾ’ ನಾಯಕರು.<p>‘ಮತ ಪ್ರಮಾಣ ಕುರಿತ ಮಾಹಿತಿ ಸಂಗ್ರಹಕ್ಕೆ ಸಮಯ ತಗಲುತ್ತದೆ. ಪ್ರತಿ ಮತಗಟ್ಟೆಯ ಚುನಾವಣಾ ಏಜೆಂಟ್ಗೆ ಈ ಮಾಹಿತಿಯ ಪ್ರತಿಯನ್ನು ಒದಗಿಸಲಾಗುತ್ತದೆ. ಒಂದು ವೇಳೆ, ಮತ ಪ್ರಮಾಣದ ಬಗ್ಗೆ ಯಾರಿಗಾದರೂ ತಕರಾರು ಇದ್ದಲ್ಲಿ ಅದು ಅಭ್ಯರ್ಥಿಗೆ ಇರುತ್ತದೆ. ಮತ ಪ್ರಮಾಣದಲ್ಲಿ ವ್ಯತ್ಯಾಸವಿದೆ ಎಂಬುದು ಕಂಡುಬಂದಲ್ಲಿ ಅಭ್ಯರ್ಥಿಗಳೇ ಚುನಾವಣಾ ತಕರಾರು ಅರ್ಜಿ ಸಲ್ಲಿಸುತ್ತಾರೆ’ ಎಂದೂ ಹೇಳಿದರು.</p><p>‘ಮತದಾನ ನಡೆಯುತ್ತಿರುವ ಈ ಹಂತದಲ್ಲಿ ಈ ರೀತಿಯ ಅರ್ಜಿಗಳನ್ನು ಸಲ್ಲಿಸುವುದರಿಂದ ಮೊದಲ ಬಾರಿಗೆ ಮತ ಹಾಕುವವರು ಸೇರಿದಂತೆ ದೊಡ್ಡ ಸಂಖ್ಯೆಯ ಮತದಾರರ ಉತ್ಸಾಹಕ್ಕೆ ತಣ್ಣೀರೆರೆಚಿದಂತಾಗುತ್ತದೆ’ ಎಂದು ಆಯೋಗದ ಪರ ವಕೀಲರು ಪ್ರತಿಪಾದಿಸಿದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ‘ಈ ಅರ್ಜಿ ಹಲವು ವರ್ಷಗಳಿಂದ ನ್ಯಾಯಾ ಲಯದಲ್ಲಿ ಬಾಕಿ ಇರುವ ಕಾರಣ, ಪ್ರತಿಕ್ರಿಯೆ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಅವಕಾಶ ನೀಡಬೇಕಾಗುತ್ತದೆ. ಹೀಗಾಗಿಯೇ ಸಮಯಾವಕಾಶ ನೀಡಲಾಗಿದೆ’ ಎಂದು ಹೇಳಿದೆ.</p>.ಎಸ್ಎಲ್ಯು ಇರಿಸಲು ಹೊಸ ನಿಯಮ: ಚುನಾವಣಾ ಆಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>