ಈ ವರ್ಷ ಯಾತ್ರೆಯಲ್ಲಿ ಅಮೆರಿಕ, ನೇಪಾಳ, ಸಿಂಗಪುರ, ಮಲೇಷ್ಯಾ ಮತ್ತು ದಕ್ಷಿಣ ಕೊರಿಯಾ ಪ್ರಜೆಗಳು ಭಾಗವಹಿಸಿದ್ದರು. ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್, ಬಾಲಿವುಡ್ ನಟಿ ಸಾರಾ ಅಲಿ ಖಾನ್, ಆಧ್ಯಾತ್ಮಿಕ ಗುರು ರಮಾನಂದಾಚಾರ್ಯ ಸ್ವಾಮಿ ಸೇರಿದಂತೆ ವಿವಿಧ ಕ್ಷೇತ್ರಗಳ ಹಲವು ಗಣ್ಯರು ಪವಿತ್ರ ಗುಹೆಗೆ ಭೇಟಿ ನೀಡಿದರು. ಯಾತ್ರೆ ಬಹುತೇಕ ಶಾಂತಿಯುತವಾಗಿತ್ತು.