‘ಜಿಲ್ಲೆಯಲ್ಲಿ ಹಿಂಸಾಚಾರ ನಡೆದ ಪ್ರದೇಶದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಪಥ ಸಂಚಲನ ಸಹ ನಡೆಸಿದ್ದೇವೆ. ಜಿಲ್ಲೆಯಿಂದ ಜನರು ವಲಸೆ ಹೋಗುತ್ತಿದ್ದಾರೆ ಎಂಬ ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿದ್ದು, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ನಿಗಾ ಇಡಲಾಗುವುದು ಎಂದು ಸಸಾರಾಮ್ ಪೊಲೀಸ್ ಅಧೀಕ್ಷಕ ವಿನೀತ್ ಕುಮಾರ್ ತಿಳಿಸಿದ್ದಾರೆ.