ಭಾರತ ತಂಡದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರನ್ನು ಬೆಹ್ರಾಂಪುರ ಕ್ಷೇತ್ರದಿಂದ ಟಿಎಂಸಿ ಕಣಕ್ಕಿಳಿಸಿದೆ. ಈ ಕ್ಷೇತ್ರವನ್ನು ಈಗ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರತಿನಿಧಿಸುತ್ತಿದ್ದಾರೆ.
ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಅಭಿಷೇಕ್ ಬ್ಯಾನರ್ಜಿ, ಅಸಾಂಸೋಲ್ನಿಂದ ಶತ್ರುಘನ್ ಸಿನ್ಹಾ, ಲೋಕಸಭೆ ಸದಸ್ಯತ್ವದಿಂದ ವಜಾಗೊಂಡಿರುವ ಮಹುವಾ ಮೊಯಿತ್ರಾ ಅವರು ಕೃಷ್ಣನಗರ ಕ್ಷೇತ್ರದಿಂದ, ಶ್ರೀರಾಮಪುರದಿಂದ ಕಲ್ಯಾಣ್ ಬ್ಯಾನರ್ಜಿ, ಭರ್ದಮಾನ್ನಿಂದ ಮಾಜಿ ಕ್ರಿಕೆಟಿಗ ಕೀರ್ತಿ ಅಜಾದ್, ಡಂ ಡಂನಿಂದ ಸುಗತಾ ರಾಯ್ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.