<p><strong>ಚಂಡಿಗಢ</strong>: ಫಿರೋಜ್ಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೇರ್ ಸಿಂಗ್ ಘುಬಾಯ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಪಂಜಾಬ್ನ ಎಲ್ಲಾ 13 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.</p><p>ಘುಬಾಯ ಅವರು 2009ರ ಲೋಕಸಭಾ ಚುನಾವಣೆಯಲ್ಲಿ ಶಿರೋಮಣಿ ಅಕಾಲಿ ದಳದ ಟಿಕೆಟ್ನಿಂದ ಸ್ಪರ್ಧಿಸಿ ಗೆದ್ದಿದ್ದರು. 2019ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅಕಾಲಿದಳದಲ್ಲಿದ್ದಾಗ ಜಲಾಲಾಬಾದ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.</p><p>ಲೋಕಸಭಾ ಅಭ್ಯರ್ಥಿಯಾಗಿ ಘೋಷಿಸಿದ್ದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜ್ಯ ಘಟಕದ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರಿಗೆ ಘುಬಾಯ ಧನ್ಯವಾದ ತಿಳಿಸಿದ್ದಾರೆ.</p><p>ಎಎಪಿಯ ಜಗದೀಪ್ ಸಿಂಗ್ ಕಾಕಾ ಬ್ರಾರ್ ಮತ್ತು ಶಿರೋಮಣಿ ಅಕಾಲಿದಳದ ನರದೇವ್ ಸಿಂಗ್ ಬಾಬಿ ಮಾನ್ ವಿರುದ್ಧ ಘುಬಯಾ ಕಣಕ್ಕಿಳಿದಿದ್ದಾರೆ.</p><p>ಪ್ರಸ್ತುತ ಫಿರೋಜ್ಪುರ ಕ್ಷೇತ್ರವನ್ನು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಪ್ರತಿನಿಧಿಸುತ್ತಿದ್ದು, ಈ ಬಾರಿ ಸ್ಪರ್ಧಿಸದಿರಲು ಅವರು ನಿರ್ಧರಿಸಿದ್ದಾರೆ.</p><p>ಪಂಜಾಬ್ನ 13 ಕ್ಷೇತ್ರಗಳಿಗೆ ಜೂನ್ 1ರಂದು ಮತದಾನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡಿಗಢ</strong>: ಫಿರೋಜ್ಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೇರ್ ಸಿಂಗ್ ಘುಬಾಯ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಪಂಜಾಬ್ನ ಎಲ್ಲಾ 13 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.</p><p>ಘುಬಾಯ ಅವರು 2009ರ ಲೋಕಸಭಾ ಚುನಾವಣೆಯಲ್ಲಿ ಶಿರೋಮಣಿ ಅಕಾಲಿ ದಳದ ಟಿಕೆಟ್ನಿಂದ ಸ್ಪರ್ಧಿಸಿ ಗೆದ್ದಿದ್ದರು. 2019ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅಕಾಲಿದಳದಲ್ಲಿದ್ದಾಗ ಜಲಾಲಾಬಾದ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.</p><p>ಲೋಕಸಭಾ ಅಭ್ಯರ್ಥಿಯಾಗಿ ಘೋಷಿಸಿದ್ದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜ್ಯ ಘಟಕದ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರಿಗೆ ಘುಬಾಯ ಧನ್ಯವಾದ ತಿಳಿಸಿದ್ದಾರೆ.</p><p>ಎಎಪಿಯ ಜಗದೀಪ್ ಸಿಂಗ್ ಕಾಕಾ ಬ್ರಾರ್ ಮತ್ತು ಶಿರೋಮಣಿ ಅಕಾಲಿದಳದ ನರದೇವ್ ಸಿಂಗ್ ಬಾಬಿ ಮಾನ್ ವಿರುದ್ಧ ಘುಬಯಾ ಕಣಕ್ಕಿಳಿದಿದ್ದಾರೆ.</p><p>ಪ್ರಸ್ತುತ ಫಿರೋಜ್ಪುರ ಕ್ಷೇತ್ರವನ್ನು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಪ್ರತಿನಿಧಿಸುತ್ತಿದ್ದು, ಈ ಬಾರಿ ಸ್ಪರ್ಧಿಸದಿರಲು ಅವರು ನಿರ್ಧರಿಸಿದ್ದಾರೆ.</p><p>ಪಂಜಾಬ್ನ 13 ಕ್ಷೇತ್ರಗಳಿಗೆ ಜೂನ್ 1ರಂದು ಮತದಾನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>