<p><strong>ನವದೆಹಲಿ: </strong>ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆಯನ್ನು ಮುಂದುವರಿಸಿದ ಕಾರಣ, ಲೋಕಸಭೆ ಕಲಾಪಕ್ಕೆ ಅಡ್ಡಿಯುಂಟಾಯಿತು.</p>.<p>ವಿರೋಧ ಪಕ್ಷಗಳ ಸದಸ್ಯರ ಪ್ರತಿಭಟನೆ, ಗದ್ದಲದ ನಡುವೆಯೇ ಎರಡು ಮಸೂದೆಗಳನ್ನು ಸರ್ಕಾರ ಮಂಡಿಸಿದರೂ, ಸುಗಮ ಕಲಾಪ ಸಾಧ್ಯವಾಗದ ಕಾರಣ, ಸದನವನ್ನು ಮುಂದೂಡಲಾಯಿತು.</p>.<p>ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 21ಕ್ಕೆ ಏರಿಸುವುದಕ್ಕೆ ಸಂಬಂಧಿಸಿದ ಮಸೂದೆ, ಚಾರ್ಟರ್ಡ್ ಅಕೌಂಟಂಟ್ಸ್ ಕಾಯ್ದೆ, ಕಾಸ್ಟ್ ಆ್ಯಂಡ್ ವರ್ಕ್ಸ್ ಅಕೌಂಟಂಟ್ಸ್ ಕಾಯ್ದೆ ಹಾಗೂ ಕಂಪನಿ ಸೆಕ್ರೆಟರಿಗಳ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಯಿತು.</p>.<p>ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು ಏರಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಸಮಗ್ರ ಪರಿಶೀಲನೆಗಾಗಿ ಸಂಸದೀಯ ಸಮಿತಿಗೆ ಒಪ್ಪಿಸಬೇಕು ಎಂದು ವಿವಿಧ ವಿರೋಧ ಪಕ್ಷಗಳು ಪಟ್ಟು ಹಿಡಿದವು. ಈ ಬೇಡಿಕೆಗೆ ಒಪ್ಪಿದ ಸರ್ಕಾರ, ಎರಡೂ ಮಸೂದೆಗಳನ್ನು ಸಂಬಂಧಪಟ್ಟ ಸಂಸದೀಯ ಸ್ಥಾಯಿ ಸಮಿತಿಗಳಿಗೆ ಒಪ್ಪಿಸಿತು.</p>.<p>ತಮ್ಮ ಸ್ಥಾನಗಳಿಗೆ ತೆರಳುವಂತೆ ಸ್ಪೀಕರ್ ಅವರು ಪದೇಪದೇ ಮಾಡಿದ ಮನವಿಗೆ ವಿಪಕ್ಷಗಳ ಸದಸ್ಯರು ಕಿವಿಗೊಡದೇ, ಪ್ರತಿಭಟನೆ ಮುಂದುವರಿದರು. ಆಗ, ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮಧ್ಯಾಹ್ನ 2ರ ವರೆಗೆ ಮುಂದೂಡಿದರು.</p>.<p>ಸದನ ಪುನಃ ಆರಂಭಗೊಂಡ ನಂತರ ಕಾಂಗ್ರೆಸ್, ಡಿಎಂಕೆ ಹಾಗೂ ಟಿಎಂಸಿ ಸೇರಿದಂತೆ ಕೆಲವು ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ಆರಂಭಿಸಿದರು. ವಿವಿಧ ಘೋಷಣೆಗಳಿದ್ದ ಫಲಕಗಳೊಂದಿಗೆ ಸ್ಪೀಕರ್ ಪೀಠದ ಮುಂದೆ ಬಂದು ಪ್ರತಿಭಟನೆ ಮುಂದುವರಿಸಿದರು.</p>.<p>ಲಖೀಂಪುರ ಖೇರಿ ಘಟನೆಯನ್ನು ಪ್ರಸ್ತಾಪಿಸಿದ ವಿಪಕ್ಷಗಳ ಸದಸ್ಯರು, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿದರು.</p>.<p>ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಘಟನೆಯನ್ನು ಪ್ರಸ್ತಾಪಿಸಿದ ಶಿವಸೇನಾ ಸದಸ್ಯರು, ಕ್ರಮಕ್ಕೆ ಆಗ್ರಹಿಸಿದರು.</p>.<p>ದಂತ ಮತ್ತು ವೈದ್ಯ ಕಾಲೇಜುಗಳ ಪ್ರವೇಶಕ್ಕಾಗಿನ ‘ನೀಟ್’ ನಿಂದ ತಮಿಳುನಾಡಿಗೆ ವಿನಾಯಿತಿ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಡಿಎಂಕೆ ಸದಸ್ಯರು ಪ್ರತಿಭಟಿಸಿದರು.</p>.<p>ಈ ನಡುವೆ, ವಿರೋಧ ಪಕ್ಷಗಳ ಸದಸ್ಯರ ವಿರುದ್ಧ ವಾಗ್ದಾಳಿ ನಡೆಸಿದ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್, ‘ಪ್ರತಿಭಟನೆಗಳ ಮೂಲಕ ವಿರೋಧ ಪಕ್ಷಗಳು ಸದನದ ಗೌರವಕ್ಕೆ ಧಕ್ಕೆ ತಂದಿದ್ದಾರೆ’ ಎಂದರು.</p>.<p><strong>ಮೊಬೈಲ್ ಆ್ಯಪ್ ಡೌನ್ಲೋಡ್ಗೆ ಸೂಚನೆ</strong></p>.<p>‘ಸಂಸತ್ ಕಲಾಪ ವೀಕ್ಷಣೆಯೂ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಹೊಂದಿರುವ ಮೊಬೈಲ್ ಆ್ಯಪ್ವೊಂದನ್ನು ಅಭಿವೃದ್ಧಿಪಡಿಸಲಾಗಿದೆ. ಎಲ್ಲ ಸದಸ್ಯರು ಈ ಆ್ಯಪ್ಅನ್ನು ಡೌನ್ಲೋಡ್ ಮಾಡಿಕೊಳ್ಳಿ’ ಎಂದು ಸ್ಪೀಕರ್ ಓಂ ಬಿರ್ಲಾ ಸೂಚಿಸಿದರು.</p>.<p>‘ಕಲಾಪದ ನೇರ ಪ್ರಸಾರವನ್ನು ಈ ಆ್ಯಪ್ ನೆರವಿನಿಂದ ವೀಕ್ಷಿಸಬಹುದು. ದಾಖಲೆಗಳು, ಪ್ರಶ್ನೆ–ಉತ್ತರ ಪ್ರತಿಗಳನ್ನು, ಬುಲೆಟಿನ್ಗಳನ್ನು ಹಾಗೂ ಮಹತ್ವದ ದಾಖಲೆಗಳನ್ನು ಸಹ ವೀಕ್ಷಿಸಬಹುದು’ ಎಂದರು.</p>.<p>‘ಈ ಆ್ಯಪ್ ಡೌನ್ ಮಾಡಿಕೊಳ್ಳುವಂತೆ ನಿಮ್ಮ ಕ್ಷೇತ್ರದ ಜನರಿಗೂ ತಿಳಿಸಿ. ಸದನದಲ್ಲಿ ನಿಮ್ಮ ವರ್ತನೆ ಹೇಗಿರುತ್ತದೆ ಎಂಬುದನ್ನು ಸಹ ಅವರು ವೀಕ್ಷಿಸಲು ಇದರಿಂದ ಸಾಧ್ಯವಾಗಲಿದೆ’ ಎಂದು ಸ್ಪೀಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆಯನ್ನು ಮುಂದುವರಿಸಿದ ಕಾರಣ, ಲೋಕಸಭೆ ಕಲಾಪಕ್ಕೆ ಅಡ್ಡಿಯುಂಟಾಯಿತು.</p>.<p>ವಿರೋಧ ಪಕ್ಷಗಳ ಸದಸ್ಯರ ಪ್ರತಿಭಟನೆ, ಗದ್ದಲದ ನಡುವೆಯೇ ಎರಡು ಮಸೂದೆಗಳನ್ನು ಸರ್ಕಾರ ಮಂಡಿಸಿದರೂ, ಸುಗಮ ಕಲಾಪ ಸಾಧ್ಯವಾಗದ ಕಾರಣ, ಸದನವನ್ನು ಮುಂದೂಡಲಾಯಿತು.</p>.<p>ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 21ಕ್ಕೆ ಏರಿಸುವುದಕ್ಕೆ ಸಂಬಂಧಿಸಿದ ಮಸೂದೆ, ಚಾರ್ಟರ್ಡ್ ಅಕೌಂಟಂಟ್ಸ್ ಕಾಯ್ದೆ, ಕಾಸ್ಟ್ ಆ್ಯಂಡ್ ವರ್ಕ್ಸ್ ಅಕೌಂಟಂಟ್ಸ್ ಕಾಯ್ದೆ ಹಾಗೂ ಕಂಪನಿ ಸೆಕ್ರೆಟರಿಗಳ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಯಿತು.</p>.<p>ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು ಏರಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಸಮಗ್ರ ಪರಿಶೀಲನೆಗಾಗಿ ಸಂಸದೀಯ ಸಮಿತಿಗೆ ಒಪ್ಪಿಸಬೇಕು ಎಂದು ವಿವಿಧ ವಿರೋಧ ಪಕ್ಷಗಳು ಪಟ್ಟು ಹಿಡಿದವು. ಈ ಬೇಡಿಕೆಗೆ ಒಪ್ಪಿದ ಸರ್ಕಾರ, ಎರಡೂ ಮಸೂದೆಗಳನ್ನು ಸಂಬಂಧಪಟ್ಟ ಸಂಸದೀಯ ಸ್ಥಾಯಿ ಸಮಿತಿಗಳಿಗೆ ಒಪ್ಪಿಸಿತು.</p>.<p>ತಮ್ಮ ಸ್ಥಾನಗಳಿಗೆ ತೆರಳುವಂತೆ ಸ್ಪೀಕರ್ ಅವರು ಪದೇಪದೇ ಮಾಡಿದ ಮನವಿಗೆ ವಿಪಕ್ಷಗಳ ಸದಸ್ಯರು ಕಿವಿಗೊಡದೇ, ಪ್ರತಿಭಟನೆ ಮುಂದುವರಿದರು. ಆಗ, ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮಧ್ಯಾಹ್ನ 2ರ ವರೆಗೆ ಮುಂದೂಡಿದರು.</p>.<p>ಸದನ ಪುನಃ ಆರಂಭಗೊಂಡ ನಂತರ ಕಾಂಗ್ರೆಸ್, ಡಿಎಂಕೆ ಹಾಗೂ ಟಿಎಂಸಿ ಸೇರಿದಂತೆ ಕೆಲವು ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ಆರಂಭಿಸಿದರು. ವಿವಿಧ ಘೋಷಣೆಗಳಿದ್ದ ಫಲಕಗಳೊಂದಿಗೆ ಸ್ಪೀಕರ್ ಪೀಠದ ಮುಂದೆ ಬಂದು ಪ್ರತಿಭಟನೆ ಮುಂದುವರಿಸಿದರು.</p>.<p>ಲಖೀಂಪುರ ಖೇರಿ ಘಟನೆಯನ್ನು ಪ್ರಸ್ತಾಪಿಸಿದ ವಿಪಕ್ಷಗಳ ಸದಸ್ಯರು, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿದರು.</p>.<p>ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಘಟನೆಯನ್ನು ಪ್ರಸ್ತಾಪಿಸಿದ ಶಿವಸೇನಾ ಸದಸ್ಯರು, ಕ್ರಮಕ್ಕೆ ಆಗ್ರಹಿಸಿದರು.</p>.<p>ದಂತ ಮತ್ತು ವೈದ್ಯ ಕಾಲೇಜುಗಳ ಪ್ರವೇಶಕ್ಕಾಗಿನ ‘ನೀಟ್’ ನಿಂದ ತಮಿಳುನಾಡಿಗೆ ವಿನಾಯಿತಿ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಡಿಎಂಕೆ ಸದಸ್ಯರು ಪ್ರತಿಭಟಿಸಿದರು.</p>.<p>ಈ ನಡುವೆ, ವಿರೋಧ ಪಕ್ಷಗಳ ಸದಸ್ಯರ ವಿರುದ್ಧ ವಾಗ್ದಾಳಿ ನಡೆಸಿದ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್, ‘ಪ್ರತಿಭಟನೆಗಳ ಮೂಲಕ ವಿರೋಧ ಪಕ್ಷಗಳು ಸದನದ ಗೌರವಕ್ಕೆ ಧಕ್ಕೆ ತಂದಿದ್ದಾರೆ’ ಎಂದರು.</p>.<p><strong>ಮೊಬೈಲ್ ಆ್ಯಪ್ ಡೌನ್ಲೋಡ್ಗೆ ಸೂಚನೆ</strong></p>.<p>‘ಸಂಸತ್ ಕಲಾಪ ವೀಕ್ಷಣೆಯೂ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಹೊಂದಿರುವ ಮೊಬೈಲ್ ಆ್ಯಪ್ವೊಂದನ್ನು ಅಭಿವೃದ್ಧಿಪಡಿಸಲಾಗಿದೆ. ಎಲ್ಲ ಸದಸ್ಯರು ಈ ಆ್ಯಪ್ಅನ್ನು ಡೌನ್ಲೋಡ್ ಮಾಡಿಕೊಳ್ಳಿ’ ಎಂದು ಸ್ಪೀಕರ್ ಓಂ ಬಿರ್ಲಾ ಸೂಚಿಸಿದರು.</p>.<p>‘ಕಲಾಪದ ನೇರ ಪ್ರಸಾರವನ್ನು ಈ ಆ್ಯಪ್ ನೆರವಿನಿಂದ ವೀಕ್ಷಿಸಬಹುದು. ದಾಖಲೆಗಳು, ಪ್ರಶ್ನೆ–ಉತ್ತರ ಪ್ರತಿಗಳನ್ನು, ಬುಲೆಟಿನ್ಗಳನ್ನು ಹಾಗೂ ಮಹತ್ವದ ದಾಖಲೆಗಳನ್ನು ಸಹ ವೀಕ್ಷಿಸಬಹುದು’ ಎಂದರು.</p>.<p>‘ಈ ಆ್ಯಪ್ ಡೌನ್ ಮಾಡಿಕೊಳ್ಳುವಂತೆ ನಿಮ್ಮ ಕ್ಷೇತ್ರದ ಜನರಿಗೂ ತಿಳಿಸಿ. ಸದನದಲ್ಲಿ ನಿಮ್ಮ ವರ್ತನೆ ಹೇಗಿರುತ್ತದೆ ಎಂಬುದನ್ನು ಸಹ ಅವರು ವೀಕ್ಷಿಸಲು ಇದರಿಂದ ಸಾಧ್ಯವಾಗಲಿದೆ’ ಎಂದು ಸ್ಪೀಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>