ಈ ಕುರಿತು ಮಾತನಾಡಿದ ಲೋಕಸಭೆಯಲ್ಲಿ ಕಾಂಗ್ರೆಸ್ನ ಸಚೇತಕ ಮಾಣಿಕಂ ಟ್ಯಾಗೋರ್, ‘ಪ್ರಧಾನಿ ವಿರುದ್ಧ ಮಾತನಾಡಿದ್ದಕ್ಕಾಗಿ ಇದೇ ಮೊದಲ ಬಾರಿಗೆ ಲೋಕಸಭೆಯಲ್ಲಿ ದೊಡ್ಡ ವಿರೋಧಪಕ್ಷವಾದ ಕಾಂಗ್ರೆಸ್ನ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಅಮಾನತುಗೊಳಿಸಲಾಗಿದೆ. ಇದನ್ನು ನಂಬಲು ಆಗುತ್ತಿಲ್ಲ. ಈ ಕ್ರಮ ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಸರ್ವಾಧಿಕಾರ ಧೋರಣೆಯನ್ನು ಖಂಡಿಸುತ್ತೇನೆ’ ಎಂದರು.