‘ನಾವು ಈ ಹಿಂದೆ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಜೊತೆಗೆ ಮೈತ್ರಿ ಮಾಡಿಕೊಂಡಿದ್ದೆವು. ಬಿಜೆಪಿಯ ಸೇಡಿನ ರಾಜಕಾರಣ ಇವರಿಬ್ಬರಿಗೂ ಇಷ್ಟವಿಲ್ಲ. ನರೇಂದ್ರ ಮೋದಿಯವರು ಹೊರನಡೆಯುವ ಹಾದಿಯಲ್ಲಿದ್ದಾರೆ. ಈ ಇಬ್ಬರು ನಾಯಕರು ಕೇಂದ್ರದಲ್ಲಿ ಉಂಟಾಗುವ ಬದಲಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಲಾಲು ಪ್ರಸಾದ್ ಹಾಗೂ ತೇಜಸ್ವಿ ಯಾದವ್ ಅವರು ನಿತೀಶ್ ಕುಮಾರ್ ಅವರನ್ನು ಸಂಪರ್ಕಿಸಿದ್ದಾರೆಯೇ ಎನ್ನುವ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಅವರು, ‘ಯಾರು ಅವರನ್ನು ಸಂಪರ್ಕ ಮಾಡಬೇಕೋ, ಅವರು ಸಂಪರ್ಕಿಸಿ ಮಾತನಾಡುತ್ತಿದ್ದಾರೆ. ಜೂನ್ 4ರಂದು ನಿತೀಶ್ ಕುಮಾರ್ ದೊಡ್ಡ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತೇಜಸ್ವಿ ಯಾದವ್ ಹಲವು ಬಾರಿ ಹೇಳಿದ್ದಾರೆ’ ಎಂದು ನುಡಿದಿದ್ದಾರೆ.