<p><strong>ನವದೆಹಲಿ:</strong> ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ರಚನೆಯಾಗಿರುವ ಲೋಕಪಾಲದ ಕಾರ್ಯವ್ಯಾಪ್ತಿ ಕುರಿತು ಸಲ್ಲಿಕೆಯಾದ ದೂರುಗಳ ಕುರಿತು ಜುಲೈನಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p><p>ನ್ಯಾ. ಬಿ.ಆರ್. ಗವಾಯಿ ನೇತೃತ್ವದ ವಿಶೇಷ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು. ಪೀಠದಲ್ಲಿ ನ್ಯಾ. ಸೂರ್ಯ ಕಾಂತ್ ಮತ್ತು ನ್ಯಾ. ಅಭಯ್ ಎಸ್. ಓಕಾ ಇದ್ದರು.</p><p>‘ಇದು ಔಚಿತ್ಯದ ವಿಷಯವಾಗಿರುವುದರಿಂದ ಈ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ನಿರ್ಧರಿಸಬೇಕು’ ಎಂದು ನ್ಯಾ. ಓಕಾ ಅಭಿಪ್ರಾಯಪಟ್ಟರು.</p><p>‘ಹೈಕೋರ್ಟ್ನ ಇಬ್ಬರು ನ್ಯಾಯಮೂರ್ತಿಗಳ ವಿರುದ್ಧ ಸಲ್ಲಿಕೆಯಾದ ದೂರಿಗೆ ಸಂಬಂಧಿಸಿದಂತೆ ಜ. 27ರಂದು ಲೋಕಪಾಲ ಕುರಿತು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.</p><p> ಖಾಸಗಿ ಕಂಪನಿಯೊಂದಕ್ಕೆ ನೆರವಾದ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಪ್ರಭಾವ ಬೀರಿದ್ದು ಹಾಗೂ ಅದೇ ಹೈಕೋರ್ಟ್ನ ನ್ಯಾಯಮೂರ್ತಿಯೊಬ್ಬರು ಆ ಪ್ರಕರಣವನ್ನು ನಿರ್ವಹಿಸಿದ್ದರ ಕುರಿತು ದೂರು ದಾಖಲಾಗಿತ್ತು. ಸದ್ಯ ನ್ಯಾಯಮೂರ್ತಿಯಾಗಿರುವ ಮತ್ತು ಹಿಂದೆ ವಕೀಲರಾಗಿದ್ದವರು ವಿವಾದಿತ ಕಂಪನಿಯ ವಕೀಲರಾಗಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.</p><p>‘ನ್ಯಾಯಾಂಗದ ಸ್ವಾತಂತ್ರಕ್ಕೆ ಸಂಬಂಧಿಸಿದ್ದಾಗಿರುವ ಈ ಪ್ರಕರಣ ತೀವ್ರ ಗೊಂದಲದಿಂದ ಕೂಡಿದೆ’ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್ ಲೋಕಪಾಲದ ಆದೇಶಕ್ಕೆ ಫೆ. 20ರಂದು ತಡೆ ನೀಡಿತ್ತು. ಜತೆಗೆ ಕೇಂದ್ರ ಮತ್ತು ಲೋಕಪಾಲ ರಿಜಿಸ್ಟ್ರಾರ್ಗೆ ಹಾಗೂ ದೂರುದಾರರಿಗೆ ನೋಟಿಸ್ ಜಾರಿ ಮಾಡಿತ್ತು.</p><p>ಮಾರ್ಚ್ 18ರಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಲೋಕಪಾಲದ ಕಾರ್ಯವ್ಯಾಪ್ತಿಯ ಕುರಿತು ಪರಿಶೀಲಿಸಲಾಗುವುದು. ಜತೆಗೆ ಪ್ರಸಕ್ತ ನ್ಯಾಯಮೂರ್ತಿಗಳ ವಿರುದ್ಧ ಸಲ್ಲಿಕೆಯಾಗಿರುವ ದೂರುಗಳ ಕುರಿತೂ ಪರಿಶೀಲನೆ ನಡೆಸಲಾಗುವುದು’ ಎಂದಿತ್ತು.</p><p>ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿ, ‘ಲೋಕಪಾಲ ಮತ್ತು ಲೋಕಾಯುಕ್ತ ಕಾಯ್ದೆ 2013ರ ಅಡಿಯಲ್ಲಿ ಹೈಕೋರ್ಟ್ನ ನ್ಯಾಯಮೂರ್ತಿಗಳು ಒಳಪಡುವುದಿಲ್ಲ’ ಎಂದರು.</p><p>’ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅವರ ನಿರ್ದೇಶನದ ನಿರೀಕ್ಷೆಯಲ್ಲಿ, ದೂರುಗಳನ್ನು ಪರಿಗಣಿಸಿ ಇಂದಿನಿಂದ ನಾಲ್ಕು ವಾರಗಳಿಗೆ ಮುಂದೂಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ರಚನೆಯಾಗಿರುವ ಲೋಕಪಾಲದ ಕಾರ್ಯವ್ಯಾಪ್ತಿ ಕುರಿತು ಸಲ್ಲಿಕೆಯಾದ ದೂರುಗಳ ಕುರಿತು ಜುಲೈನಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p><p>ನ್ಯಾ. ಬಿ.ಆರ್. ಗವಾಯಿ ನೇತೃತ್ವದ ವಿಶೇಷ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು. ಪೀಠದಲ್ಲಿ ನ್ಯಾ. ಸೂರ್ಯ ಕಾಂತ್ ಮತ್ತು ನ್ಯಾ. ಅಭಯ್ ಎಸ್. ಓಕಾ ಇದ್ದರು.</p><p>‘ಇದು ಔಚಿತ್ಯದ ವಿಷಯವಾಗಿರುವುದರಿಂದ ಈ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ನಿರ್ಧರಿಸಬೇಕು’ ಎಂದು ನ್ಯಾ. ಓಕಾ ಅಭಿಪ್ರಾಯಪಟ್ಟರು.</p><p>‘ಹೈಕೋರ್ಟ್ನ ಇಬ್ಬರು ನ್ಯಾಯಮೂರ್ತಿಗಳ ವಿರುದ್ಧ ಸಲ್ಲಿಕೆಯಾದ ದೂರಿಗೆ ಸಂಬಂಧಿಸಿದಂತೆ ಜ. 27ರಂದು ಲೋಕಪಾಲ ಕುರಿತು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.</p><p> ಖಾಸಗಿ ಕಂಪನಿಯೊಂದಕ್ಕೆ ನೆರವಾದ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಪ್ರಭಾವ ಬೀರಿದ್ದು ಹಾಗೂ ಅದೇ ಹೈಕೋರ್ಟ್ನ ನ್ಯಾಯಮೂರ್ತಿಯೊಬ್ಬರು ಆ ಪ್ರಕರಣವನ್ನು ನಿರ್ವಹಿಸಿದ್ದರ ಕುರಿತು ದೂರು ದಾಖಲಾಗಿತ್ತು. ಸದ್ಯ ನ್ಯಾಯಮೂರ್ತಿಯಾಗಿರುವ ಮತ್ತು ಹಿಂದೆ ವಕೀಲರಾಗಿದ್ದವರು ವಿವಾದಿತ ಕಂಪನಿಯ ವಕೀಲರಾಗಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.</p><p>‘ನ್ಯಾಯಾಂಗದ ಸ್ವಾತಂತ್ರಕ್ಕೆ ಸಂಬಂಧಿಸಿದ್ದಾಗಿರುವ ಈ ಪ್ರಕರಣ ತೀವ್ರ ಗೊಂದಲದಿಂದ ಕೂಡಿದೆ’ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್ ಲೋಕಪಾಲದ ಆದೇಶಕ್ಕೆ ಫೆ. 20ರಂದು ತಡೆ ನೀಡಿತ್ತು. ಜತೆಗೆ ಕೇಂದ್ರ ಮತ್ತು ಲೋಕಪಾಲ ರಿಜಿಸ್ಟ್ರಾರ್ಗೆ ಹಾಗೂ ದೂರುದಾರರಿಗೆ ನೋಟಿಸ್ ಜಾರಿ ಮಾಡಿತ್ತು.</p><p>ಮಾರ್ಚ್ 18ರಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಲೋಕಪಾಲದ ಕಾರ್ಯವ್ಯಾಪ್ತಿಯ ಕುರಿತು ಪರಿಶೀಲಿಸಲಾಗುವುದು. ಜತೆಗೆ ಪ್ರಸಕ್ತ ನ್ಯಾಯಮೂರ್ತಿಗಳ ವಿರುದ್ಧ ಸಲ್ಲಿಕೆಯಾಗಿರುವ ದೂರುಗಳ ಕುರಿತೂ ಪರಿಶೀಲನೆ ನಡೆಸಲಾಗುವುದು’ ಎಂದಿತ್ತು.</p><p>ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿ, ‘ಲೋಕಪಾಲ ಮತ್ತು ಲೋಕಾಯುಕ್ತ ಕಾಯ್ದೆ 2013ರ ಅಡಿಯಲ್ಲಿ ಹೈಕೋರ್ಟ್ನ ನ್ಯಾಯಮೂರ್ತಿಗಳು ಒಳಪಡುವುದಿಲ್ಲ’ ಎಂದರು.</p><p>’ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅವರ ನಿರ್ದೇಶನದ ನಿರೀಕ್ಷೆಯಲ್ಲಿ, ದೂರುಗಳನ್ನು ಪರಿಗಣಿಸಿ ಇಂದಿನಿಂದ ನಾಲ್ಕು ವಾರಗಳಿಗೆ ಮುಂದೂಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>