<p>ನವದೆಹಲಿ(ಪಿಟಿಐ): ಮುಂಗಾರು ಅಧಿವೇಶನದ ಮೊದಲ ದಿನವೇ ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ.</p>.<p>ಕಾಂಗ್ರೆಸ್, ತೆಲುಗುದೇಶಂ,ಎನ್ಸಿಪಿ ಸೇರಿದಂತೆ ವಿರೋಧ ಪಕ್ಷಗಳು ಮಂಡಿಸಿದ ಅವಿಶ್ವಾಸ ಗೊತ್ತುವಳಿಯ ಮೇಲೆ ಲೋಕಸಭೆಯಲ್ಲಿ ಶುಕ್ರವಾರ ಚರ್ಚೆ ಆರಂಭವಾಗಲಿದೆ.</p>.<p>ವಿರೋಧ ಪಕ್ಷಗಳು ಬುಧವಾರ ಸಲ್ಲಿಸಿದ ಅವಿಶ್ವಾಸ ಗೊತ್ತುವಳಿಗೆ ಸಂಬಂಧಿಸಿದ ಅರ್ಜಿಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಚರ್ಚೆಗೆ ಅಂಗೀಕರಿಸಿದರು.</p>.<p>ಅವಿಶ್ವಾಸ ನಿರ್ಣಯವನ್ನು ನೂರಕ್ಕೆ ನೂರರಷ್ಟು ಸೋಲಿಸುವುದಾಗಿ ಕೇಂದ್ರ ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ. ಎನ್ಡಿಎ ಮಿತ್ರಪಕ್ಷಗಳು ಒಗ್ಗಟ್ಟಾಗಿದ್ದು ವಿರೋಧ ಪಕ್ಷಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಸಜ್ಜಾಗಿವೆ ಎಂದು ಹೇಳಿದೆ.</p>.<p>ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಬಜೆಟ್ ಅಧಿವೇಶನದಲ್ಲಿಯೇ ವಿರೋಧ ಪಕ್ಷಗಳು ನೋಟಿಸ್ ಸಲ್ಲಿಸಿದ್ದವು.ಕಲಾಪ ಸುಗಮವಾಗಿ ನಡೆಯದ ಕಾರಣ ಗೊತ್ತುವಳಿ ಚರ್ಚೆಗೆ ಬಂದಿರಲಿಲ್ಲ.</p>.<p>***</p>.<p>ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸವಿಟ್ಟಿರುವಾಗ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿ ಯಾವ ಲೆಕ್ಕ–ಅನಂತಕುಮಾರ್ ಕೇಂದ್ರ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ(ಪಿಟಿಐ): ಮುಂಗಾರು ಅಧಿವೇಶನದ ಮೊದಲ ದಿನವೇ ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ.</p>.<p>ಕಾಂಗ್ರೆಸ್, ತೆಲುಗುದೇಶಂ,ಎನ್ಸಿಪಿ ಸೇರಿದಂತೆ ವಿರೋಧ ಪಕ್ಷಗಳು ಮಂಡಿಸಿದ ಅವಿಶ್ವಾಸ ಗೊತ್ತುವಳಿಯ ಮೇಲೆ ಲೋಕಸಭೆಯಲ್ಲಿ ಶುಕ್ರವಾರ ಚರ್ಚೆ ಆರಂಭವಾಗಲಿದೆ.</p>.<p>ವಿರೋಧ ಪಕ್ಷಗಳು ಬುಧವಾರ ಸಲ್ಲಿಸಿದ ಅವಿಶ್ವಾಸ ಗೊತ್ತುವಳಿಗೆ ಸಂಬಂಧಿಸಿದ ಅರ್ಜಿಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಚರ್ಚೆಗೆ ಅಂಗೀಕರಿಸಿದರು.</p>.<p>ಅವಿಶ್ವಾಸ ನಿರ್ಣಯವನ್ನು ನೂರಕ್ಕೆ ನೂರರಷ್ಟು ಸೋಲಿಸುವುದಾಗಿ ಕೇಂದ್ರ ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ. ಎನ್ಡಿಎ ಮಿತ್ರಪಕ್ಷಗಳು ಒಗ್ಗಟ್ಟಾಗಿದ್ದು ವಿರೋಧ ಪಕ್ಷಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಸಜ್ಜಾಗಿವೆ ಎಂದು ಹೇಳಿದೆ.</p>.<p>ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಬಜೆಟ್ ಅಧಿವೇಶನದಲ್ಲಿಯೇ ವಿರೋಧ ಪಕ್ಷಗಳು ನೋಟಿಸ್ ಸಲ್ಲಿಸಿದ್ದವು.ಕಲಾಪ ಸುಗಮವಾಗಿ ನಡೆಯದ ಕಾರಣ ಗೊತ್ತುವಳಿ ಚರ್ಚೆಗೆ ಬಂದಿರಲಿಲ್ಲ.</p>.<p>***</p>.<p>ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸವಿಟ್ಟಿರುವಾಗ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿ ಯಾವ ಲೆಕ್ಕ–ಅನಂತಕುಮಾರ್ ಕೇಂದ್ರ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>