<p><strong>ನವದೆಹಲಿ:</strong> ಮೂರನೇ ಹಂತದಲ್ಲಿ 11 ರಾಜ್ಯಗಳಲ್ಲಿ, ಲೋಕಸಭೆಯ 93 ಕ್ಷೇತ್ರಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ 65ರಷ್ಟು ಮತದಾನವಾಗಿದೆ. ಈ ಮೂಲಕ ಲೋಕಸಭೆಯ ಶೇ 50ರಷ್ಟು ಅಂದರೆ 283 ಕ್ಷೇತ್ರಗಳಲ್ಲಿ ಮತದಾನ ಪೂರ್ಣಗೊಂಡಂತಾಗಿದೆ.</p>.<p>ಕೇಂದ್ರ ಸಚಿವ ಗೃಹ ಸಚಿವ ಅಮಿತ್ ಶಾ, ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ, ಜ್ಯೋತಿರಾದಿತ್ಯ ಸಿಂಧಿಯಾ ಸೇರಿ ಒಟ್ಟು 1,331 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಯಂತ್ರಗಳಲ್ಲಿ ದಾಖಲಾಯಿತು.</p>.<p>ಪಶ್ಚಿಮ ಬಂಗಾಳದಲ್ಲಿ ಅಲ್ಪಪ್ರಮಾಣದ ಹಿಂಸಾಚಾರ ಘಟನೆಗಳು ನಡೆದಿದರೆ, ರಸ್ತೆ ಅಭಿವೃದ್ಧಿಪಡಿಸದ ಧೋರಣೆಯನ್ನು ಪ್ರತಿಭಟಿಸಿ ಉತ್ತರ ಪ್ರದೇಶದ ಮೂರು ಗ್ರಾಮಗಳಲ್ಲಿ ಮತದಾರರು ಚುನಾವಣೆಯನ್ನು ಬಹಿಷ್ಕರಿಸಿದರು.</p>.<p>ಮೂರನೇ ಹಂತದ ಮತದಾನದ ವೇಳೆ, ದೇಶದಲ್ಲಿನ ಚುನಾವಣಾ ವ್ಯವಸ್ಥೆಯನ್ನು ವೀಕ್ಷಿಸಲು 23 ವಿವಿಧ ರಾಷ್ಟ್ರಗಳ 75 ಪ್ರಮುಖರು ಆರು ರಾಜ್ಯಗಳಲ್ಲಿ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದ್ದರು. ಮತಯಂತ್ರ ಹಂಚಿಕೆ, ಸಿಬ್ಬಂದಿ ನಿಯೋಜನೆ ಪ್ರಕ್ರಿಯೆಯನ್ನು ವೀಕ್ಷಿಸಿದರು.</p>.<p>ಕೇಂದ್ರ ಚುನಾವಣಾ ಆಯೋಗದ ಪ್ರಾಥಮಿಕ ಮಾಹಿತಿ ಪ್ರಕಾರ ರಾತ್ರಿ 8.30ರ ವೇಳೆಗೆ ಶೇ 61.73ರಷ್ಟು ಮತದಾನವಾಗಿದೆ. 2019ರ ಚುನಾವಣೆಯಲ್ಲಿ ಎರಡನೇ ಹಂತದಲ್ಲಿ ಶೇ 68.4ರಷ್ಟು ಮತದಾನವಾಗಿತ್ತು.</p>.<p>ಮೋದಿ ಮತದಾನ: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಗಾಂಧಿನಗರದ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.</p>.<p>ಬಳಿಕ ‘ಎಕ್ಸ್’ ಜಾಲತಾಣದಲ್ಲಿ ಈ ಕುರಿತಂತೆ ಪೋಸ್ಟ್ ಮಾಡಿದ್ದು, ‘ಜನರು ದಾಖಲೆ ಸಂಖ್ಯೆಯಲ್ಲಿ ಬಂದು ಮತ ಹಕ್ಕು ಚಲಾಯಿಸಬೇಕು. ಸಕ್ರಿಯ ಪಾಲುದಾರಿಕೆಯು ಚುನಾವಣೆಯನ್ನು ಇನ್ನಷ್ಟು ಆಕರ್ಷಕಗೊಳಿಸಲಿದೆ’ ಎಂದು ಮನವಿ ಮಾಡಿದರು.</p>.<p>ಹಿಂಸಾಚಾರ: ಪಶ್ಚಿಮ ಬಂಗಾಳದ ಮುರ್ಶಿರಾಬಾದ್, ಜಾಂಗಿಪುರ ಕ್ಷೇತ್ರದಲ್ಲಿ ಹಿಂಸಾಚಾರ ಘಟನೆಗಳು ನಡೆದಿವೆ. ನಮ್ಮ ಮತದಾರರು ಮತಗಟ್ಟೆಗೆ ಬಾರದಂತೆ ಬಿಜೆಪಿ ಕಾರ್ಯಕರ್ತರು, ಪೊಲೀಸರು ತಡೆದಿದ್ದಾರೆ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ದೂರಿದರು.</p>.<p>ಉತ್ತರ ಪ್ರದೇಶದ ಧೋರನ್ಪುರ್ನಲ್ಲಿ ರಸ್ತೆ ನಿರ್ಮಿಸದ ಜನಪ್ರತಿನಿಧಿಗಳ ಧೋರಣೆ ಖಂಡಿಸಿ ಫಿರೋಜಾಬಾದ್ ಜಿಲ್ಲೆಯ ನಾಗ್ಲಾ ಜವಾಹರ್, ನೀಮ್ ಖೇರಿಯಾ, ನಾಗ್ಲಾ ಉಮರ್ ಗ್ರಾಮಗಳಲ್ಲಿ ಜನರು ಮತದಾನ ಬಹಿಷ್ಕರಿಸಿದರು.</p>.<p>ಮಹಾರಾಷ್ಟ್ರದಲ್ಲಿ ಪವಾರ್ ಕುಟುಂಬದ ಪ್ರತಿಷ್ಠೆಯ ಕಣವಾಗಿದ್ದ ಬಾರಾಮತಿ ಕ್ಷೇತ್ರದಲ್ಲಿ ಕನಿಷ್ಠ ಅಂದರೆ ಶೇ 47.84ರಷ್ಟು ಮತದಾನವಾಗಿದೆ. ಇಲ್ಲಿ ಸಂಸದೆ ಸುಪ್ರಿಯಾ ಸುಳೆ ವಿರುದ್ಧ, ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಸ್ಪರ್ಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮೂರನೇ ಹಂತದಲ್ಲಿ 11 ರಾಜ್ಯಗಳಲ್ಲಿ, ಲೋಕಸಭೆಯ 93 ಕ್ಷೇತ್ರಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ 65ರಷ್ಟು ಮತದಾನವಾಗಿದೆ. ಈ ಮೂಲಕ ಲೋಕಸಭೆಯ ಶೇ 50ರಷ್ಟು ಅಂದರೆ 283 ಕ್ಷೇತ್ರಗಳಲ್ಲಿ ಮತದಾನ ಪೂರ್ಣಗೊಂಡಂತಾಗಿದೆ.</p>.<p>ಕೇಂದ್ರ ಸಚಿವ ಗೃಹ ಸಚಿವ ಅಮಿತ್ ಶಾ, ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ, ಜ್ಯೋತಿರಾದಿತ್ಯ ಸಿಂಧಿಯಾ ಸೇರಿ ಒಟ್ಟು 1,331 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಯಂತ್ರಗಳಲ್ಲಿ ದಾಖಲಾಯಿತು.</p>.<p>ಪಶ್ಚಿಮ ಬಂಗಾಳದಲ್ಲಿ ಅಲ್ಪಪ್ರಮಾಣದ ಹಿಂಸಾಚಾರ ಘಟನೆಗಳು ನಡೆದಿದರೆ, ರಸ್ತೆ ಅಭಿವೃದ್ಧಿಪಡಿಸದ ಧೋರಣೆಯನ್ನು ಪ್ರತಿಭಟಿಸಿ ಉತ್ತರ ಪ್ರದೇಶದ ಮೂರು ಗ್ರಾಮಗಳಲ್ಲಿ ಮತದಾರರು ಚುನಾವಣೆಯನ್ನು ಬಹಿಷ್ಕರಿಸಿದರು.</p>.<p>ಮೂರನೇ ಹಂತದ ಮತದಾನದ ವೇಳೆ, ದೇಶದಲ್ಲಿನ ಚುನಾವಣಾ ವ್ಯವಸ್ಥೆಯನ್ನು ವೀಕ್ಷಿಸಲು 23 ವಿವಿಧ ರಾಷ್ಟ್ರಗಳ 75 ಪ್ರಮುಖರು ಆರು ರಾಜ್ಯಗಳಲ್ಲಿ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದ್ದರು. ಮತಯಂತ್ರ ಹಂಚಿಕೆ, ಸಿಬ್ಬಂದಿ ನಿಯೋಜನೆ ಪ್ರಕ್ರಿಯೆಯನ್ನು ವೀಕ್ಷಿಸಿದರು.</p>.<p>ಕೇಂದ್ರ ಚುನಾವಣಾ ಆಯೋಗದ ಪ್ರಾಥಮಿಕ ಮಾಹಿತಿ ಪ್ರಕಾರ ರಾತ್ರಿ 8.30ರ ವೇಳೆಗೆ ಶೇ 61.73ರಷ್ಟು ಮತದಾನವಾಗಿದೆ. 2019ರ ಚುನಾವಣೆಯಲ್ಲಿ ಎರಡನೇ ಹಂತದಲ್ಲಿ ಶೇ 68.4ರಷ್ಟು ಮತದಾನವಾಗಿತ್ತು.</p>.<p>ಮೋದಿ ಮತದಾನ: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಗಾಂಧಿನಗರದ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.</p>.<p>ಬಳಿಕ ‘ಎಕ್ಸ್’ ಜಾಲತಾಣದಲ್ಲಿ ಈ ಕುರಿತಂತೆ ಪೋಸ್ಟ್ ಮಾಡಿದ್ದು, ‘ಜನರು ದಾಖಲೆ ಸಂಖ್ಯೆಯಲ್ಲಿ ಬಂದು ಮತ ಹಕ್ಕು ಚಲಾಯಿಸಬೇಕು. ಸಕ್ರಿಯ ಪಾಲುದಾರಿಕೆಯು ಚುನಾವಣೆಯನ್ನು ಇನ್ನಷ್ಟು ಆಕರ್ಷಕಗೊಳಿಸಲಿದೆ’ ಎಂದು ಮನವಿ ಮಾಡಿದರು.</p>.<p>ಹಿಂಸಾಚಾರ: ಪಶ್ಚಿಮ ಬಂಗಾಳದ ಮುರ್ಶಿರಾಬಾದ್, ಜಾಂಗಿಪುರ ಕ್ಷೇತ್ರದಲ್ಲಿ ಹಿಂಸಾಚಾರ ಘಟನೆಗಳು ನಡೆದಿವೆ. ನಮ್ಮ ಮತದಾರರು ಮತಗಟ್ಟೆಗೆ ಬಾರದಂತೆ ಬಿಜೆಪಿ ಕಾರ್ಯಕರ್ತರು, ಪೊಲೀಸರು ತಡೆದಿದ್ದಾರೆ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ದೂರಿದರು.</p>.<p>ಉತ್ತರ ಪ್ರದೇಶದ ಧೋರನ್ಪುರ್ನಲ್ಲಿ ರಸ್ತೆ ನಿರ್ಮಿಸದ ಜನಪ್ರತಿನಿಧಿಗಳ ಧೋರಣೆ ಖಂಡಿಸಿ ಫಿರೋಜಾಬಾದ್ ಜಿಲ್ಲೆಯ ನಾಗ್ಲಾ ಜವಾಹರ್, ನೀಮ್ ಖೇರಿಯಾ, ನಾಗ್ಲಾ ಉಮರ್ ಗ್ರಾಮಗಳಲ್ಲಿ ಜನರು ಮತದಾನ ಬಹಿಷ್ಕರಿಸಿದರು.</p>.<p>ಮಹಾರಾಷ್ಟ್ರದಲ್ಲಿ ಪವಾರ್ ಕುಟುಂಬದ ಪ್ರತಿಷ್ಠೆಯ ಕಣವಾಗಿದ್ದ ಬಾರಾಮತಿ ಕ್ಷೇತ್ರದಲ್ಲಿ ಕನಿಷ್ಠ ಅಂದರೆ ಶೇ 47.84ರಷ್ಟು ಮತದಾನವಾಗಿದೆ. ಇಲ್ಲಿ ಸಂಸದೆ ಸುಪ್ರಿಯಾ ಸುಳೆ ವಿರುದ್ಧ, ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಸ್ಪರ್ಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>