<p><strong>ಮುಂಬೈ:</strong> ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಧಾರ್ಮಿಕ ಗುರುತನ್ನು ಉಲ್ಲೇಖಿಸಿ, ಇಬ್ಬರು ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಬಂಧನಕ್ಕೊಳಗಾದ ವ್ಯಕ್ತಿಯ ಮನೆಯಲ್ಲಿ ‘ಒಂಟಿ ತೋಳ ದಾಳಿ’ ಮಾದರಿ ಮತ್ತು ‘ಇಸ್ಲಾಮಿಕ್ ಸ್ಟೇಟ್’ನ ಉಲ್ಲೇಖವಿರುವ ಟಿಪ್ಪಣಿಗಳು ಪತ್ತೆಯಾಗಿವೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.</p>.<p>ಜೈಬ್ ಜುಬೇರ್ ಅನ್ಸಾರಿ (31) ಬಂಧಿತ. ಹಲವಾರು ವರ್ಷಗಳಿಂದ ಅಮೆರಿಕದಲ್ಲಿ ನೆಲಸಿದ್ದ ಆರೋಪಿಯು ತೀವ್ರಗಾಮಿಯಾದಂತೆ ಕಾಣುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.</p>.<p>ಮೇಲ್ನೋಟಕ್ಕೆ ಈ ಘಟನೆ, ‘ಒಂಟಿ ತೋಳ ದಾಳಿ’ಯಂತೆ ಕಂಡುಬಂದಿದೆ ಎಂದು ರಾಜ್ಯ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ಸಂಘಟನೆ ಸಹಾಯ ಅಥವಾ ಪ್ರಚೋದನೆಯಿಲ್ಲದೆ ನಡೆಸುವ ಭಯೋತ್ಪಾದಕ ದಾಳಿಯನ್ನು ‘ಒಂಟಿ ತೋಳ ದಾಳಿ’ ಎನ್ನುತ್ತಾರೆ.</p>.<p>‘ಆರೋಪಿಯು ಮೊದಲಿಗೆ ಇಬ್ಬರು ಭದ್ರತಾ ಸಿಬ್ಬಂದಿಯೊಂದಿಗೆ ಆಸುಪಾಸಿನಲ್ಲಿ ಮಸೀದಿ ಎಲ್ಲಿದೆ ಎಂದು ಕೇಳಿದ್ದಾನೆ. ಈ ವೇಳೆ ಅವರು ತಮಗೆ ತಿಳಿದಿಲ್ಲ ಎಂದು ಉತ್ತರಿಸಿದ್ದು, ಆಗ ಆರೋಪಿ ನೀವು ಹಿಂದೂಗಳೇ ಎಂದು ಪ್ರಶ್ನಿಸಿ ಅಲ್ಲಿಂದ ತೆರಳಿದ್ದನು. ಅದಾಗಿ ಕೆಲವೇ ಕ್ಷಣದಲ್ಲಿ ವಾಪಸಾದ ಆರೋಪಿ, ತನ್ನಲ್ಲಿದ್ದ ಚಾಕುವನ್ನು ಹೊರತೆಗೆದು ಭದ್ರತಾ ಸಿಬ್ಬಂದಿಯ ಮೇಲೆ ದಾಳಿ ನಡೆಸಿದ್ದಾನೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ದಾಳಿಗೂ ಮೊದಲು ಆತ ನೀವು ಹಿಂದೂ ಹೌದೇ ಎಂದು ಭದ್ರತಾ ಸಿಬ್ಬಂದಿಯನ್ನು ಪ್ರಶ್ನಿಸಿದ್ದು, ಹಿಂದೂ ಅಲ್ಲವೆಂದರೆ ಕಲ್ಮಾ ಪಠಿಸಲು ಕೇಳಿದ್ದ. ಕಲ್ಮಾ ಪಠಿಸಲು ತಿಳಿಯದ ಅವರನ್ನು ಆರೋಪಿ ಇರಿದಿದ್ದ’ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಘಟನೆಯ ವಿಡಿಯೊ ಕೂಡ ಹರಿದಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಧಾರ್ಮಿಕ ಗುರುತನ್ನು ಉಲ್ಲೇಖಿಸಿ, ಇಬ್ಬರು ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಬಂಧನಕ್ಕೊಳಗಾದ ವ್ಯಕ್ತಿಯ ಮನೆಯಲ್ಲಿ ‘ಒಂಟಿ ತೋಳ ದಾಳಿ’ ಮಾದರಿ ಮತ್ತು ‘ಇಸ್ಲಾಮಿಕ್ ಸ್ಟೇಟ್’ನ ಉಲ್ಲೇಖವಿರುವ ಟಿಪ್ಪಣಿಗಳು ಪತ್ತೆಯಾಗಿವೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.</p>.<p>ಜೈಬ್ ಜುಬೇರ್ ಅನ್ಸಾರಿ (31) ಬಂಧಿತ. ಹಲವಾರು ವರ್ಷಗಳಿಂದ ಅಮೆರಿಕದಲ್ಲಿ ನೆಲಸಿದ್ದ ಆರೋಪಿಯು ತೀವ್ರಗಾಮಿಯಾದಂತೆ ಕಾಣುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.</p>.<p>ಮೇಲ್ನೋಟಕ್ಕೆ ಈ ಘಟನೆ, ‘ಒಂಟಿ ತೋಳ ದಾಳಿ’ಯಂತೆ ಕಂಡುಬಂದಿದೆ ಎಂದು ರಾಜ್ಯ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ಸಂಘಟನೆ ಸಹಾಯ ಅಥವಾ ಪ್ರಚೋದನೆಯಿಲ್ಲದೆ ನಡೆಸುವ ಭಯೋತ್ಪಾದಕ ದಾಳಿಯನ್ನು ‘ಒಂಟಿ ತೋಳ ದಾಳಿ’ ಎನ್ನುತ್ತಾರೆ.</p>.<p>‘ಆರೋಪಿಯು ಮೊದಲಿಗೆ ಇಬ್ಬರು ಭದ್ರತಾ ಸಿಬ್ಬಂದಿಯೊಂದಿಗೆ ಆಸುಪಾಸಿನಲ್ಲಿ ಮಸೀದಿ ಎಲ್ಲಿದೆ ಎಂದು ಕೇಳಿದ್ದಾನೆ. ಈ ವೇಳೆ ಅವರು ತಮಗೆ ತಿಳಿದಿಲ್ಲ ಎಂದು ಉತ್ತರಿಸಿದ್ದು, ಆಗ ಆರೋಪಿ ನೀವು ಹಿಂದೂಗಳೇ ಎಂದು ಪ್ರಶ್ನಿಸಿ ಅಲ್ಲಿಂದ ತೆರಳಿದ್ದನು. ಅದಾಗಿ ಕೆಲವೇ ಕ್ಷಣದಲ್ಲಿ ವಾಪಸಾದ ಆರೋಪಿ, ತನ್ನಲ್ಲಿದ್ದ ಚಾಕುವನ್ನು ಹೊರತೆಗೆದು ಭದ್ರತಾ ಸಿಬ್ಬಂದಿಯ ಮೇಲೆ ದಾಳಿ ನಡೆಸಿದ್ದಾನೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ದಾಳಿಗೂ ಮೊದಲು ಆತ ನೀವು ಹಿಂದೂ ಹೌದೇ ಎಂದು ಭದ್ರತಾ ಸಿಬ್ಬಂದಿಯನ್ನು ಪ್ರಶ್ನಿಸಿದ್ದು, ಹಿಂದೂ ಅಲ್ಲವೆಂದರೆ ಕಲ್ಮಾ ಪಠಿಸಲು ಕೇಳಿದ್ದ. ಕಲ್ಮಾ ಪಠಿಸಲು ತಿಳಿಯದ ಅವರನ್ನು ಆರೋಪಿ ಇರಿದಿದ್ದ’ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಘಟನೆಯ ವಿಡಿಯೊ ಕೂಡ ಹರಿದಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>