<p><strong>ನವದೆಹಲಿ</strong>: ನಾಲ್ವರು ಕಾಂಗ್ರೆಸ್ ಸದಸ್ಯರ ಅಮಾನತು ನಿರ್ಧಾರವನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೋಮವಾರ ಹಿಂಪಡೆದಿದ್ದಾರೆ.</p>.<p>ಸದನದೊಳಗೆ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ಕಳೆದ ಸೋಮವಾರ ಕಾಂಗ್ರೆಸ್ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.</p>.<p>ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಸದನದಲ್ಲಿ ಅಂಗೀಕಾರವನ್ನು ಮಂಡಿಸಿದ ನಂತರ ಮಾಣಿಕಂ ಟಾಗೋರ್, ರಮ್ಯಾ ಹರಿದಾಸ್, ಟಿ. ಎನ್. ಪ್ರತಾಪನ್ ಮತ್ತು ಎಸ್. ಜ್ಯೋತಿಮಣಿ ಅವರ ಅಮಾನತನ್ನು ರದ್ದುಗೊಳಿಸಲಾಯಿತು.</p>.<p>ಅಮಾನತು ಹಿಂಪಡೆದ ನಂತರ, ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಬೆಲೆ ಏರಿಕೆಯ ಕುರಿತ ಚರ್ಚೆಗೆ ನಾಂದಿ ಹಾಡಿದರು.</p>.<p>ವಿರೋಧ ಪಕ್ಷಗಳ ಸದಸ್ಯರು ಎರಡೂ ಸದನಗಳಲ್ಲಿ ಸ್ಪೀಕರ್, ಸಭಾಪತಿ ಪೀಠಗಳ ಹತ್ತಿರ ಹೋಗಿ ಘೋಷಣಾ ಫಲಕ ಪ್ರದರ್ಶಿಸುವುದಿಲ್ಲ ಮತ್ತು ಸದನಗಳಲ್ಲಿ ಪ್ರತಿಭಟನೆ ನಡೆಸುವುದಿಲ್ಲವೆಂದು ಖಾತ್ರಿಪಡಿಸಿದರೆ ಮಾತ್ರ ಅಮಾನತು ಶಿಕ್ಷೆ ಹಿಂಪಡೆಯಬಹುದು ಎಂದು ಸರ್ಕಾರ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಾಲ್ವರು ಕಾಂಗ್ರೆಸ್ ಸದಸ್ಯರ ಅಮಾನತು ನಿರ್ಧಾರವನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೋಮವಾರ ಹಿಂಪಡೆದಿದ್ದಾರೆ.</p>.<p>ಸದನದೊಳಗೆ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ಕಳೆದ ಸೋಮವಾರ ಕಾಂಗ್ರೆಸ್ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.</p>.<p>ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಸದನದಲ್ಲಿ ಅಂಗೀಕಾರವನ್ನು ಮಂಡಿಸಿದ ನಂತರ ಮಾಣಿಕಂ ಟಾಗೋರ್, ರಮ್ಯಾ ಹರಿದಾಸ್, ಟಿ. ಎನ್. ಪ್ರತಾಪನ್ ಮತ್ತು ಎಸ್. ಜ್ಯೋತಿಮಣಿ ಅವರ ಅಮಾನತನ್ನು ರದ್ದುಗೊಳಿಸಲಾಯಿತು.</p>.<p>ಅಮಾನತು ಹಿಂಪಡೆದ ನಂತರ, ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಬೆಲೆ ಏರಿಕೆಯ ಕುರಿತ ಚರ್ಚೆಗೆ ನಾಂದಿ ಹಾಡಿದರು.</p>.<p>ವಿರೋಧ ಪಕ್ಷಗಳ ಸದಸ್ಯರು ಎರಡೂ ಸದನಗಳಲ್ಲಿ ಸ್ಪೀಕರ್, ಸಭಾಪತಿ ಪೀಠಗಳ ಹತ್ತಿರ ಹೋಗಿ ಘೋಷಣಾ ಫಲಕ ಪ್ರದರ್ಶಿಸುವುದಿಲ್ಲ ಮತ್ತು ಸದನಗಳಲ್ಲಿ ಪ್ರತಿಭಟನೆ ನಡೆಸುವುದಿಲ್ಲವೆಂದು ಖಾತ್ರಿಪಡಿಸಿದರೆ ಮಾತ್ರ ಅಮಾನತು ಶಿಕ್ಷೆ ಹಿಂಪಡೆಯಬಹುದು ಎಂದು ಸರ್ಕಾರ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>