<p><strong>ನವದೆಹಲಿ:</strong> ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ತಿದ್ದುಪಡಿ ಮಸೂದೆಗೆ ಲೋಕಸಭೆಯು ಮಂಗಳವಾರ ಅನುಮೋದನೆ ನೀಡಿತು.</p>.<p>ಮಸೂದೆ ಬಗ್ಗೆ ಪ್ರತಿಕ್ರಿಯಿಸಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್ ಅವರು, ‘ಲಿಂಗದ ಕಾರಣಕ್ಕಾಗಿಯೇ ಬಹಿಷ್ಕಾರದ ಶಿಕ್ಷೆಯನ್ನು ಎದುರಿಸುವವರನ್ನು ರಕ್ಷಿಸುವ ಉದ್ದೇಶವನ್ನು ಈ ಮಸೂದೆಯು ಹೊಂದಿದೆ’ ಎಂದು ಹೇಳಿದರು.</p>.<p>‘ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾನೂನಾತ್ಮಕ ಮಾನ್ಯತೆ ಮತ್ತು ರಕ್ಷಣೆಯನ್ನೂ ಒದಗಿಸಲಿದೆ’ ಎಂದು ಅವರು ಒತ್ತಿ ಹೇಳಿದರು.</p>.<p>2019ರ ಕಾನೂನು ಇಂಥವರ ವಿರುದ್ಧದ ದೌರ್ಜನ್ಯಕ್ಕೆ ಗರಿಷ್ಠ 2 ವರ್ಷ ಕಾರಾಗೃಹ ಶಿಕ್ಷೆ ನೀಡುವ ಅವಕಾಶ ನೀಡುತ್ತಿತ್ತು. ತಿದ್ದುಪಡಿ ಮಸೂದೆಯು ಗರಿಷ್ಠ 14 ವರ್ಷ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲು ಅವಕಾಶ ನೀಡುತ್ತದೆ ಎಂದು ಹೇಳಿದರು.</p>.<p>ಪ್ರಸ್ತಾವಿತ ಮಸೂದೆಯು ಲಿಂಗತ್ವದ ಚಹರೆಗಳನ್ನು ನಿರ್ಣಯಿಸುವ ಹಕ್ಕನ್ನು ಕಸಿದುಕೊಳ್ಳಲಿದೆ. ಇದನ್ನು ಸ್ಥಾಯಿ ಸಮಿತಿಗೆ ಕಳುಹಿಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ತಿದ್ದುಪಡಿ ಮಸೂದೆಗೆ ಲೋಕಸಭೆಯು ಮಂಗಳವಾರ ಅನುಮೋದನೆ ನೀಡಿತು.</p>.<p>ಮಸೂದೆ ಬಗ್ಗೆ ಪ್ರತಿಕ್ರಿಯಿಸಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್ ಅವರು, ‘ಲಿಂಗದ ಕಾರಣಕ್ಕಾಗಿಯೇ ಬಹಿಷ್ಕಾರದ ಶಿಕ್ಷೆಯನ್ನು ಎದುರಿಸುವವರನ್ನು ರಕ್ಷಿಸುವ ಉದ್ದೇಶವನ್ನು ಈ ಮಸೂದೆಯು ಹೊಂದಿದೆ’ ಎಂದು ಹೇಳಿದರು.</p>.<p>‘ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾನೂನಾತ್ಮಕ ಮಾನ್ಯತೆ ಮತ್ತು ರಕ್ಷಣೆಯನ್ನೂ ಒದಗಿಸಲಿದೆ’ ಎಂದು ಅವರು ಒತ್ತಿ ಹೇಳಿದರು.</p>.<p>2019ರ ಕಾನೂನು ಇಂಥವರ ವಿರುದ್ಧದ ದೌರ್ಜನ್ಯಕ್ಕೆ ಗರಿಷ್ಠ 2 ವರ್ಷ ಕಾರಾಗೃಹ ಶಿಕ್ಷೆ ನೀಡುವ ಅವಕಾಶ ನೀಡುತ್ತಿತ್ತು. ತಿದ್ದುಪಡಿ ಮಸೂದೆಯು ಗರಿಷ್ಠ 14 ವರ್ಷ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಲು ಅವಕಾಶ ನೀಡುತ್ತದೆ ಎಂದು ಹೇಳಿದರು.</p>.<p>ಪ್ರಸ್ತಾವಿತ ಮಸೂದೆಯು ಲಿಂಗತ್ವದ ಚಹರೆಗಳನ್ನು ನಿರ್ಣಯಿಸುವ ಹಕ್ಕನ್ನು ಕಸಿದುಕೊಳ್ಳಲಿದೆ. ಇದನ್ನು ಸ್ಥಾಯಿ ಸಮಿತಿಗೆ ಕಳುಹಿಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>