ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆಯಲ್ಲಿ ರಾಮಮಂದಿರ ಕುರಿತು ಚರ್ಚೆ

ಪ್ರಸ್ತುತ ಲೋಕಸಭೆಯ ಕೊನೆ ಅಧಿವೇಶನವಾದ ಬಜೆಟ್ ಅಧಿವೇಶನ ಇಂದು ಕೊನೆಗೊಳ್ಳಲಿದೆ.
Published 10 ಫೆಬ್ರುವರಿ 2024, 7:27 IST
Last Updated 10 ಫೆಬ್ರುವರಿ 2024, 7:27 IST
ಅಕ್ಷರ ಗಾತ್ರ

ದೆಹಲಿ: ಪ್ರಸ್ತುತ ಲೋಕಸಭೆಯ ಕೊನೆ ಅಧಿವೇಶನವಾದ ಬಜೆಟ್ ಅಧಿವೇಶನ ಇಂದು ಕೊನೆಗೊಳ್ಳಲಿದೆ.

ಈ ಹಿನ್ನೆಲೆಯಲ್ಲಿ ಶನಿವಾರ ಲೋಕಸಭೆಯಲ್ಲಿ ವಿಶೇಷವಾಗಿ ರಾಮ ಮಂದಿರ ನಿರ್ಮಾಣದ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಲಾಗಿದೆ.

ರಾಮ ಮಂದಿರ ನಿರ್ಮಾಣ ಐತಿಹಾಸಿಕ ಎಂದು ಬಣ್ಣಿಸಿರುವ ಬಿಜೆಪಿ ಸದಸ್ಯರು ರಾಮ ಕೇವಲ ಒಂದು ಧರ್ಮಕ್ಕೆ ಸೇರಿದವನಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ತಮಿಳುನಾಡು ಮೀನಗಾರರನ್ನು ಶ್ರೀಲಂಕಾ ನೌಕಾದಳದವರು ಬಂಧಿಸಿರುವುದಕ್ಕೆ ಲೋಕಸಭೆಯಲ್ಲಿ ಡಿಎಂಕೆ ಸಂಸದರು ಗದ್ದಲ ಎಬ್ಬಿಸಿದ್ದರು.

ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಂದು ಪ್ರಾರಂಭವಾಗಿದ್ದು, ಇಂದು(ಶನಿವಾರ) ಕೊನೆಗೊಳ್ಳಲಿದೆ. ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT