<p><strong>ಕೋಲ್ಕತ್ತ:</strong> ಡಾರ್ಜಿಲಿಂಗ್ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ರಾಜು ಬಿಸ್ತಾ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಬಿಜೆಪಿಯ ಕುರ್ಸೆಯಾಂಗ್ ಕ್ಷೇತ್ರದ ಶಾಸಕ ಬಿಷ್ಣು ಪ್ರಸಾದ್ ಶರ್ಮಾ ಸೋಮವಾರ ಘೋಷಿಸಿದ್ದಾರೆ.</p>.ಬೆಳಗಾವಿ ಲೋಕಸಭಾ ಕ್ಷೇತ್ರ | ಗೆದ್ದು ಬರುವುದೊಂದೇ ಗುರಿ: ಜಗದೀಶ ಶೆಟ್ಟರ್ .<p>ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ಅವರು, ‘ಪಕ್ಷೇತರರಾಗಿ ಸ್ಪರ್ಧಿಸಿದರೂ ಬಿಜೆಪಿಯಲ್ಲೇ ಇರುತ್ತೇನೆ. ಪಕ್ಷ ಬೇಕಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳಬಹುದು. ಆದರೆ ಪಕ್ಷದೊಂದಿಗೆ ಇರುವ ಸಂಬಂಧ ಕಳಚಿಕೊಳ್ಳಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ.</p><p>‘ಬಿಸ್ತಾ ಅವರು ನಮ್ಮ ಅಭ್ಯರ್ಥಿ ಅಲ್ಲ. ನಮಗೆ ಹೊರಗಿನ ಅಭ್ಯರ್ಥಿ ಬೇಕಿಲ್ಲ. ಸ್ಥಳೀಯ ಅಭ್ಯರ್ಥಿ ಬಿಜೆಪಿಗೆ ಸಿಗದಿದ್ದದ್ದು ದುರದೃಷ್ಠಕರ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.</p>.ಲೋಕಸಭಾ ಚುನಾವಣೆ | ಬಿಜೆಪಿಯತ್ತ ರೆಡ್ಡಿ: ಬದಲಾದ ಲೆಕ್ಕಾಚಾರ .<p>‘ಡಾರ್ಜಿಲಿಂಗ್ಗೆ ಹೊರಗಿನವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿರುವುದು ಇದು ನಾಲ್ಕನೇ ಬಾರಿ. ಇಂಥವರು ಜನರ ನೈಜ ಸಮಸ್ಯೆಯ ಬಗ್ಗೆ ಧ್ವನಿ ಎತ್ತುವುದಿಲ್ಲ. ಇದು ಡಾರ್ಜಿಲಿಂಗ್ನ 17 ಲಕ್ಷ ಮತದಾರರಿಗೆ ದೊಡ್ಡ ಹೊಡೆತ’ ಎಂದು ಅವರು ಹೇಳಿದ್ದಾರೆ.</p><p>ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಸಮಿಕ್ ಭಟ್ಟಾಚಾರ್ಯ, ‘ಬಿಸ್ತಾ ಅವರನ್ನು ಮತ್ತೆ ಕಣಕ್ಕಿಳಿಸಿರುವ ನಿರ್ಧಾರ ಅಂತಿಮ. ಪಕ್ಷ ಈ ಬಗ್ಗೆ ಒಗ್ಗಟ್ಟಾಗಿದೆ. ಹಿಂದಿಗಿಂತ ಹೆಚ್ಚು ಅಂತರದಿಂದ ಬಿಸ್ತಾ ಗೆಲ್ಲಲಿದ್ದಾರೆ’ ಎಂದು ಹೇಳಿದ್ದಾರೆ.</p>.ಲೋಕಸಭಾ ಚುನಾವಣೆ: ಮಂಡ್ಯದಲ್ಲಿ ಸ್ಪರ್ಧಿಸುವಂತೆ ಎಚ್ಡಿಕೆಗೆ ಆಗ್ರಹ. <p>ಇದೇ ವೇಳೆ ಶರ್ಮಾ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದರ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಡಾರ್ಜಿಲಿಂಗ್ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ರಾಜು ಬಿಸ್ತಾ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಬಿಜೆಪಿಯ ಕುರ್ಸೆಯಾಂಗ್ ಕ್ಷೇತ್ರದ ಶಾಸಕ ಬಿಷ್ಣು ಪ್ರಸಾದ್ ಶರ್ಮಾ ಸೋಮವಾರ ಘೋಷಿಸಿದ್ದಾರೆ.</p>.ಬೆಳಗಾವಿ ಲೋಕಸಭಾ ಕ್ಷೇತ್ರ | ಗೆದ್ದು ಬರುವುದೊಂದೇ ಗುರಿ: ಜಗದೀಶ ಶೆಟ್ಟರ್ .<p>ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ಅವರು, ‘ಪಕ್ಷೇತರರಾಗಿ ಸ್ಪರ್ಧಿಸಿದರೂ ಬಿಜೆಪಿಯಲ್ಲೇ ಇರುತ್ತೇನೆ. ಪಕ್ಷ ಬೇಕಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳಬಹುದು. ಆದರೆ ಪಕ್ಷದೊಂದಿಗೆ ಇರುವ ಸಂಬಂಧ ಕಳಚಿಕೊಳ್ಳಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ.</p><p>‘ಬಿಸ್ತಾ ಅವರು ನಮ್ಮ ಅಭ್ಯರ್ಥಿ ಅಲ್ಲ. ನಮಗೆ ಹೊರಗಿನ ಅಭ್ಯರ್ಥಿ ಬೇಕಿಲ್ಲ. ಸ್ಥಳೀಯ ಅಭ್ಯರ್ಥಿ ಬಿಜೆಪಿಗೆ ಸಿಗದಿದ್ದದ್ದು ದುರದೃಷ್ಠಕರ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.</p>.ಲೋಕಸಭಾ ಚುನಾವಣೆ | ಬಿಜೆಪಿಯತ್ತ ರೆಡ್ಡಿ: ಬದಲಾದ ಲೆಕ್ಕಾಚಾರ .<p>‘ಡಾರ್ಜಿಲಿಂಗ್ಗೆ ಹೊರಗಿನವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿರುವುದು ಇದು ನಾಲ್ಕನೇ ಬಾರಿ. ಇಂಥವರು ಜನರ ನೈಜ ಸಮಸ್ಯೆಯ ಬಗ್ಗೆ ಧ್ವನಿ ಎತ್ತುವುದಿಲ್ಲ. ಇದು ಡಾರ್ಜಿಲಿಂಗ್ನ 17 ಲಕ್ಷ ಮತದಾರರಿಗೆ ದೊಡ್ಡ ಹೊಡೆತ’ ಎಂದು ಅವರು ಹೇಳಿದ್ದಾರೆ.</p><p>ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಸಮಿಕ್ ಭಟ್ಟಾಚಾರ್ಯ, ‘ಬಿಸ್ತಾ ಅವರನ್ನು ಮತ್ತೆ ಕಣಕ್ಕಿಳಿಸಿರುವ ನಿರ್ಧಾರ ಅಂತಿಮ. ಪಕ್ಷ ಈ ಬಗ್ಗೆ ಒಗ್ಗಟ್ಟಾಗಿದೆ. ಹಿಂದಿಗಿಂತ ಹೆಚ್ಚು ಅಂತರದಿಂದ ಬಿಸ್ತಾ ಗೆಲ್ಲಲಿದ್ದಾರೆ’ ಎಂದು ಹೇಳಿದ್ದಾರೆ.</p>.ಲೋಕಸಭಾ ಚುನಾವಣೆ: ಮಂಡ್ಯದಲ್ಲಿ ಸ್ಪರ್ಧಿಸುವಂತೆ ಎಚ್ಡಿಕೆಗೆ ಆಗ್ರಹ. <p>ಇದೇ ವೇಳೆ ಶರ್ಮಾ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದರ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>