ನವದೆಹಲಿ: ಬರಲಿರುವ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು 195 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಹಲವು ಹೊಸ ಮುಖಗಳಿಗೆ ಮತ್ತು ಯುವಕರಿಗೆ ಆದ್ಯತೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯಿಂದ ಸ್ಪರ್ಧಿಸಲಿದ್ದಾರೆ.
ದಿ. ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ ಅವರನ್ನು ನವದೆಹಲಿಯಿಂದ ಹಾಗೂ ಇತ್ತೀಚೆಗೆ ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡ ಕೇರಳದ ದಿ. ಎ.ಕೆ.ಆ್ಯಂಟನಿ ಪುತ್ರ ಆನಿಲ್ ಕೆ. ಆ್ಯಂಟನಿ ಅವರನ್ನು ಪತ್ತನಮಿತ್ತಿಟ್ಟ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸುವುದಾಗಿ ಘೋಷಿಸಿದೆ. ಇದರಂತೆ ಟಿಕೆಟ್ ಪಡೆದ ಪಕ್ಷದ ಪ್ರಮುಖರ ಪಟ್ಟಿ ಇಂತಿದೆ.