‘ಕರ್ನಾಟಕದಲ್ಲಿ ನೆಲೆಸಿರುವ ಬೆಟ್ಟ ಕುರುಬರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ 2022ರ ದಿ ಕಾನ್ಸ್ಟಿಟ್ಯೂಷನ್ (ಶೆಡ್ಯೂಲ್ ಟ್ರೈಬ್) ಆರ್ಡರ್ (4ನೇ ತಿದ್ದುಪಡಿ) ಮಸೂದೆ ಅಂಗೀಕರಿಸಲಾಗಿದೆ. ಈ ಸಮುದಾಯದವರನ್ನು ಎಸ್ಟಿಗೆ ಸೇರ್ಪಡೆ ಮಾಡುವಂತೆ ಕರ್ನಾಟಕ ಸರ್ಕಾರ ಮನವಿ ಮಾಡಿಕೊಂಡಿತ್ತು’ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ತಿಳಿಸಿದ್ದಾರೆ.