<p><strong>ನವದೆಹಲಿ</strong>: ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಬ್ಲಾಂಕೆಟ್ ಬ್ಯಾಂಕ್ಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಚಾಲನೆ ನೀಡಿದ್ದಾರೆ.</p>.<p>ದೆಹಲಿಯಲ್ಲಿ ಉಷ್ಣಾಂಶ ತೀವ್ರಗತಿಯಲ್ಲಿ ಕುಸಿಯುತ್ತಿದ್ದು, ಅಗತ್ಯವಿರುವ ಬಡವರಿಗೆ ಉಚಿತವಾಗಿ ಬ್ಲಾಂಕೆಟ್ ವಿತರಿಸುವುದು ಈ ಬ್ಯಾಂಕ್ನ ಉದ್ದೇಶವಾಗಿದೆ.</p>.<p>‘ದೆಹಲಿಯಲ್ಲಿ ತಾಪಮಾನ ತೀವ್ರವಾಗಿ ಕುಸಿದಿದೆ. ಬಡವರು ಮತ್ತು ನೆರವು ಅಗತ್ಯವಿರುವ ಜನರ ಬಗ್ಗೆ ಸೂಕ್ತ ಗಮನ ಹರಿಸುವುದು ನಮ್ಮ ಜವಾಬ್ದಾರಿಯಾಗಿದೆ. ಈ ಬ್ಲಾಂಕೆಟ್ಗಳು ಚಳಿಗಾಲದಲ್ಲಿ ಅವರ ನೆರವಿಗೆ ಬರುತ್ತವೆ’ ಎಂದು ಅವರು ಹೇಳಿದರು.</p>.<p>ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಸಮಾಜದ ಪ್ರಗತಿ ಮತ್ತು ಕಲ್ಯಾಣಕ್ಕೆ ಶ್ರಮಿಸಬೇಕು ಎಂದು ಬಿರ್ಲಾ ಸಲಹೆ ನೀಡಿದರು.</p>.<p>ಸ್ಥಳೀಯ ಮಟ್ಟದಲ್ಲಿ ಸಹಕಾರ, ಸಮ್ಮತಿ ಮತ್ತು ಸಾಮೂಹಿಕ ಪ್ರಜ್ಞೆಯನ್ನು ಮೈಗೂಡಿಸಿಕೊಂಡು ಸಸಿ ನೆಡುವ, ಶುಚಿತ್ವ ಕಾಪಾಡುವ ಮತ್ತು ವಯಸ್ಕ ಶಿಕ್ಷಣದತ್ತ ತೊಡಗಿಸಿಕೊಳ್ಳಬೇಕಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>ಬಡವರಿಗೆ ಉಚಿತ ಬ್ಲಾಂಕೆಟ್ ಒದಗಿಸುವ ದೃಷ್ಟಿಯಿಂದ ಆವ್ ಸಾಥ್ ಚಲೆನ್ ಸಂಘಟನೆ ಈ ಬ್ಲಾಂಕೆಟ್ ಬ್ಯಾಂಕ್ ಆರಂಭಿಸಿದೆ. ಸಂಘಟನೆಯ ರಾಷ್ಟ್ರೀಯ ಸಂಚಾಲಕ ವಿಷ್ಣು ಮಿತ್ತಲ್ ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಬ್ಲಾಂಕೆಟ್ ಬ್ಯಾಂಕ್ಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಚಾಲನೆ ನೀಡಿದ್ದಾರೆ.</p>.<p>ದೆಹಲಿಯಲ್ಲಿ ಉಷ್ಣಾಂಶ ತೀವ್ರಗತಿಯಲ್ಲಿ ಕುಸಿಯುತ್ತಿದ್ದು, ಅಗತ್ಯವಿರುವ ಬಡವರಿಗೆ ಉಚಿತವಾಗಿ ಬ್ಲಾಂಕೆಟ್ ವಿತರಿಸುವುದು ಈ ಬ್ಯಾಂಕ್ನ ಉದ್ದೇಶವಾಗಿದೆ.</p>.<p>‘ದೆಹಲಿಯಲ್ಲಿ ತಾಪಮಾನ ತೀವ್ರವಾಗಿ ಕುಸಿದಿದೆ. ಬಡವರು ಮತ್ತು ನೆರವು ಅಗತ್ಯವಿರುವ ಜನರ ಬಗ್ಗೆ ಸೂಕ್ತ ಗಮನ ಹರಿಸುವುದು ನಮ್ಮ ಜವಾಬ್ದಾರಿಯಾಗಿದೆ. ಈ ಬ್ಲಾಂಕೆಟ್ಗಳು ಚಳಿಗಾಲದಲ್ಲಿ ಅವರ ನೆರವಿಗೆ ಬರುತ್ತವೆ’ ಎಂದು ಅವರು ಹೇಳಿದರು.</p>.<p>ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಸಮಾಜದ ಪ್ರಗತಿ ಮತ್ತು ಕಲ್ಯಾಣಕ್ಕೆ ಶ್ರಮಿಸಬೇಕು ಎಂದು ಬಿರ್ಲಾ ಸಲಹೆ ನೀಡಿದರು.</p>.<p>ಸ್ಥಳೀಯ ಮಟ್ಟದಲ್ಲಿ ಸಹಕಾರ, ಸಮ್ಮತಿ ಮತ್ತು ಸಾಮೂಹಿಕ ಪ್ರಜ್ಞೆಯನ್ನು ಮೈಗೂಡಿಸಿಕೊಂಡು ಸಸಿ ನೆಡುವ, ಶುಚಿತ್ವ ಕಾಪಾಡುವ ಮತ್ತು ವಯಸ್ಕ ಶಿಕ್ಷಣದತ್ತ ತೊಡಗಿಸಿಕೊಳ್ಳಬೇಕಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>ಬಡವರಿಗೆ ಉಚಿತ ಬ್ಲಾಂಕೆಟ್ ಒದಗಿಸುವ ದೃಷ್ಟಿಯಿಂದ ಆವ್ ಸಾಥ್ ಚಲೆನ್ ಸಂಘಟನೆ ಈ ಬ್ಲಾಂಕೆಟ್ ಬ್ಯಾಂಕ್ ಆರಂಭಿಸಿದೆ. ಸಂಘಟನೆಯ ರಾಷ್ಟ್ರೀಯ ಸಂಚಾಲಕ ವಿಷ್ಣು ಮಿತ್ತಲ್ ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>