<p><strong>ತೂತುಕುಡಿ:</strong> ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ. ಕೆ ಸ್ಟಾಲಿನ್ ತೂತುಕುಡಿಯ ಸ್ಥಳೀಯ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿ ಪ್ರಚಾರ ನಡೆಸಿದರು.</p>.<p>ಇಂದು (ಮಂಗಳವಾರ) ಬೆಳಿಗ್ಗೆ ಮಾರುಕಟ್ಟೆಗೆ ಭೇಟಿ ನೀಡಿದ ಸ್ಟಾಲಿನ್, ಜನರು ಹಾಗೂ ತರಕಾರಿ ಮಾರಾಟಗಾರರೊಂದಿಗೆ ಮಾತುಕತೆ ನಡೆಸಿ ಹಲವರ ಜತೆ ಸೆಲ್ಫಿಗೆ ಪೋಸ್ ನೀಡಿದರು. ಇನ್ನೂ ಕೆಲವು ಜನರೊಂದಿಗೆ ಹಸ್ತಲಾಘವ ಮಾಡಿದರು.</p><p>ಪ್ರಚಾರದ ವೇಳೆ ಸ್ಟಾಲಿನ್ ಸಹೋದರಿ, ಸ್ಥಳೀಯ ಸಂಸದೆ ಕನಿಮೊಳಿ, ರಾಜ್ಯ ಸಚಿವರಾದ ಅನಿತಾ ಆರ್. ರಾಧಾಕೃಷ್ಣನ್ ಮತ್ತು ಗೀತಾ ಜೀವನ್ ಜೊತೆಗಿದ್ದರು.</p><p>ಸೋಮವಾರ ಸಂಜೆ ನೆರೆಯ ತಿರುನಲ್ವೇಲಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸ್ಟಾಲಿನ್, 2023ರ ಡಿಸೆಂಬರ್ನಲ್ಲಿ ಸಂಭವಿಸಿದ ಪ್ರವಾಹದ ಹಿನ್ನೆಲೆಯಲ್ಲಿ ₹37 ಸಾವಿರ ಕೋಟಿ ಪರಿಹಾರ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಇದರ ವಿರುದ್ಧ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಲಿದೆ ಎಂದು ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೂತುಕುಡಿ:</strong> ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ. ಕೆ ಸ್ಟಾಲಿನ್ ತೂತುಕುಡಿಯ ಸ್ಥಳೀಯ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿ ಪ್ರಚಾರ ನಡೆಸಿದರು.</p>.<p>ಇಂದು (ಮಂಗಳವಾರ) ಬೆಳಿಗ್ಗೆ ಮಾರುಕಟ್ಟೆಗೆ ಭೇಟಿ ನೀಡಿದ ಸ್ಟಾಲಿನ್, ಜನರು ಹಾಗೂ ತರಕಾರಿ ಮಾರಾಟಗಾರರೊಂದಿಗೆ ಮಾತುಕತೆ ನಡೆಸಿ ಹಲವರ ಜತೆ ಸೆಲ್ಫಿಗೆ ಪೋಸ್ ನೀಡಿದರು. ಇನ್ನೂ ಕೆಲವು ಜನರೊಂದಿಗೆ ಹಸ್ತಲಾಘವ ಮಾಡಿದರು.</p><p>ಪ್ರಚಾರದ ವೇಳೆ ಸ್ಟಾಲಿನ್ ಸಹೋದರಿ, ಸ್ಥಳೀಯ ಸಂಸದೆ ಕನಿಮೊಳಿ, ರಾಜ್ಯ ಸಚಿವರಾದ ಅನಿತಾ ಆರ್. ರಾಧಾಕೃಷ್ಣನ್ ಮತ್ತು ಗೀತಾ ಜೀವನ್ ಜೊತೆಗಿದ್ದರು.</p><p>ಸೋಮವಾರ ಸಂಜೆ ನೆರೆಯ ತಿರುನಲ್ವೇಲಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸ್ಟಾಲಿನ್, 2023ರ ಡಿಸೆಂಬರ್ನಲ್ಲಿ ಸಂಭವಿಸಿದ ಪ್ರವಾಹದ ಹಿನ್ನೆಲೆಯಲ್ಲಿ ₹37 ಸಾವಿರ ಕೋಟಿ ಪರಿಹಾರ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಇದರ ವಿರುದ್ಧ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಲಿದೆ ಎಂದು ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>