ಜುಲೈನಲ್ಲಿ, ಯುರೋಪಿನ ಸಂಸತ್ನಲ್ಲಿ ಮಣಿಪುರ ಜನಾಂಗೀಯ ಹಿಂಸಾಚಾರ ಹತ್ತಿಕ್ಕಲು ಮತ್ತು ಧಾರ್ಮಿಕ ಅಲ್ಪಸಂಖ್ಯಾತರನ್ನು ರಕ್ಷಿಸಲು ಭಾರತ ಸರ್ಕಾರವು ಶೀಘ್ರ ಕ್ರಮಕೈಗೊಳ್ಳಬೇಕೆಂಬ ಒತ್ತಡ ಹೇರುವ ನಿರ್ಣಯ ಅಂಗೀಕರಿಸಲಾಗಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಭಾರತ, ‘ಜುಲೈ ನಿರ್ಣಯ ಸ್ವೀಕಾರಾರ್ಹವಲ್ಲ ಮತ್ತು ಇದು ವಸಾಹತುಶಾಹಿ ಮನಸ್ಥಿತಿಯ ಪ್ರತೀಕ’ ಎಂದು ಟೀಕಿಸಿತ್ತು.