ಅಧಿಕಾರಿಗಳು ತಪಾಸಣೆ ಮಾಡುವ ವಿಡಿಯೊವನ್ನು ಕಾಂಗ್ರೆಸ್ ವಕ್ತಾರ ರಾಜೇಶ್ ರಾಥೋಡ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಎಂದು ಅವರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
‘ರಾಹುಲ್ ಗಾಂಧಿ ಬಳಿಕ ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್ ಅನ್ನು ಬಿಹಾರದ ಸಮಷ್ಠಿಪುರದಲ್ಲಿ ಪೊಲೀಸ್ ಅಧಿಕಾರಿಗಳಿಂದ ಚುನಾವಣಾ ಆಯೋಗ ತಪಾಸಣೆ ಮಾಡಿಸಿದೆ. ಪೊಲೀಸರ ಈ ಕ್ರಮ ಪ್ರತಿಪಕ್ಷಗಳ ಬಗ್ಗೆ ಚುನಾವಣಾ ಆಯೋಗದ ದುರುದ್ದೇಶದ ವರ್ತನೆಯನ್ನು ತೋರಿಸುತ್ತದೆ, ಇದು ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಅವರು ಬರೆದುಕೊಂಡಿದ್ದಾರೆ.