ಕಾರ್ಪೊರೇಟ್ ವ್ಯವಹಾರಗಳ ಸಚಿವರಾಗಿರುವ ಪಿಯೂಷ್ ಗೋಯಲ್ 2010ರಿಂದ ರಾಜ್ಯಸಭೆ ಸದಸ್ಯರಾಗಿದ್ದಾರೆ. ಅನುರಾಗ್ ಠಾಕೂರ್, ಪ್ರಲ್ಹಾದ ಜೋಶಿ ಹಾಗೂ ನಿತಿನ್ ಗಡ್ಕರಿ ತಾವು ಪ್ರತಿನಿಧಿಸುತ್ತಿರುವ ಕ್ಷೇತ್ರದಿಂದಲೇ ಮತ್ತೊಮ್ಮೆ ಅದೃಷ್ಠ ಪರೀಕ್ಷೆಗೆ ಇಳಿಯಲಿದ್ದಾರೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಾವೇರಿಯಿಂದ, ಉತ್ತರಾಖಂಡ ಮಾಜಿ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಹರಿದ್ವಾರದಿಂದ ಹಾಗೂ ಹರಿಯಾಣ ಮಾಜಿ ಸಿಎಂ ಮನೋಹರ್ಲಾಲ್ ಖಟ್ಟರ್ ಅವರನ್ನು ಕರ್ನಾಲ್ನಿಂದ ಉಮೇದುವಾರರನ್ನಾಗಿ ಮಾಡಲಾಗಿದೆ.