ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರ ಮಹಾತ್ಮೆ: ಕೇರಳದ ಕೊಲ್ಲಂ

Published 25 ಮಾರ್ಚ್ 2024, 23:57 IST
Last Updated 25 ಮಾರ್ಚ್ 2024, 23:57 IST
ಅಕ್ಷರ ಗಾತ್ರ

ಗೋಡಂಬಿ ಉದ್ಯಮಕ್ಕೆ ಹೆಸರುವಾಸಿಯಾಗಿರುವ ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಏರುತ್ತಿದ್ದು, ಎಲ್‌ಡಿಎಫ್‌ ಮತ್ತು ರೆವೆಲ್ಯುಷನರಿ ಸೋಷಿಯಲಿಸ್ಟ್ ಪಕ್ಷದ (ಆರ್‌ಎಸ್‌ಪಿ) ಅಭ್ಯರ್ಥಿಗಳ ನಡುವಣ ನೇರ ಹಣಾಹಣಿಗೆ ವೇದಿಕೆ ಸಿದ್ಧಗೊಂಡಿದೆ.

ಈ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿ ಗೆದ್ದು ಬೀಗುತ್ತಿರುವ ಆರ್‌ಎಸ್‌ಪಿ ನಾಯಕ ಎನ್‌.ಕೆ. ಪ್ರೇಮಚಂದ್ರನ್‌ ಈ ಬಾರಿಯೂ ಕಣಕ್ಕಿಳಿದಿದ್ದಾರೆ. ಇವರ ಗೆಲುವಿನ ಓಟಕ್ಕೆ ಕಡಿವಾಣ ಹಾಕಲು ಆಡಳಿತಾರೂಢ ಸಿಪಿಎಂ ನೇತೃತ್ವದ ಎಲ್‌ಡಿಎಫ್ ಮೈತ್ರಿಕೂಟವು ಸದ್ಯ ಶಾಸಕರಾಗಿರುವ, ಸಿನಿಮಾ ನಟ ಮುಕೇಶ್‌ ಅವರನ್ನು ಅಖಾಡಕ್ಕಿಳಿಸಿದೆ. ಆರ್‌ಎಸ್‌ಪಿಯು ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಮೈತ್ರಿ ಕೂಟದ ಜೊತೆಗಿದೆ. ಈ ಬಾರಿ ರಾಜ್ಯದ ಕೆಲವು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆಂಬ ವಿಶ್ವಾಸದಲ್ಲಿರುವ ಬಿಜೆಪಿಯು ಸಿನಿಮಾ ನಟ ಜಿ. ಕೃಷ್ಣಕುಮಾರ್‌ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ.

ಕೊಲ್ಲಂ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಎಂನಿಂದ ಗೆದ್ದು ಶಾಸಕರಾಗಿರುವ ಮುಕೇಶ್‌ ಅವರು ಕ್ಷೇತ್ರದಲ್ಲಿ ಪ್ರಭಾವಿಯಾಗಿರುವುದರಿಂದ ಈ ಬಾರಿ ಗೆದ್ದೇ ಗೆಲ್ಲುತ್ತಾರೆಂಬ ನಂಬಿಕೆ ಎಲ್‌ಡಿಎಫ್‌ಗಿದೆ. ಇದು ಹಿಂದೂ ಪ್ರಾಬಲ್ಯವಿರುವ ಕ್ಷೇತ್ರವಾಗಿರುವುದರಿಂದ ಕೃಷ್ಣಕುಮಾರ್‌ ಕೂಡ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯು ಮೂರನೇ ಸ್ಥಾನ ಗಳಿಸಿತ್ತು. ಪ್ರೇಮಚಂದ್ರನ್‌ ಅವರು 4,99,677 ಮತಗಳನ್ನು ಪಡೆದು ಜಯಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT