ಬೆಂಗಳೂರು: ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಖರೀದಿಗಾಗಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಪ್ಯಾಕೇಜ್ ಅಡಿ ನೀಡಲಾಗುವ ಏಪ್ರಿಲ್ ಹಾಗೂ ಮೇ ತಿಂಗಳ ಮುಂಗಡಹಣವನ್ನು ಈಗಾಗಲೇ ವರ್ಗಾವಣೆ ಮಾಡಲಾಗಿದೆ. ಕೆಲವು ಗ್ರಾಹಕರ ಖಾತೆಯಲ್ಲಿ ಹಣವು ಬಳಕೆಯಾಗದೆ ಉಳಿದಿರುವುದರಿಂದ ಜೂನ್ ತಿಂಗಳ ಹಣದ ವರ್ಗಾವಣೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ ಎಂದು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (ಎಚ್ಪಿಸಿಎಲ್) ತಿಳಿಸಿದೆ.