<p><strong>ನವದೆಹಲಿ:</strong>’ಉದ್ಯಮಿಗಳ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸಾಲಮನ್ನಾ ಮಾಡುವ ಪ್ರಧಾನಿಗೆ ರೈತರ ಸಾಲಮನ್ನಾ ಮಾಡಲು ಇಚ್ಛಾಶಕ್ತಿ ಇಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು.</p>.<p>ಲೋಕಸಭೆ ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ಮೇಲಿನ ಚರ್ಚೆಯಲ್ಲಿಮಾತನಾಡಿದ ರಾಹುಲ್, ‘ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಹಗರಣ ನಡೆದಿದೆ. ಇದಕ್ಕೆ ಪ್ರಧಾನಿ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು.ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಆಪಾದಿಸಿದರು.</p>.<p>ಮಾತಿನ ಆರಂಭದಲ್ಲಿ, ಟಿಡಿಪಿ ಸಂಸದರು ಮಂಡಿಸಿದಅವಿಶ್ವಾಸ ನಿರ್ಣಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಅದರಲ್ಲಿನ ವಿಷಯಗಳನ್ನು ಪ್ರಸ್ತಾಪಿಸಿದರು.</p>.<p>ದೇಶದ ಪ್ರತಿ ವ್ಯಕ್ತಿಯ ಖಾತೆಗೆ ₹ 15 ಲಕ್ಷ ಹಾಕುವುದಾಗಿ ಹೇಳಿದ್ದರು. ಉದ್ಯೋಗ ಸೃಷ್ಟಿಯ ಬಗ್ಗೆ ಹೇಳಿದ್ದರು. ಅವ್ಯಾವುದನ್ನೂ ಮಾಡಲಿಲ್ಲ. ನೋಟ್ ಬ್ಯಾನ್ ಮಾಡಿದರು. ಇದು ಜನರಿಗೆ ಹೊರೆಯಾಯಿತು. ಪ್ರಧಾನಿ ಅವರು ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.</p>.<p>ಬಡವರಿಗೆ ಪ್ರಧಾನಿ ಹೃದಯದಲ್ಲಿ ಸ್ಥಾನವಿಲ್ಲ. ಒಮ್ಮೆ ಬೋಂಡಾ ಮಾರಾಟ ಮಾಡಿ ಎನ್ನುತ್ತೀರಿ. ಬಡವರ ಹಣವನ್ನು ಕಸಿಯುತ್ತಿದ್ದೀರಿ ಎಂದು ದೂರಿದರು.</p>.<p>‘ಪ್ರಧಾನಿ ಹೊರಗೆ ಹೋಗುವುದಿಲ್ಲ’ ಎಂದು ಸದನದಲ್ಲಿ ಹೇಳಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮರುಕ್ಷಣ, ‘ಇಲ್ಲ ಇಲ್ಲ... ಹೋಗುತ್ತಾರೆ ವಿದೇಶಗಳಿಗೆ ಹೋಗುತ್ತಾರೆ’ ಎಂದು ಯಡವಟ್ಟಿನ ಹೇಳಿಕೆ ನೀಡಿದರು. ಇದು ಸದನದಲ್ಲಿ ನಗೆಯುಕ್ಕಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>’ಉದ್ಯಮಿಗಳ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸಾಲಮನ್ನಾ ಮಾಡುವ ಪ್ರಧಾನಿಗೆ ರೈತರ ಸಾಲಮನ್ನಾ ಮಾಡಲು ಇಚ್ಛಾಶಕ್ತಿ ಇಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು.</p>.<p>ಲೋಕಸಭೆ ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ಮೇಲಿನ ಚರ್ಚೆಯಲ್ಲಿಮಾತನಾಡಿದ ರಾಹುಲ್, ‘ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಹಗರಣ ನಡೆದಿದೆ. ಇದಕ್ಕೆ ಪ್ರಧಾನಿ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು.ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಆಪಾದಿಸಿದರು.</p>.<p>ಮಾತಿನ ಆರಂಭದಲ್ಲಿ, ಟಿಡಿಪಿ ಸಂಸದರು ಮಂಡಿಸಿದಅವಿಶ್ವಾಸ ನಿರ್ಣಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಅದರಲ್ಲಿನ ವಿಷಯಗಳನ್ನು ಪ್ರಸ್ತಾಪಿಸಿದರು.</p>.<p>ದೇಶದ ಪ್ರತಿ ವ್ಯಕ್ತಿಯ ಖಾತೆಗೆ ₹ 15 ಲಕ್ಷ ಹಾಕುವುದಾಗಿ ಹೇಳಿದ್ದರು. ಉದ್ಯೋಗ ಸೃಷ್ಟಿಯ ಬಗ್ಗೆ ಹೇಳಿದ್ದರು. ಅವ್ಯಾವುದನ್ನೂ ಮಾಡಲಿಲ್ಲ. ನೋಟ್ ಬ್ಯಾನ್ ಮಾಡಿದರು. ಇದು ಜನರಿಗೆ ಹೊರೆಯಾಯಿತು. ಪ್ರಧಾನಿ ಅವರು ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.</p>.<p>ಬಡವರಿಗೆ ಪ್ರಧಾನಿ ಹೃದಯದಲ್ಲಿ ಸ್ಥಾನವಿಲ್ಲ. ಒಮ್ಮೆ ಬೋಂಡಾ ಮಾರಾಟ ಮಾಡಿ ಎನ್ನುತ್ತೀರಿ. ಬಡವರ ಹಣವನ್ನು ಕಸಿಯುತ್ತಿದ್ದೀರಿ ಎಂದು ದೂರಿದರು.</p>.<p>‘ಪ್ರಧಾನಿ ಹೊರಗೆ ಹೋಗುವುದಿಲ್ಲ’ ಎಂದು ಸದನದಲ್ಲಿ ಹೇಳಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮರುಕ್ಷಣ, ‘ಇಲ್ಲ ಇಲ್ಲ... ಹೋಗುತ್ತಾರೆ ವಿದೇಶಗಳಿಗೆ ಹೋಗುತ್ತಾರೆ’ ಎಂದು ಯಡವಟ್ಟಿನ ಹೇಳಿಕೆ ನೀಡಿದರು. ಇದು ಸದನದಲ್ಲಿ ನಗೆಯುಕ್ಕಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>