<p><strong>ನವದೆಹಲಿ</strong>: ದೇಶದಾದ್ಯಂತ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆ ಸಂಬಂಧಿಸಿ ಚೌಕಟ್ಟು ರೂಪಿಸಿದ 2006ರ ಲಿಂಗ್ಡೊ ವರದಿ ಜಾರಿಗೆ ಒತ್ತಾಯಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.</p>.<p>ಅರ್ಜಿಯು ಯಾವುದೇ ಅರ್ಹತೆ ಹೊಂದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ತಿಳಿಸಿದೆ. </p>.<p>‘ನೀವು ಇಲ್ಲಿಂದ ಹೊರಗೆ ತೆರಳಿ, ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದೀರಿ. ಇದು ಕೇವಲ ಪ್ರಚಾರಕ್ಕಾಗಿ. ಅರ್ಜಿಯೂ ಪ್ರಚಾರದ ಹಿತಾಸಕ್ತಿ ಅರ್ಜಿಯಾಗಿದೆ’ ಎಂದು ತಿಳಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅರ್ಜಿಯನ್ನು ವಜಾಗೊಳಿಸಿದರು.</p>.<p>ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರವು ಲಿಂಗ್ಡೊ ಸಮಿತಿ ರಚಿಸಿತ್ತು. ಕ್ಯಾಂಪಸ್ಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಳ್ಳುವ ಜೊತೆಗೆ ಹಣ ಹಾಗೂ ತೋಳ್ಬಲವನ್ನು ನಿರ್ಮೂಲನೆಗೊಳಿಸುವ ಗುರಿ ಹೊಂದಿತ್ತು. ಶಿಫಾರಸು ಜಾರಿ ಕೋರಿ ಶಿವಕುಮಾರ್ ತ್ರಿಪಾಠಿ ಅವರು ನ್ಯಾಯಾಲಯದಲ್ಲಿ ಪಿಐಎಲ್ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಾದ್ಯಂತ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗೆ ಸಂಬಂಧಿಸಿ ಚೌಕಟ್ಟು ರೂಪಿಸಿದ 2006ರ ಲಿಂಗ್ಡೊ ವರದಿ ಜಾರಿಗೆ ಒತ್ತಾಯಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.</p>.<p>ಅರ್ಜಿಯು ಯಾವುದೇ ಅರ್ಹತೆ ಹೊಂದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ತಿಳಿಸಿದೆ. </p>.<p>‘ನೀವು ಇಲ್ಲಿಂದ ಹೊರಗೆ ತೆರಳಿ, ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದೀರಿ. ಇದು ಕೇವಲ ಪ್ರಚಾರಕ್ಕಾಗಿ. ಅರ್ಜಿಯೂ ಪ್ರಚಾರದ ಹಿತಾಸಕ್ತಿ ಅರ್ಜಿಯಾಗಿದೆ’ ಎಂದು ತಿಳಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅರ್ಜಿಯನ್ನು ವಜಾಗೊಳಿಸಿದರು.</p>.<p>ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರವು ಲಿಂಗ್ಡೊ ಸಮಿತಿ ರಚಿಸಿತ್ತು. ಕ್ಯಾಂಪಸ್ಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಳ್ಳುವ ಜೊತೆಗೆ ಹಣ ಹಾಗೂ ತೋಳ್ಬಲವನ್ನು ನಿರ್ಮೂಲನೆಗೊಳಿಸುವ ಗುರಿ ಹೊಂದಿತ್ತು. ಶಿಫಾರಸು ಜಾರಿ ಕೋರಿ ಶಿವಕುಮಾರ್ ತ್ರಿಪಾಠಿ ಅವರು ನ್ಯಾಯಾಲಯದಲ್ಲಿ ಪಿಐಎಲ್ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>