ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ ಸ್ವಾಸ್ಥ್ಯ‘ರಾಷ್ಟ್ರೀಯ’ ಕಾರ್ಯಕ್ರಮ ಜಾರಿಗೆ ಆಗ್ರಹ

'ಮಕ್ಕಳ ಆರೋಗ್ಯ ರಕ್ಷಣೆಗೆ ಸರ್ಕಾರ ಮುಂದಾಗಲಿ'
Last Updated 3 ಆಗಸ್ಟ್ 2018, 18:38 IST
ಅಕ್ಷರ ಗಾತ್ರ

ನವದೆಹಲಿ: ಚಿಕ್ಕಮಕ್ಕಳ ಆರೋಗ್ಯ ರಕ್ಷಣೆ ಉದ್ದೇಶದಿಂದ ಕೇಂದ್ರ ಸರ್ಕಾರ 2013ರಲ್ಲಿ ಪರಿಚಯಿಸಿರುವ ಬಾಲ ಸ್ವಾಸ್ಥ್ಯ‘ರಾಷ್ಟ್ರೀಯ’ ಕಾರ್ಯಕ್ರಮದ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಸದಸ್ಯ ಆರ್.ಧ್ರುವನಾರಾಯಣ ಆಗ್ರಹಿಸಿದರು.

ಲೋಕಸಭೆಯಲ್ಲಿ ಶುಕ್ರವಾರ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ದೇಶದಲ್ಲಿರುವ ಪ್ರತಿ ಎಂಟು ಮಕ್ಕಳಲ್ಲಿ ಒಂದು ಮಗು ನರಸಂಬಂಧಿ ದೌರ್ಬಲ್ಯದಿಂದ ನರಳುತ್ತ ಹಲವು ವೈಕಲ್ಯಗಳಿಗೆ ತುತ್ತಾಗುತ್ತಿದೆ. ಆ ಮಗು ಕಲಿಕೆಯಲ್ಲೂ ಹಿಂದುಳಿಯುವಂತಾಗಿದೆ ಎಂದು ಹೇಳಿದರು.

ಮಕ್ಕಳ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಉದ್ದೇಶಿತ ಬಾಲ ಸ್ವಾಸ್ಥ್ಯ ಕಾರ್ಯಕ್ರಮವನ್ನು ಜಾರಿಗೊಳಿಸುವಲ್ಲಿ ಕ್ರಮ ಕೈಗೊಳ್ಳಲಾಗಿಲ್ಲ. ಸಂಬಂಧಿಸಿದ ಸಚಿವಾಲಯವು ಕೂಡಲೇ ಈ ಕಾರ್ಯಕ್ರಮದ ಜಾರಿಗೆ ಮುಂದಾಗುವ ಮೂಲಕ ಮಕ್ಕಳ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT