‘ನನ್ನ ತಾಯಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವುದರಿಂದ ನಾನು ಸಭೆಗೆ ಹಾಜರಾಗಲು ಸಾಧ್ಯವಿಲ್ಲ‘ ಎಂದು ಮೆಹಬೂಬಾ ಮುಫ್ತಿ ‘ಪಿಟಿಐ‘ಗೆ ತಿಳಿಸಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಮತ್ತು ಪಿಡಿಪಿ ಎರಡನ್ನೂ 'ಇಂಡಿಯಾ' ಮೈತ್ರಿಕೂಟದ ಸಭೆಗೆ ಆಹ್ವಾನಿಸಲಾಗಿದೆ. ಎನ್ಸಿ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಶನಿವಾರ ಬೆಳಿಗ್ಗೆ ಶ್ರೀನಗರದಿಂದ ನವದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.