<p><strong>ಚೆನ್ನೈ:</strong> ‘ಲೋಕಸಭೆ ಕ್ಷೇತ್ರಗಳ ಮರುವಿಂಗಡಣೆಗೆ 1971ರ ಜನಗಣತಿಯೇ ಆಧಾರ ಆಗಿರಬೇಕು’ ಎಂಬ ಹಕ್ಕೊತ್ತಾಯ ಮಂಡಿಸಲು ದಕ್ಷಿಣ ರಾಜ್ಯಗಳ ಸಂಸದರು ಮತ್ತು ಪಕ್ಷಗಳ ಪ್ರತಿನಿಧಿಗಳ ಜಂಟಿ ಕ್ರಿಯಾ ಸಮಿತಿ ರಚಿಸಬೇಕು ಎಂದು ತಮಿಳುನಾಡು ಸಲಹೆ ಮಾಡಿದೆ.</p>.<p>ಕ್ಷೇತ್ರ ಪುನರ್ವಿಂಗಡಣೆ ಕುರಿತು ಚರ್ಚೆಗೆ ಬುಧವಾರ ಇಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಕುರಿತ ನಿರ್ಣಯ ಮಂಡಿಸಿದರು.</p>.<p>1971ರ ಜನಗಣತಿಯೇ ಆಧಾರವಾಗಿರಬೇಕು ಎಂದು ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಮುಂದಿನ 30 ವರ್ಷಗಳ ಅವಧಿಗೆ ಕ್ಷೇತ್ರ ಪುನರ್ವಿಂಗಡಣೆಗೆ 1971ರ ಗಣತಿ ಅಂಕಿಅಂಶಗಳೇ ಆಧಾರ ಎಂದು ಪ್ರಧಾನಿ ಸಂಸತ್ತಿನಲ್ಲೇ ಭರವಸೆ ನೀಡಬೇಕು ಎಂದೂ ಒತ್ತಾಯಿಸಿದರು.</p>.<p>ದಕ್ಷಿಣ ರಾಜ್ಯಗಳ ಸಂಸದರು ಹಾಗೂ ವಿವಿಧ ಪಕ್ಷಗಳ ಪ್ರತಿನಿಧಿಗಳಿರುವ ಜಂಟಿ ಕ್ರಿಯಾ ಸಮಿತಿಯನ್ನು ರಚಿಸಿ, ಈ ಸಮಿತಿಯು ಬೇಡಿಕೆ ಅನುಷ್ಠಾನಕ್ಕೆ ಒತ್ತು ನೀಡಬೇಕು ಹಾಗೂ ಸಮಾಜದಲ್ಲೂ ಈ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ಮಾಡಿದರು.</p>.<p>ರಾಜ್ಯದ ಪ್ರಮುಖ ವಿರೋಧಪಕ್ಷ ಎಐಎಡಿಎಂಕೆ, ಕಾಂಗ್ರೆಸ್, ಎಡಪಕ್ಷಗಳು, ನಟ, ರಾಜಕಾರಣಿ ವಿಜಯ್ ಅವರ ಟಿವಿಕೆ ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು.</p>.<p>ಬಿಜೆಪಿ, ತಮಿಳ್ ರಾಷ್ಟ್ರೀಯ ನಾಮ್ ತಮಿಳರ್ ಕಚ್ಚಿ (ಎನ್ಟಿಕೆ), ಮಾಜಿ ಕೇಂದ್ರ ಸಚಿವ ಜಿ.ಕೆ.ವಾಸನ್ ಅವರ ತಮಿಳ್ ಮನಿಲಾ ಕಾಂಗ್ರೆಸ್ (ಮೂಪನಾರ್) ಸಭೆಯನ್ನು ಬಹಿಷ್ಕರಿಸಿದ್ದವು.</p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ, ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯಿಂದ ದಕ್ಷಿಣ ರಾಜ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಆಗುವುದಿಲ್ಲ. ಈ ವಿಷಯದಲ್ಲಿ ಸ್ಟಾಲಿನ್ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.</p>.<p>ತಮಿಳುನಾಡು ಅಲ್ಲದೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತೆಲಂಗಾಣದ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಅವರೂ ಶಾ ಹೇಳಿಕೆ ಬಗೆಗೆ ಶಂಕೆ ವ್ಯಕ್ತಪಡಿಸಿದ್ದಾರೆ.</p>.<blockquote>ಸರ್ವಪಕ್ಷ ಸಭೆಗೆ ಬಿಜೆಪಿ ಸೇರಿ ಕೆಲ ಪಕ್ಷಗಳ ಬಹಿಷ್ಕಾರ | ಈಗಿನ ಜನಸಂಖ್ಯೆ ಆಧರಿಸಿ ಪುನರ್ವಿಂಗಡಣೆಗೆ ವಿರೋಧ | ದಕ್ಷಿಣ ರಾಜ್ಯಗಳಿಗೆ ‘ಶಿಕ್ಷೆ’ ಆಗುವುದು ಬೇಡ ಎಂದು ಪ್ರತಿಪಾದನೆ</blockquote>.<div><blockquote>ಕ್ಷೇತ್ರ ಮರುವಿಂಗಡಣೆಯ ಎಂಬ ಬೆದರಿಕೆಯ ತೂಗುಗತ್ತಿ ದಕ್ಷಿಣ ರಾಜ್ಯಗಳು ಮತ್ತು ತಮಿಳುನಾಡಿನ ಮೇಲೆ ತೂಗಾಡುತ್ತಿದೆ. ಕ್ಷೇತ್ರಗಳ ಸಂಖ್ಯೆ ತಗ್ಗಿದರೆ ಪ್ರತಿಕೂಲ ಪರಿಣಾಮವಾಗಲಿದೆ.</blockquote><span class="attribution">ಎಂ.ಕೆ.ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿ </span></div>.<p><strong>ಡಿಎಂಕೆ ಕೌನ್ಸಿಲರ್ನಿಂದ ಬಳೆ ಕಳವಿಗೆ ಯತ್ನ?</strong> </p><p>ಚೆನ್ನೈ: ಹಿಂದಿ ಭಾಷೆಯ ಹೇರಿಕೆ ವಿರೋಧಿಸಿ ಪ್ರತಿಜ್ಞಾವಿಧಿ ಸ್ವೀಕರಿಸುವ ವೇಳೆ ಡಿಎಂಕೆ ನಾಯಕ ಜಾಕೀರ್ ಹುಸೇನ್ ಮಹಿಳೆಯೊಬ್ಬರು ಧರಿಸಿದ್ದ ಚಿನ್ನದ ಕಳವಿಗೆ ಯತ್ನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಈ ಆರೋಪ ಮಾಡಿದ್ದು ಪೂರಕವಾಗಿ ಬುಧವಾರ ‘ಎಕ್ಸ್’ನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಪ್ರತಿಜ್ಞಾವಿಧಿ ಸ್ವೀಕರಿಸಲು ಎಲ್ಲ ಕೈ ಮುಂದೆ ಚಾಚಿದ್ದಾಗ ವ್ಯಕ್ತಿಯೊಬ್ಬರು ಮಹಿಳೆ ಕೈನಿಂದ ಸರ ತೆಗೆಯಲು ಯತ್ನಿಸುತ್ತಿರುವುದು ವಿಡಿಯೊದಲ್ಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ‘ಲೋಕಸಭೆ ಕ್ಷೇತ್ರಗಳ ಮರುವಿಂಗಡಣೆಗೆ 1971ರ ಜನಗಣತಿಯೇ ಆಧಾರ ಆಗಿರಬೇಕು’ ಎಂಬ ಹಕ್ಕೊತ್ತಾಯ ಮಂಡಿಸಲು ದಕ್ಷಿಣ ರಾಜ್ಯಗಳ ಸಂಸದರು ಮತ್ತು ಪಕ್ಷಗಳ ಪ್ರತಿನಿಧಿಗಳ ಜಂಟಿ ಕ್ರಿಯಾ ಸಮಿತಿ ರಚಿಸಬೇಕು ಎಂದು ತಮಿಳುನಾಡು ಸಲಹೆ ಮಾಡಿದೆ.</p>.<p>ಕ್ಷೇತ್ರ ಪುನರ್ವಿಂಗಡಣೆ ಕುರಿತು ಚರ್ಚೆಗೆ ಬುಧವಾರ ಇಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಕುರಿತ ನಿರ್ಣಯ ಮಂಡಿಸಿದರು.</p>.<p>1971ರ ಜನಗಣತಿಯೇ ಆಧಾರವಾಗಿರಬೇಕು ಎಂದು ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಮುಂದಿನ 30 ವರ್ಷಗಳ ಅವಧಿಗೆ ಕ್ಷೇತ್ರ ಪುನರ್ವಿಂಗಡಣೆಗೆ 1971ರ ಗಣತಿ ಅಂಕಿಅಂಶಗಳೇ ಆಧಾರ ಎಂದು ಪ್ರಧಾನಿ ಸಂಸತ್ತಿನಲ್ಲೇ ಭರವಸೆ ನೀಡಬೇಕು ಎಂದೂ ಒತ್ತಾಯಿಸಿದರು.</p>.<p>ದಕ್ಷಿಣ ರಾಜ್ಯಗಳ ಸಂಸದರು ಹಾಗೂ ವಿವಿಧ ಪಕ್ಷಗಳ ಪ್ರತಿನಿಧಿಗಳಿರುವ ಜಂಟಿ ಕ್ರಿಯಾ ಸಮಿತಿಯನ್ನು ರಚಿಸಿ, ಈ ಸಮಿತಿಯು ಬೇಡಿಕೆ ಅನುಷ್ಠಾನಕ್ಕೆ ಒತ್ತು ನೀಡಬೇಕು ಹಾಗೂ ಸಮಾಜದಲ್ಲೂ ಈ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ಮಾಡಿದರು.</p>.<p>ರಾಜ್ಯದ ಪ್ರಮುಖ ವಿರೋಧಪಕ್ಷ ಎಐಎಡಿಎಂಕೆ, ಕಾಂಗ್ರೆಸ್, ಎಡಪಕ್ಷಗಳು, ನಟ, ರಾಜಕಾರಣಿ ವಿಜಯ್ ಅವರ ಟಿವಿಕೆ ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು.</p>.<p>ಬಿಜೆಪಿ, ತಮಿಳ್ ರಾಷ್ಟ್ರೀಯ ನಾಮ್ ತಮಿಳರ್ ಕಚ್ಚಿ (ಎನ್ಟಿಕೆ), ಮಾಜಿ ಕೇಂದ್ರ ಸಚಿವ ಜಿ.ಕೆ.ವಾಸನ್ ಅವರ ತಮಿಳ್ ಮನಿಲಾ ಕಾಂಗ್ರೆಸ್ (ಮೂಪನಾರ್) ಸಭೆಯನ್ನು ಬಹಿಷ್ಕರಿಸಿದ್ದವು.</p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ, ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯಿಂದ ದಕ್ಷಿಣ ರಾಜ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಆಗುವುದಿಲ್ಲ. ಈ ವಿಷಯದಲ್ಲಿ ಸ್ಟಾಲಿನ್ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.</p>.<p>ತಮಿಳುನಾಡು ಅಲ್ಲದೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತೆಲಂಗಾಣದ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಅವರೂ ಶಾ ಹೇಳಿಕೆ ಬಗೆಗೆ ಶಂಕೆ ವ್ಯಕ್ತಪಡಿಸಿದ್ದಾರೆ.</p>.<blockquote>ಸರ್ವಪಕ್ಷ ಸಭೆಗೆ ಬಿಜೆಪಿ ಸೇರಿ ಕೆಲ ಪಕ್ಷಗಳ ಬಹಿಷ್ಕಾರ | ಈಗಿನ ಜನಸಂಖ್ಯೆ ಆಧರಿಸಿ ಪುನರ್ವಿಂಗಡಣೆಗೆ ವಿರೋಧ | ದಕ್ಷಿಣ ರಾಜ್ಯಗಳಿಗೆ ‘ಶಿಕ್ಷೆ’ ಆಗುವುದು ಬೇಡ ಎಂದು ಪ್ರತಿಪಾದನೆ</blockquote>.<div><blockquote>ಕ್ಷೇತ್ರ ಮರುವಿಂಗಡಣೆಯ ಎಂಬ ಬೆದರಿಕೆಯ ತೂಗುಗತ್ತಿ ದಕ್ಷಿಣ ರಾಜ್ಯಗಳು ಮತ್ತು ತಮಿಳುನಾಡಿನ ಮೇಲೆ ತೂಗಾಡುತ್ತಿದೆ. ಕ್ಷೇತ್ರಗಳ ಸಂಖ್ಯೆ ತಗ್ಗಿದರೆ ಪ್ರತಿಕೂಲ ಪರಿಣಾಮವಾಗಲಿದೆ.</blockquote><span class="attribution">ಎಂ.ಕೆ.ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿ </span></div>.<p><strong>ಡಿಎಂಕೆ ಕೌನ್ಸಿಲರ್ನಿಂದ ಬಳೆ ಕಳವಿಗೆ ಯತ್ನ?</strong> </p><p>ಚೆನ್ನೈ: ಹಿಂದಿ ಭಾಷೆಯ ಹೇರಿಕೆ ವಿರೋಧಿಸಿ ಪ್ರತಿಜ್ಞಾವಿಧಿ ಸ್ವೀಕರಿಸುವ ವೇಳೆ ಡಿಎಂಕೆ ನಾಯಕ ಜಾಕೀರ್ ಹುಸೇನ್ ಮಹಿಳೆಯೊಬ್ಬರು ಧರಿಸಿದ್ದ ಚಿನ್ನದ ಕಳವಿಗೆ ಯತ್ನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಈ ಆರೋಪ ಮಾಡಿದ್ದು ಪೂರಕವಾಗಿ ಬುಧವಾರ ‘ಎಕ್ಸ್’ನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಪ್ರತಿಜ್ಞಾವಿಧಿ ಸ್ವೀಕರಿಸಲು ಎಲ್ಲ ಕೈ ಮುಂದೆ ಚಾಚಿದ್ದಾಗ ವ್ಯಕ್ತಿಯೊಬ್ಬರು ಮಹಿಳೆ ಕೈನಿಂದ ಸರ ತೆಗೆಯಲು ಯತ್ನಿಸುತ್ತಿರುವುದು ವಿಡಿಯೊದಲ್ಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>