<p><strong>ನವದೆಹಲಿ:</strong>ಕಾಂಗ್ರೆಸ್ 48 ವರ್ಷಗಳ ಕಾಲ ಹಗರಣಗಳ ರಾಜಕೀಯ ಮಾಡಿದೆ. ನಮ್ಮ ಸರ್ಕಾರ ಅಭಿವೃದ್ಧಿಪರ ಕಾರ್ಯಗಳನ್ನು ಕೈಗೊಂಡಿದೆ ಎಂದು ಬಿಜೆಪಿ ಸಂಸದ ರಾಕೇಶ್ ಸಿಂಗ್ ಅವರು ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.</p>.<p>ಸಂಸತ್ನಲ್ಲಿ ಅವಿಶ್ವಾಸ ಮತದ ಮೇಲೆ ನಡೆಯುತ್ತಿರುವ ಚರ್ಚೆಯಲ್ಲಿ ಟಿಡಿಪಿ ಅವಿಶ್ವಾಸ ನಿರ್ಣಯ ಮಂಡಿಸಿದ ಬಳಿಕ, ರಾಕೇಶ್ ಸಿಂಗ್ ಪ್ರತಿಕ್ರಿಯಿಸಿ ಮಾತನಾಡಿ, ನಾವು ದೇಶದ ಎಲ್ಲಾ ರಾಜ್ಯಗಳನ್ನು ಒಂದೇ ದೃಷ್ಟಿಯಿಂದ ನೋಡುತ್ತಿದ್ದೇವೆ. 48 ವರ್ಷ ಕಾಂಗ್ರೆಸ್ನಿಂದ ಹಗರಣಗಳ ರಾಜಕೀಯ ನಡೆಸಿದೆ ಎಂದು ಆಪಾದಿಸಿದರು.</p>.<p>70ವರ್ಷದಲ್ಲಿ ಕಾಂಗ್ರೆಸ್ ಮಾಡದ್ದನ್ನು ಬಿಜೆಪಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ 18 ಸಾವಿರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದೆ. 4 ವರ್ಷದಲ್ಲಿ 4 ಲಕ್ಷ ಕುಟುಂಬಗಳಿಗೆ ವಿದ್ಯುತ್ ಒದಗಿಸಿದ್ದೇವೆ. ಬಡವರ ₹5 ಲಕ್ಷ ವರೆಗಿನ ಚಿಕಿತ್ಸಾ ವೆಚ್ಚ ಭರಿಸುತ್ತಿದ್ದೇವೆ ಇದೆಲ್ಲಾ ಸರ್ಕಾರ ಜನ ಪರ ಮಾಡಿದ ಕಾರ್ಯಗಳಲ್ಲೇ ಎಂದು ವಿಕ್ಷಗಳನ್ನು ಛೇಡಿಸಿದರು.</p>.<p>ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಬೆಳವಣಿಗೆ ವೃದ್ಧಿಯಾಗುತ್ತಿದೆ ಎಂದು ಸರ್ಕಾರದ ಕಾರ್ಯಕ್ರಮಗಳ ಪಟ್ಟಿ ನೀಡಿದ ರಾಕೇಶ್ ಸಿಂಗ್, ನಾವು ಅವಿಶ್ವಾಸ ನಿರ್ಣಯವನ್ನು ವಿರೋಧಿಸುತ್ತೇವೆ ಎಂದು ಮಾತು ಮುಗಿಸಿದರು.<br />ಬಿಜೆಪಿಯ ಪ್ರತಿಕ್ರಿಯೆಗೆ ಕಾಂಗ್ರೆಸ್ ಮಧ್ಯೆ ಮಧ್ಯೆ ಆಕ್ಷೇಪ ವ್ಯಕ್ತಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಕಾಂಗ್ರೆಸ್ 48 ವರ್ಷಗಳ ಕಾಲ ಹಗರಣಗಳ ರಾಜಕೀಯ ಮಾಡಿದೆ. ನಮ್ಮ ಸರ್ಕಾರ ಅಭಿವೃದ್ಧಿಪರ ಕಾರ್ಯಗಳನ್ನು ಕೈಗೊಂಡಿದೆ ಎಂದು ಬಿಜೆಪಿ ಸಂಸದ ರಾಕೇಶ್ ಸಿಂಗ್ ಅವರು ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.</p>.<p>ಸಂಸತ್ನಲ್ಲಿ ಅವಿಶ್ವಾಸ ಮತದ ಮೇಲೆ ನಡೆಯುತ್ತಿರುವ ಚರ್ಚೆಯಲ್ಲಿ ಟಿಡಿಪಿ ಅವಿಶ್ವಾಸ ನಿರ್ಣಯ ಮಂಡಿಸಿದ ಬಳಿಕ, ರಾಕೇಶ್ ಸಿಂಗ್ ಪ್ರತಿಕ್ರಿಯಿಸಿ ಮಾತನಾಡಿ, ನಾವು ದೇಶದ ಎಲ್ಲಾ ರಾಜ್ಯಗಳನ್ನು ಒಂದೇ ದೃಷ್ಟಿಯಿಂದ ನೋಡುತ್ತಿದ್ದೇವೆ. 48 ವರ್ಷ ಕಾಂಗ್ರೆಸ್ನಿಂದ ಹಗರಣಗಳ ರಾಜಕೀಯ ನಡೆಸಿದೆ ಎಂದು ಆಪಾದಿಸಿದರು.</p>.<p>70ವರ್ಷದಲ್ಲಿ ಕಾಂಗ್ರೆಸ್ ಮಾಡದ್ದನ್ನು ಬಿಜೆಪಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ 18 ಸಾವಿರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದೆ. 4 ವರ್ಷದಲ್ಲಿ 4 ಲಕ್ಷ ಕುಟುಂಬಗಳಿಗೆ ವಿದ್ಯುತ್ ಒದಗಿಸಿದ್ದೇವೆ. ಬಡವರ ₹5 ಲಕ್ಷ ವರೆಗಿನ ಚಿಕಿತ್ಸಾ ವೆಚ್ಚ ಭರಿಸುತ್ತಿದ್ದೇವೆ ಇದೆಲ್ಲಾ ಸರ್ಕಾರ ಜನ ಪರ ಮಾಡಿದ ಕಾರ್ಯಗಳಲ್ಲೇ ಎಂದು ವಿಕ್ಷಗಳನ್ನು ಛೇಡಿಸಿದರು.</p>.<p>ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಬೆಳವಣಿಗೆ ವೃದ್ಧಿಯಾಗುತ್ತಿದೆ ಎಂದು ಸರ್ಕಾರದ ಕಾರ್ಯಕ್ರಮಗಳ ಪಟ್ಟಿ ನೀಡಿದ ರಾಕೇಶ್ ಸಿಂಗ್, ನಾವು ಅವಿಶ್ವಾಸ ನಿರ್ಣಯವನ್ನು ವಿರೋಧಿಸುತ್ತೇವೆ ಎಂದು ಮಾತು ಮುಗಿಸಿದರು.<br />ಬಿಜೆಪಿಯ ಪ್ರತಿಕ್ರಿಯೆಗೆ ಕಾಂಗ್ರೆಸ್ ಮಧ್ಯೆ ಮಧ್ಯೆ ಆಕ್ಷೇಪ ವ್ಯಕ್ತಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>