ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ | ಹಿಂಸಾಚಾರದ ನೆಪದಲ್ಲಿ ಅಂಗಡಿಗಳ ಲೂಟಿ: 27 ಮಂದಿ ಬಂಧನ 

Last Updated 2 ಏಪ್ರಿಲ್ 2023, 4:58 IST
ಅಕ್ಷರ ಗಾತ್ರ

ಪಟ್ನಾ: ನಳಂದ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಹಿಂಸಾಚಾರ ವೇಳೆ ಹಲವಾರು ಅಂಗಡಿಗಳನ್ನು ಲೂಟಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಮ ನವಮಿ ನಿಮಿತ್ತ ಶೋಭಾ ಯಾತ್ರೆ ವೇಳೆ ಘರ್ಷಣೆ ನಡೆದಿತ್ತು. ಆರೋಪಿಗಳು ಹಿಂಸಾಚಾರದ ನೆಪದಲ್ಲಿ ಅಂಗಡಿಗಳಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡುತ್ತಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಿಂಸಾಚಾರದ ಭೀತಿಯಿಂದಾಗಿ ಅಂಗಡಿಗಳನ್ನು ವ್ಯಾಪಾರಸ್ಥರು ಹಾಗೂ ಮಾಲೀಕರು ಮುಚ್ಚಿದ್ದರು ಎಂದು ಪೊಲೀಸರು ಹೇಳಿದ್ದಾರೆ.

27 ಮಂದಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದೇವೆ. ಅಪರಾಧಿಗಳನ್ನು ಗುರುತಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ. ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು ಎಂದು ನಳಂದ ಜಿಲ್ಲಾಧಿಕಾರಿ ಶಶಾಂಕ್ ಶುಭಂಕರ್ ಮಾಹಿತಿ ನೀಡಿದ್ದಾರೆ.

ಹಿಂಸಾಚಾರದಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ತಿಗಳಿಗೆ ಹಾನಿಯಾಗಿದೆ. ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ಕ್ರಮಕೈಗೊಳ್ಳಲು ಭದ್ರತಾ ಪಡೆಗಳನ್ನು ನಿಯೋಜಿಸಿದ್ದೇವೆ ಎಂದು ನಳಂದಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಮಿಶ್ರಾ ಹೇಳಿದ್ದಾರೆ.

‘ಜಿಲ್ಲೆಯಲ್ಲಿ ಹಿಂಸಾಚಾರ ನಡೆದ ಪ್ರದೇಶದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಪಥ ಸಂಚಲನ ಸಹ ನಡೆಸಿದ್ದೇವೆ. ಜಿಲ್ಲೆಯಿಂದ ಜನರು ವಲಸೆ ಹೋಗುತ್ತಿದ್ದಾರೆ ಎಂಬ ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿದ್ದು, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ನಿಗಾ ಇಡಲಾಗುವುದು ಎಂದು ಸಸಾರಾಮ್ ಪೊಲೀಸ್ ಅಧೀಕ್ಷಕ ವಿನೀತ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT