<p><strong>ನವದೆಹಲಿ:</strong> ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಅಪ್ರಕಟಿತ ಆತ್ಮಚರಿತ್ರೆ, ಅಮೆರಿಕದೊಂದಿಗೆ ವ್ಯಾಪಾರ ಸಂಬಂಧ ಸೇರಿ ಹಲವು ವಿಷಯಗಳನ್ನು ಉಲ್ಲೇಖಿಸಿ ಮಂಗಳವಾರವೂ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದವು.</p>.ಮಹಾರಾಜರ ಕಾಲಕ್ಕೆ ದೇಶವನ್ನು ಕೊಂಡೊಯ್ಯುತ್ತಿರುವ ಮೋದಿ: ರಾಹುಲ್ ಗಾಂಧಿ .<p>ಗದ್ದಲದಿಂದಾಗಿ ಮಧ್ಯಾಹ್ನ 12 ಗಂಟೆಗೆ ಕಲಾಪವನ್ನು ಸ್ಪೀಕರ್ ಮುಂದೂಡಿದರು. ಮತ್ತೆ ಕಲಾಪ ಸೇರಿದರೂ ಗಲಾಟೆ ಮುಂದುವರಿಯಿತು. ಹೀಗಾಗಿ 2 ಗಂಟೆಗೆ ಸದನ ಮುಂದೂಡಲಾಗಿದೆ.</p><p>ನರವಣೆಯವರ ಪುಸ್ತಕದ ಭಾಗಗಳನ್ನು ಉಲ್ಲೇಖಿಸಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸೋಮವಾರ ನಿರಾಕರಿಸಿದ್ದರು. ಈ ವೇಳೆಯೂ ಪ್ರತಿಭಟನೆ ನಡೆದು, ಮಂಗಳವಾರಕ್ಕೆ ಕಲಾಪ ಮುಂದೂಡಿಕೆಯಾಗಿತ್ತು. ಆ ಬಗ್ಗೆ ಉಲ್ಲೇಖ ಮಾಡಬಾರದು ಎಂದು ಸ್ಪೀಕರ್ ಹೇಳಿದರೂ, ರಾಹುಲ್ ಗಾಂಧಿ ಪಟ್ಟು ಬಿಟ್ಟಿರಲಿಲ್ಲ.</p>.ಲಡಾಖ್ ಬಿಕ್ಕಟ್ಟಿನ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ರಾಹುಲ್: ಕಿಡಿಕಾರಿದ BJP.<p>ಮಂಗಳವಾರ ಸದನದ ಬಾವಿಗಿಳಿದ ಸದಸ್ಯರು ‘ಸರಂಡರ್ ಮೋದಿ’ ಎಂದು ಘೋಷಣೆ ಕೂಗಿ ಪ್ರತಿಭಟಿಸಿದರು. ಯೋಜಿತ ರೀತಿಯಲ್ಲಿ ಕಲಾಪಕ್ಕೆ ಅಡ್ಡಿಪಡಿಸುವುದು ಸದಸ್ಯರಿಗೆ ಯೋಗ್ಯವಲ್ಲ ಎಂದು ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದರು.</p>.ದೇಶದ ನೈಜ ಸಮಸ್ಯೆಗಳನ್ನು ಗಮನಿಸದ ಕುರುಡು ಬಜೆಟ್ : ರಾಹುಲ್ ಗಾಂಧಿ ಟೀಕೆ.<p>12 ಗಂಟೆಗೆ ಸದನ ಸೇರಿದಾಗ, ಮಣಿಕರ್ಣಿಕಾ ಘಾಟ್ನಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ಸಮಾಜವಾದಿ ಪಕ್ಷದ ಸದಸ್ಯರು ಪ್ರಸ್ತಾಪಿಸಿದರು. ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಅಪ್ರಕಟಿತ ಆತ್ಮಚರಿತ್ರೆ, ಅಮೆರಿಕದೊಂದಿಗೆ ವ್ಯಾಪಾರ ಸಂಬಂಧ ಸೇರಿ ಹಲವು ವಿಷಯಗಳನ್ನು ಉಲ್ಲೇಖಿಸಿ ಮಂಗಳವಾರವೂ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದವು.</p>.ಮಹಾರಾಜರ ಕಾಲಕ್ಕೆ ದೇಶವನ್ನು ಕೊಂಡೊಯ್ಯುತ್ತಿರುವ ಮೋದಿ: ರಾಹುಲ್ ಗಾಂಧಿ .<p>ಗದ್ದಲದಿಂದಾಗಿ ಮಧ್ಯಾಹ್ನ 12 ಗಂಟೆಗೆ ಕಲಾಪವನ್ನು ಸ್ಪೀಕರ್ ಮುಂದೂಡಿದರು. ಮತ್ತೆ ಕಲಾಪ ಸೇರಿದರೂ ಗಲಾಟೆ ಮುಂದುವರಿಯಿತು. ಹೀಗಾಗಿ 2 ಗಂಟೆಗೆ ಸದನ ಮುಂದೂಡಲಾಗಿದೆ.</p><p>ನರವಣೆಯವರ ಪುಸ್ತಕದ ಭಾಗಗಳನ್ನು ಉಲ್ಲೇಖಿಸಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸೋಮವಾರ ನಿರಾಕರಿಸಿದ್ದರು. ಈ ವೇಳೆಯೂ ಪ್ರತಿಭಟನೆ ನಡೆದು, ಮಂಗಳವಾರಕ್ಕೆ ಕಲಾಪ ಮುಂದೂಡಿಕೆಯಾಗಿತ್ತು. ಆ ಬಗ್ಗೆ ಉಲ್ಲೇಖ ಮಾಡಬಾರದು ಎಂದು ಸ್ಪೀಕರ್ ಹೇಳಿದರೂ, ರಾಹುಲ್ ಗಾಂಧಿ ಪಟ್ಟು ಬಿಟ್ಟಿರಲಿಲ್ಲ.</p>.ಲಡಾಖ್ ಬಿಕ್ಕಟ್ಟಿನ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ರಾಹುಲ್: ಕಿಡಿಕಾರಿದ BJP.<p>ಮಂಗಳವಾರ ಸದನದ ಬಾವಿಗಿಳಿದ ಸದಸ್ಯರು ‘ಸರಂಡರ್ ಮೋದಿ’ ಎಂದು ಘೋಷಣೆ ಕೂಗಿ ಪ್ರತಿಭಟಿಸಿದರು. ಯೋಜಿತ ರೀತಿಯಲ್ಲಿ ಕಲಾಪಕ್ಕೆ ಅಡ್ಡಿಪಡಿಸುವುದು ಸದಸ್ಯರಿಗೆ ಯೋಗ್ಯವಲ್ಲ ಎಂದು ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದರು.</p>.ದೇಶದ ನೈಜ ಸಮಸ್ಯೆಗಳನ್ನು ಗಮನಿಸದ ಕುರುಡು ಬಜೆಟ್ : ರಾಹುಲ್ ಗಾಂಧಿ ಟೀಕೆ.<p>12 ಗಂಟೆಗೆ ಸದನ ಸೇರಿದಾಗ, ಮಣಿಕರ್ಣಿಕಾ ಘಾಟ್ನಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ಸಮಾಜವಾದಿ ಪಕ್ಷದ ಸದಸ್ಯರು ಪ್ರಸ್ತಾಪಿಸಿದರು. ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>