ಮಂಡಿ ಲೋಕಸಭಾ ಕ್ಷೇತ್ರದ ಜಾಖರಿ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ತಮ್ಮ ಎದುರಾಳಿ ಕಾಂಗ್ರೆಸ್ನ ವಿಕ್ರಮಾದಿತ್ಯ ಸಿಂಗ್ ವಿರುದ್ಧ ರಾಂಪುರದ ರಾಜಕುಮಾರ ಎಂದು ಕರೆದು ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದೆ ಕಂಗನಾ ಅವರ ಬಗ್ಗೆ, ‘ಅವರಿಗೆ ಬುದ್ಧಿ ನೀಡುವಂತೆ ನಾನು ಭಗವಾನ್ ರಾಮನನ್ನು ಪ್ರಾರ್ಥಿಸುತ್ತೇನೆ. ಚುನಾವಣೆಯಲ್ಲಿ ಸೋತು ದೇವ ಭೂಮಿ ಹಿಮಾಚಲದಿಂದ ಬಾಲಿವುಡ್ಗೆ ಶುದ್ಧವಾಗಿ ಹಿಂತಿರುಗುತ್ತಾರೆ ಎಂದು ಭಾವಿಸುತ್ತೇನೆ’ ಎಂದು ವಿಕ್ರಮಾದಿತ್ಯ ಸಿಂಗ್ ಹೇಳಿದ್ದರು.