<p><strong>ಲಖನೌ</strong>: ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಅನಾರೋಗ್ಯ ಪೀಡಿತ ತಾಯಿಯನ್ನು ಪರೀಕ್ಷಿಸಲು ಜಿಲ್ಲಾ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರನ್ನು ಪೊಲೀಸರು ಒತ್ತಾಯದಿಂದ ಕಾರಿನಲ್ಲಿ ಎಳೆದೊಯ್ದ ಘಟನೆ ನಡೆದಿದೆ.</p>.<p>ಡಾ. ರಾಹುಲ್ ಬಾಬು ರಾಜ್ಪುತ್ ಅವರನ್ನು ಒತ್ತಾಯದಿಂದ ಕರೆದೊಯ್ದ ಪೊಲೀಸರನ್ನು ಅಮಾನತು ಮಾಡಲಾಗಿದೆ ಎನ್ನಲಾಗುತ್ತಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದೆ.</p>.<p>‘ಇಲ್ಲಿನ ಕೆಲಸ ಬಿಟ್ಟು ಬರುವುದಕ್ಕೆ ಸಾಧ್ಯವಿಲ್ಲ. ತುರ್ತು ಚಿಕಿತ್ಸೆಗಾಗಿ ರೋಗಿಗಳು ಬರುತ್ತಲೇ ಇರುತ್ತಾರೆ. ಅವರ ತಾಯಿಯನ್ನು ಪರೀಕ್ಷಿಸಲು ಇತರೆ ವೈದ್ಯರನ್ನು ಕಳುಹಿಸಿವುದಾಗಿ ರಾಹುಲ್ ಅವರು ತಿಳಿಸಿದರೂ ಅವರನ್ನು ಬರುವಂತೆ ಒತ್ತಾಯಪಡಿಸಲಾಗಿದೆ. ರಾಹುಲ್ ಅವರು ಪೊಲೀಸರೊಂದಿಗೆ ಹೋಗುವುದಕ್ಕೆ ಒಪ್ಪದಿರುವುದಕ್ಕೆ ಪೊಲೀಸರು ಕೋಪಗೊಂಡಿದ್ದರು ಎನ್ನಲಾಗಿದೆ.</p>.<p>ಘಟನೆಯ ವಿರುದ್ಧ ಜಿಲ್ಲಾ ಆಸ್ಪತ್ರೆಯ ಇತರೆ ವೈದ್ಯರು ಹಾಗೂ ಸಿಬ್ಬಂದಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಇಂಥ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಕ್ರಮ ತೆಗೆದುಕೊಳ್ಳುವುದಾಗಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶದ ಇಟವಾ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಅನಾರೋಗ್ಯ ಪೀಡಿತ ತಾಯಿಯನ್ನು ಪರೀಕ್ಷಿಸಲು ಜಿಲ್ಲಾ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರನ್ನು ಪೊಲೀಸರು ಒತ್ತಾಯದಿಂದ ಕಾರಿನಲ್ಲಿ ಎಳೆದೊಯ್ದ ಘಟನೆ ನಡೆದಿದೆ.</p>.<p>ಡಾ. ರಾಹುಲ್ ಬಾಬು ರಾಜ್ಪುತ್ ಅವರನ್ನು ಒತ್ತಾಯದಿಂದ ಕರೆದೊಯ್ದ ಪೊಲೀಸರನ್ನು ಅಮಾನತು ಮಾಡಲಾಗಿದೆ ಎನ್ನಲಾಗುತ್ತಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದೆ.</p>.<p>‘ಇಲ್ಲಿನ ಕೆಲಸ ಬಿಟ್ಟು ಬರುವುದಕ್ಕೆ ಸಾಧ್ಯವಿಲ್ಲ. ತುರ್ತು ಚಿಕಿತ್ಸೆಗಾಗಿ ರೋಗಿಗಳು ಬರುತ್ತಲೇ ಇರುತ್ತಾರೆ. ಅವರ ತಾಯಿಯನ್ನು ಪರೀಕ್ಷಿಸಲು ಇತರೆ ವೈದ್ಯರನ್ನು ಕಳುಹಿಸಿವುದಾಗಿ ರಾಹುಲ್ ಅವರು ತಿಳಿಸಿದರೂ ಅವರನ್ನು ಬರುವಂತೆ ಒತ್ತಾಯಪಡಿಸಲಾಗಿದೆ. ರಾಹುಲ್ ಅವರು ಪೊಲೀಸರೊಂದಿಗೆ ಹೋಗುವುದಕ್ಕೆ ಒಪ್ಪದಿರುವುದಕ್ಕೆ ಪೊಲೀಸರು ಕೋಪಗೊಂಡಿದ್ದರು ಎನ್ನಲಾಗಿದೆ.</p>.<p>ಘಟನೆಯ ವಿರುದ್ಧ ಜಿಲ್ಲಾ ಆಸ್ಪತ್ರೆಯ ಇತರೆ ವೈದ್ಯರು ಹಾಗೂ ಸಿಬ್ಬಂದಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಇಂಥ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಕ್ರಮ ತೆಗೆದುಕೊಳ್ಳುವುದಾಗಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>